AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್ ರೋಣ’ ಸಿನಿಮಾ ಕಡೆಯಿಂದ ಸಿಕ್ತು ಮತ್ತೊಂದು ಅಪ್​ಡೇಟ್​; ಹೊಸ ಸಾಂಗ್ ರಿಲೀಸ್​ಗೆ ಡೇಟ್ ಫಿಕ್ಸ್

‘ವಿಕ್ರಾಂತ್​ ರೋಣ’ ಸಿನಿಮಾದ ಮೊದಲ ಹಾಡು ‘ರಾ ರಾ ರಕ್ಕಮ್ಮ..’ ಸಖತ್ ಹೈಪ್ ಸೃಷ್ಟಿ ಮಾಡಿದೆ. ಈ ಲಿರಿಕಲ್ ಸಾಂಗ್ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

‘ವಿಕ್ರಾಂತ್ ರೋಣ’ ಸಿನಿಮಾ ಕಡೆಯಿಂದ ಸಿಕ್ತು ಮತ್ತೊಂದು ಅಪ್​ಡೇಟ್​; ಹೊಸ ಸಾಂಗ್ ರಿಲೀಸ್​ಗೆ ಡೇಟ್ ಫಿಕ್ಸ್
ಸುದೀಪ್
TV9 Web
| Edited By: |

Updated on: Jun 30, 2022 | 10:03 PM

Share

ಸುದೀಪ್ (Sudeep)ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್​ಗೆ ದಿನಗಣನೆ ಶುರುವಾಗಿದೆ. ಈ ಸಿನಿಮಾ ಬಗ್ಗೆ ಸೃಷ್ಟಿ ಆಗಿರುವ ಹೈಪ್ ದಿನಕಳೆದಂತೆ ಹೆಚ್ಚುತ್ತಿದೆ. ಚಿತ್ರತಂಡ ನಾನಾ ಕಡೆಗಳಲ್ಲಿ ತೆರಳಿ ಪ್ರಚಾರ ಮಾಡುತ್ತಿದೆ. ಈಗ ಚಿತ್ರತಂಡದಿಂದ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ. ‘ವಿಕ್ರಾಂತ್​ ರೋಣ’ ಸಿನಿಮಾದ (Vikrant Rona Movie) ಹೊಸ ಸಾಂಗ್ ರಿಲೀಸ್​ಗೆ ಮುಹೂರ್ತ ನಿಗದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾದ ಮೊದಲ ಹಾಡು ‘ರಾ ರಾ ರಕ್ಕಮ್ಮ..’ ಸಖತ್ ಹೈಪ್ ಸೃಷ್ಟಿ ಮಾಡಿದೆ. ಈ ಲಿರಿಕಲ್ ಸಾಂಗ್ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡಿನ ಗುಂಗು ಕಡಿಮೆ ಆಗುವ ಮೊದಲೇ ಚಿತ್ರತಂಡ ಹೊಸ ಸಾಂಗ್ ರಿಲೀಸ್ ಮಾಡುತ್ತಿದೆ. ‘Lullaby Song – Rajkumari’ ಸಾಂಗ್ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

ಇದನ್ನೂ ಓದಿ
Image
Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ
Image
Vikrant Rona: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್
Image
‘ವಿಕ್ರಾಂತ್​ ರೋಣ’ ರಿಲೀಸ್​ ಸಮಯದಲ್ಲಿ ಸುದೀಪ್​ಗೆ ಸ್ಟ್ರೆಸ್​ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

ಕನ್ನಡದಲ್ಲಿ ‘Lullaby Song – Rajkumari’ ಹಾಡು ಜುಲೈ 2ರಂದು ಸಂಜೆ 5:02 ಗಂಟೆಗೆ ರಿಲೀಸ್ ಆಗಲಿದೆ. ಮಲಯಾಳಂನಲ್ಲಿ ಜುಲೈ 3, ತೆಲುಗಿನಲ್ಲಿ ಜುಲೈ 4, ಹಿಂದಿಯಲ್ಲಿ ಜುಲೈ 5 ಹಾಗೂ ತಮಿಳಿನಲ್ಲಿ ಜುಲೈ 6ರಂದು ಸಂಜೆ 5:2ಕ್ಕೆ ಈ ಸಾಂಗ್ ಬಿಡುಗಡೆ ಆಗಲಿದೆ. ಈ ಹಾಡಿನ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದು, ‘ನನ್ನ ಫೇವರಿಟ್ ಸಾಂಗ್’ ಎಂದು ಬರೆದುಕೊಂಡಿದ್ದಾರೆ. ಈ ಕಾರಣದಿಂದಲೂ ಹಾಡಿನ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಹುಟ್ಟಿದೆ.

ಇತ್ತೀಚೆಗೆ ‘ವಿಕ್ರಾಂತ್ ರೋಣ’ ಸಿನಿಮಾದ ಟ್ರೇಲರ್ ರಿಲೀಸ್ ಆಯಿತು. ಈ ಟ್ರೇಲರ್​ ಸಾಕಷ್ಟು ಸಸ್ಪೆನ್ಸ್​ನಿಂದ ಕೂಡಿದೆ. ಸಿನಿಮಾದಲ್ಲಿ ಸುದೀಪ್ ಪೊಲೀಸ್ ಪಾತ್ರ ಮಾಡಿದ್ದಾರೆ. ಸುದೀಪ್​ ಜತೆಗೆ ನಿರೂಪ್ ಭಂಡಾರಿ ಕೂಡ ನಟಿಸಿದ್ದಾರೆ. ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಚಿತ್ರದ ಪ್ರಚಾರದ ವೇಳೆ ಕಪ್ಪುಡುಗೆ ತೊಟ್ಟು ಮಿಂಚಿದ ಜಾಕ್ವೆಲಿನ್ ಫರ್ನಾಂಡಿಸ್

‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದ ಮಧ್ಯೆ ಇಡಿ ವಿಚಾರಣೆ ಎದುರಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್​

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್