AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚನಿಗೆ ಸಲ್ಲು ಸಾಥ್​; ಹಿಂದಿಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್

Vikrant Rona: ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ.

ಕಿಚ್ಚನಿಗೆ ಸಲ್ಲು ಸಾಥ್​; ಹಿಂದಿಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 16, 2022 | 5:20 PM

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona Movie) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗುತ್ತಿದೆ. ಮೇ ಮೂರನೇ ವಾರದಿಂದ ಚಿತ್ರದ ಬಗ್ಗೆ ಹೊಸಹೊಸ ಅಪ್​ಡೇಟ್​ ನೀಡುವ ಬಗ್ಗೆ ಚಿತ್ರದ ನಿರ್ಮಾಪಕ ಜಾಕ್ ಮಂಜು (Jack Manju) ಹೇಳಿದ್ದರು. ಅಂತೆಯೇ ಇಂದು (ಮೇ 16) ಚಿತ್ರದ ಬಗ್ಗೆ ಎಗ್ಸೈಟಿಂಗ್ ಅಪ್​ಡೇಟ್​ ಸಿಕ್ಕಿದೆ. ಈ ಚಿತ್ರವನ್ನು ಹಿಂದಿಯಲ್ಲಿ ಸಲ್ಮಾನ್ ಖಾನ್ ವಿತರಣೆ ಮಾಡಲಿದ್ದಾರೆ. ಈ ಚಿತ್ರದ ಅಪ್​ಡೇಟ್​ ಕೇಳಿ ಫ್ಯಾನ್ಸ್ ಸಖತ್​ ಥ್ರಿಲ್ ಆಗಿದ್ದಾರೆ.

ಸಲ್ಮಾನ್ ಖಾನ್ ಹಾಗೂ ಸುದೀಪ್ ನಡುವೆ ಒಳ್ಳೆಯ ಗೆಳೆತನವಿದೆ. ‘ದಬಾಂಗ್ 3’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಹೀಗಾಗಿ, ಇವರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ನಂತರವೂ ಮುಂದುವರಿದಿದೆ. ಸಲ್ಮಾನ್ ಖಾನ್​ ಅವರು ಸುದೀಪ್​ಗೆ ಕಾರನ್ನು ಗಿಫ್ಟ್ ಮಾಡಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿದ್ದವು. ಈಗ ‘ವಿಕ್ರಾಂತ್ ರೋಣ’ ಚಿತ್ರವನ್ನು ಸಲ್ಲು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿದ್ದಾರೆ. ಇದರಿಂದ ಸಿನಿಮಾಗೆ ದೊಡ್ಡ ಬಲ ಸಿಕ್ಕಂತೆ ಆಗಿದೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ
Image
ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್​

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದರು.  ಈ ವಿಡಿಯೋದ ಲಿಂಕ್​​ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದ ಅವರು​ ‘ಸುದೀಪ್​ ಬೆಸ್ಟ್​ ವಿಶಸ್​’ ಎಂದು ಬರೆದುಕೊಂಡಿದ್ದರು. ಈಗ ಅವರೇ ಹಿಂದಿಯಲ್ಲಿ ಸಿನಿಮಾ ಪ್ರೆಸೆಂಟ್ ಮಾಡುತ್ತಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್​’ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

ಸುದೀಪ್​ ಅವರಿಗೆ ಬೇರೆ ಬೇರೆ ಭಾಷೆಯ ಸೆಲೆಬ್ರಿಟಿಗಳ ಜೊತೆಗೆ ನಂಟು ಇದೆ. ಆ ಎಲ್ಲ ಸೆಲೆಬ್ರಿಟಿಗಳು ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತ ಬಂದಿದ್ದಾರೆ. ಏ.2ರಂದು ಈ ಸಿನಿಮಾದ ಟೀಸರ್ ರಿಲೀಸ್​ ಆಗಿತ್ತು. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್​ ಲಾಲ್​, ಹಿಂದಿಯಲ್ಲಿ ಸಲ್ಮಾನ್​ ಖಾನ್​, ತೆಲುಗಿನಲ್ಲಿ ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ಇಂಗ್ಲಿಷ್​ನಲ್ಲಿ ವೀರೇಂದ್ರ ಸೆಹ್ವಾಗ್​ ಅವರು ಟೀಸರ್​ ಬಿಡುಗಡೆ ಮಾಡಿದ್ದರು. ಎಲ್ಲರಿಗೂ ಕಿಚ್ಚ ಸುದೀಪ್​ ಅವರು ಧನ್ಯವಾದ ಅರ್ಪಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:10 pm, Mon, 16 May 22

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ