AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ವಿಕ್ರಾಂತ್​ ರೋಣ ಗೆಟಪ್​ನಲ್ಲಿ ಕಂಗೊಳಿಸುತ್ತಿರುವ ಗಣೇಶ; ಹೇಗಿದೆ ನೋಡಿ ಸುದೀಪ್​ ಸಿನಿಮಾ ಕ್ರೇಜ್​

Ganesh Chaturthi 2021: ಕಲಾವಿದ ಯಶವಂತ ಅವರ ಕೈಚಳಕದಲ್ಲಿ ‘ವಿಕ್ರಾಂತ್​ ರೋಣ’ ಗೆಟಪ್​ನ ಆಕರ್ಷಕ ಗಣೇಶ ಮೂರ್ತಿಗಳು ಮೂಡಿಬಂದಿವೆ. ಈ ಸಿನಿಮಾ ಮೇಲೆ ಈ ಪರಿ ಕ್ರೇಜ್​ ಹೆಚ್ಚಲು ಹಲವು ಕಾರಣಗಳಿವೆ.

Vikrant Rona: ವಿಕ್ರಾಂತ್​ ರೋಣ ಗೆಟಪ್​ನಲ್ಲಿ ಕಂಗೊಳಿಸುತ್ತಿರುವ ಗಣೇಶ; ಹೇಗಿದೆ ನೋಡಿ ಸುದೀಪ್​ ಸಿನಿಮಾ ಕ್ರೇಜ್​
ವಿಕ್ರಾಂತ್​ ರೋಣ ಗೆಟಪ್​ನಲ್ಲಿ ಕಂಗೊಳಿಸುತ್ತಿರುವ ಗಣೇಶ
TV9 Web
| Edited By: |

Updated on:Sep 10, 2021 | 11:38 AM

Share

ಕೊರೊನಾ ಹಾವಳಿಯಿಂದಾಗಿ ಗಣೇಶೋತ್ಸವದ ಅದ್ದೂರಿತನಕ್ಕೆ ಕೊಂಚ ಹಿನ್ನಡೆ ಆಗಿರಬಹುದು. ಆದರೆ ಜನರ ಉತ್ಸಾಹ ಕುಗ್ಗಿಲ್ಲ. ಪ್ರತಿವರ್ಷದಂತೆ ಈ ವರ್ಷ ಕೂಡ ಗಣೇಶನ ಹಲವು ಬಗೆಯ ವಿಗ್ರಹಗಳು ರಾರಾಜಿಸುತ್ತಿವೆ. ವಿಶೇಷ ಎಂದರೆ, ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾದ ಗೆಟಪ್​ನಲ್ಲೂ ಗಣಪತಿ ಮೂರ್ತಿಗಳನ್ನು ತಯಾರಿಸಲಾಗಿದೆ. ಕಿಚ್ಚನ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಎಷ್ಟು ಕ್ರೇಜ್ ಇದೆ ಎಂಬುದಕ್ಕೆ ಇದು ಲೇಟೆಸ್ಟ್​ ಉದಾಹರಣೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳಲ್ಲಿ ಸುದೀಪ್​ ಹೇಗೆ ಪೋಸ್​ ನೀಡಿದ್ದಾರೋ ಅದೇ ರೀತಿಯಲ್ಲಿ ಗಣಪತಿ ಮೂರ್ತಿಗಳನ್ನು ತಯಾರಿಸಲಾಗಿದೆ.

ಸಿನಿಮಾ ಗೆಟಪ್​ಗಳಲ್ಲಿ ಗಣೇಶನ ವಿಗ್ರಹಗಳನ್ನು ತಯಾರಿಸುವುದು ಹೊಸದೇನಲ್ಲ. ಈ ಹಿಂದೆಯೂ ಅಂಥ ಸಂಗತಿಗಳು ನಡೆದಿದ್ದವು. ಆದರೆ ಅಷ್ಟರಮಟ್ಟಿಗೆ ಕ್ರೇಜ್​ ಸೃಷ್ಟಿ ಮಾಡುವ ಸಿನಿಮಾಗಳು ಅಪರೂಪ. ಈಗ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರ ಕೂಡ ಅಂಥದ್ದೊಂದು ಹವಾ ಸೃಷ್ಟಿ ಮಾಡಿದೆ. ಕಲಾವಿದ ಯಶವಂತ ಅವರ ಕೈಚಳಕದಲ್ಲಿ ಈ ಮೂರ್ತಿಗಳು ಮೂಡಿಬಂದಿವೆ. ಇದಲ್ಲದೇ ಇನ್ನೂ ಅನೇಕ ಬಗೆಯ ಮೂರ್ತಿಗಳನ್ನು ತಯಾರಿಸಲಾಗಿದೆ. ಕೊರೊನಾ ಲಸಿಕೆ ಹೊತ್ತ ಗಣಪ, ಬಾಡಿ ಬಿಲ್ಡರ್​ ಗಣಪ, ಬೈಕ್ ಸವಾರಿ ಮಾಡುತ್ತಿರುವ ಗಣಪ ಸೇರಿದಂತೆ ಹಲವು ವೇಷಗಳಲ್ಲಿ ಮೂರ್ತಿಗಳು ಕಂಗೊಳಿಸುತ್ತಿವೆ.

‘ವಿಕ್ರಾಂತ್​ ರೋಣ’ ಚಿತ್ರದ ಮೇಲೆ ಈ ಪರಿ ಕ್ರೇಜ್​ ಹೆಚ್ಚಲು ಹಲವು ಕಾರಣಗಳಿವೆ. ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ತೆಲುಗು ಮುಂತಾದ ಭಾಷೆಗಳಲ್ಲೂ ಈ ಚಿತ್ರ ರಿಲೀಸ್​ ಆಗಲಿದೆ. ಈಗಾಗಲೇ ಹೊರ ಬಂದಿರುವ ಟೀಸರ್​ಗಳು ಗಮನ ಸೆಳೆದಿವೆ. ಡಿಫರೆಂಟ್​ ಗೆಟಪ್​ನಲ್ಲಿ ಸುದೀಪ್​ ಕಾಣಿಸಿಕೊಳ್ಳಲಿದ್ದಾರೆ. ಆರಂಭದಿಂದಲೂ ಹೊಸಬಗೆಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ ಮೇಲೆ ಟೈಟಲ್​ ಲಾಂಚ್​ ಮಾಡಿದ್ದು ಈ ಚಿತ್ರತಂಡದ ಹೆಚ್ಚುಗಾರಿಕೆ.

‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್​ ಜೊತೆ ನಿರೂಪ್ ಭಂಡಾರಿ, ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಕಿಚ್ಚನ ಬರ್ತ್​ಡೇ (ಸೆ.2) ಪ್ರಯುಕ್ತ ಹೊಸ ಟೀಸರ್​ ಬಿಡುಗಡೆ ಆಗಿತ್ತು. ಅದಕ್ಕೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿದೆ. ಈ ಎಲ್ಲ ಕಾರಣಗಳಿಂದಾಗಿ ‘ವಿಕ್ರಾಂತ್ ರೋಣ’ ಬಗ್ಗೆ ಜನರಲ್ಲಿ ಕ್ರೇಜ್ ಹೆಚ್ಚಿದೆ.

ಇದನ್ನೂ ಓದಿ:

ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ

ಗಡಂಗ್​ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್​ ಫರ್ನಾಂಡಿಸ್​; ವಿಕ್ರಾಂತ್​ ರೋಣದಲ್ಲಿ ವಿಶೇಷ ಪಾತ್ರ

Published On - 8:44 am, Fri, 10 September 21

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ