AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​

Kichcha Sudeep: ‘ಒನ್​ ಟ್ವೆಂಟಿ 8 ಮೀಡಿಯಾ’ ಸಂಸ್ಥೆಯು ‘ವಿಕ್ರಾಂತ್​ ರೋಣ’ ಸಿನಿಮಾದ ವಿತರಣೆ ಹಕ್ಕುಗಳನ್ನು ಖರೀದಿಸಿದೆ. ಮೂಲಗಳ ಪ್ರಕಾರ 1.3 ಮಿಲಿಯನ್​ ಡಾಲರ್​, ಅಂದರೆ 10 ಕೋಟಿ ರೂಪಾಯಿಗೆ ಮಾರಾಟ ಆಗಿದೆ.

Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
ವಿಕ್ರಾಂತ್ ರೋಣ
TV9 Web
| Edited By: |

Updated on:May 08, 2022 | 11:50 AM

Share

ಕನ್ನಡ ಸಿನಿಮಾಗಳು ಹೊರ ರಾಜ್ಯ, ಹೊರ ರಾಷ್ಟ್ರಗಳಲ್ಲಿ ಸಖತ್​ ಸದ್ದು ಮಾಡುತ್ತಿವೆ. ಈಗಾಗಲೇ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಯಶಸ್ಸಿನಿಂದಾಗಿ ಸ್ಯಾಂಡಲ್​​ವುಡ್​ ಮೇಲೆ ಪರಭಾಷೆ ಮಂದಿಗೆ ಭರವಸೆ ಮೂಡಿದೆ. ಮುಂಬರುವ ಕನ್ನಡದ ಎಲ್ಲ ಬಿಗ್​ ಬಜೆಟ್​ ಸಿನಿಮಾಗಳಿಗೆ ಒಳ್ಳೆಯ ಮಾರ್ಕೆಟ್​ ಓಪನ್​ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಮಾತಿಗೆ ಪೂರಕವಾಗಿ ‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona Movie) ರಿಲೀಸ್​ಗೂ ಮುನ್ನವೇ ದೊಡ್ಡ ಮೊತ್ತದ ಬಿಸ್ನೆಸ್​ ಮಾಡಿದೆ. ಅದು ಕೂಡ ವಿದೇಶದಲ್ಲಿ ಎಂಬುದು ವಿಶೇಷ. ಹೌದು, ಕಿಚ್ಚ ಸುದೀಪ್​ (Kichcha Sudeep) ಅಭಿನಯದ ಈ ಬಹುನಿರೀಕ್ಷಿತ ಸಿನಿಮಾಗೆ ಸಖತ್​ ಡಿಮ್ಯಾಂಡ್​ ಸೃಷ್ಟಿ ಆಗಿದೆ. ವಿದೇಶದಲ್ಲಿ ವಿತರಕರು ‘ವಿಕ್ರಾಂತ್​ ರೋಣ’ ಚಿತ್ರದ ಹಕ್ಕುಗಳನ್ನು ಖರೀದಿಸುವಲ್ಲಿ ಉತ್ಸುಕತೆ ತೋರಿಸಿದ್ದಾರೆ. ಅದರ ಪರಿಣಾಮವಾಗಿ ರಿಲೀಸ್​ಗೂ ಮೊದಲೇ ಈ ಸಿನಿಮಾ ಬರೋಬ್ಬರಿ 10 ಕೋಟಿ ರೂ. ಡೀಲ್​ ನಡೆಸಿದೆ ಎಂಬ ಮಾಹಿತಿ ಕೇಳಿಬಂದಿದೆ. ಈ ವಿಷಯ ಕೇಳಿ ಕಿಚ್ಚ ಸುದೀಪ್​ ಅಭಿಮಾನಿಗಳು (Kichcha Sudeep Fans) ಸಖತ್​ ಥ್ರಿಲ್​ ಆಗಿದ್ದಾರೆ.

‘ಒನ್​ ಟ್ವೆಂಟಿ 8 ಮೀಡಿಯಾ’ ಸಂಸ್ಥೆಯು ‘ವಿಕ್ರಾಂತ್​ ರೋಣ’ ಸಿನಿಮಾದ ವಿತರಣೆ ಹಕ್ಕುಗಳನ್ನು ಖರೀದಿಸಿದೆ. ಮೂಲಗಳ ಪ್ರಕಾರ 1.3 ಮಿಲಿಯನ್​ ಡಾಲರ್​, ಅಂದರೆ 10 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತಕ್ಕೆ ವಿದೇಶದಲ್ಲಿ ಸಿನಿಮಾ ವಿತರಣೆಯ ಹಕ್ಕು ಮಾರಾಟ ಆಗಿರುವುದು ಇದೇ ಮೊದಲು ಎನ್ನಲಾಗಿದೆ. ಈ ಸಂಖ್ಯೆಗಳ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಓದಿ
Image
ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ; ಹಿಂದಿ ಬಗ್ಗೆ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿ ಸಿಎಂ ಬೊಮ್ಮಾಯಿ
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ
Image
Vikrant Rona Release Date: ಜು.28ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​; ಟೀಸರ್​ ನೋಡಿ ಸುದೀಪ್​ ಫ್ಯಾನ್ಸ್​ ಖುಷ್​
Image
Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

ರಿಲೀಸ್​ಗೂ ಮುನ್ನ ‘ವಿಕ್ರಾಂತ್​ ರೋಣ’ ಸಿನಿಮಾ ಈ ಪರಿ ಹವಾ ಸೃಷ್ಟಿ ಮಾಡಿರುವುದಕ್ಕೆ ನಿರ್ಮಾಪಕ ಜಾಕ್​ ಮಂಜು ಅವರು ಖುಷಿ ಆಗಿದ್ದಾರೆ. ‘ಈ ಸಿನಿಮಾದ ಕಥೆ ಯೂನಿವರ್ಸಲ್​ ಆಗಿದೆ. ಪ್ರಪಂಚದ ಎಲ್ಲ ಭಾಗಗಳ ಪ್ರೇಕ್ಷಕರಿಗೆ ಕಥೆಯಲ್ಲಿನ ಎಮೋಷನ್ಸ್​ ಕನೆಕ್ಟ್​ ಆಗಲಿದೆ. ಪ್ರೀ-ರಿಲೀಸ್​ ಬಿಸ್ನೆಸ್​ ಬಗ್ಗೆ ಖುಷಿ ಇದೆ. ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡುತ್ತೇವೆ’ ಎಂದು ಜಾಕ್​ ಮಂಜು ಹೇಳಿದ್ದಾರೆ. ‘ಶಾಲಿನಿ ಆರ್ಟ್ಸ್​’ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

ಮೇ 3ನೇ ವಾರದಿಂದ ‘ವಿಕ್ರಾಂತ್​ ರೋಣ’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ಸಿಗಲಿದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ‘ರಂಗಿತರಂಗ’ ಖ್ಯಾತಿಯ ಅನೂಪ್​​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕಾಡಿನ ಬೃಹತ್​ ಸೆಟ್​ಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಅದ್ದೂರಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗಿದೆ. ಜು.28ರಂದು 3ಡಿ ಅವತರಣಿಕೆಯಲ್ಲಿ ‘ವಿಕ್ರಾಂತ್​ ರೋಣ’ ಚಿತ್ರ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾವನ್ನು ಕಣ್ತುಂಬಿಕೊಳ್ಳಲು ಕಿಚ್ಚ ಸುದೀಪ್ ಅವರ ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತಿದ್ದಾರೆ.

ಈ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:50 am, Sun, 8 May 22

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ