AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Piracy: ಸರ್ಕಾರಿ ಶಾಲೆಯಲ್ಲೇ ‘ವಿಕ್ರಾಂತ್​ ರೋಣ’ ಪೈರಸಿ; ಮಕ್ಕಳಿಗೆ ಸಿನಿಮಾ ತೋರಿಸಿದ ವಿಡಿಯೋ ವೈರಲ್​

Kichcha Sudeep | Vikrant Rona: ವಸತಿ ಶಾಲೆಯ ಮಕ್ಕಳಿಗೆ ಅಲ್ಲಿನ ಸಿಬ್ಬಂದಿಯೇ ಪೈರಸಿ ಸಿನಿಮಾ ತೋರಿಸಿದ್ದಾರೆ ಎನ್ನಲಾಗಿದೆ. ಮಕ್ಕಳೆಲ್ಲರೂ ‘ವಿಕ್ರಾಂತ್​ ರೋಣ’ ಚಿತ್ರ ವೀಕ್ಷಿಸುತ್ತಿರುವ ವಿಡಿಯೋ ವೈರಲ್​ ಆಗಿದೆ.

Vikrant Rona Piracy: ಸರ್ಕಾರಿ ಶಾಲೆಯಲ್ಲೇ ‘ವಿಕ್ರಾಂತ್​ ರೋಣ’ ಪೈರಸಿ; ಮಕ್ಕಳಿಗೆ ಸಿನಿಮಾ ತೋರಿಸಿದ ವಿಡಿಯೋ ವೈರಲ್​
ಕಿಚ್ಚ ಸುದೀಪ್
TV9 Web
| Edited By: |

Updated on: Jul 31, 2022 | 5:55 PM

Share

ಪೈರಸಿ ಪಿಡುಗಿನ ವಿರುದ್ಧ ಚಿತ್ರರಂಗ ಫೈಟ್​ ಮಾಡುತ್ತಿದೆ. ಸಿನಿಮಾವನ್ನು ಪೈರಸಿ ಮಾಡುವುದು ಮತ್ತು ಅದನ್ನು ನೋಡುವುದು ಕೂಡ ತಪ್ಪು ಎಂಬ ತಿಳಿವಳಿಕೆ ಎಲ್ಲರಲ್ಲೂ ಮೂಡಬೇಕಿದೆ. ಸರಿ-ತಪ್ಪುಗಳ ಬಗ್ಗೆ ಮಕ್ಕಳಿಗೂ ಜಾಗೃತಿ ಮೂಡಿಸುವುದು ಅತ್ಯಗತ್ಯ. ಆದರೆ ಸರ್ಕಾರಿ ಶಾಲೆಯಲ್ಲೇ ವಿಕ್ರಾಂತ್ ರೋಣ (Vikrant Rona) ಸಿನಿಮಾ ಪೈರಸಿ ಆಗಿರುವುದು ವಿಪರ್ಯಾಸ! ಮುಳಬಾಗಿಲು ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿಗಳಿಗೆ ‘ವಿಕ್ರಾಂತ್​ ರೋಣ’ ಸಿನಿಮಾದ ಪೈರಸಿ (Vikrant Rona Piracy) ಕಾಪಿಯನ್ನು ತೋರಿಸಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ ತಪ್ಪಿತಸ್ಥರು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಈ ಕೃತ್ಯ ಎಸಗಿದವರು ಕ್ಷಮೆ ಕೇಳಬೇಕು, ಇಲ್ಲವೇ ಕಾನೂನಿನ ಪ್ರಕಾರ ಶಿಕ್ಷೆ ಪಡೆಯಬೇಕು ಎಂದು ಕಿಚ್ಚ ಸುದೀಪ್​ (Kichcha Sudeep) ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.

ಜುಲೈ 28ರಂದು ‘ವಿಕ್ರಾಂತ್​ ರೋಣ’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಯಿತು. ಮೊದಲ ದಿನ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಕ್ಕಿತು. ಎರಡನೇ ದಿನವಾದ ಶುಕ್ರವಾರ ಹಾಗೂ ವೀಕೆಂಡ್​ ದಿನಗಳಲ್ಲಿ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ‘ವಿಕ್ರಾಂತ್​ ರೋಣ’ ಸಿನಿಮಾವನ್ನು ವೀಕ್ಷಿಸಿದ್ದಾರೆ. ಆದರೆ ಅದರ ನಡುವೆಯೇ ಪೈರಸಿ ಕಾಟ ತಲೆದೂರಿದೆ. ಚಿತ್ರದ ನಕಲಿ ಪ್ರತಿ ಅನೇಕ ಕಡೆಗಳಲ್ಲಿ ಓಡಾಡುತ್ತಿದೆ.

ವಸತಿ ಶಾಲೆಯ ಮಕ್ಕಳಿಗೆ ಅಲ್ಲಿನ ಸಿಬ್ಬಂದಿಯೇ ಪೈರಸಿ ಸಿನಿಮಾ ತೋರಿಸಿದ್ದಾರೆ ಎನ್ನಲಾಗಿದೆ. ಮಕ್ಕಳೆಲ್ಲರೂ ‘ವಿಕ್ರಾಂತ್​ ರೋಣ’ ಚಿತ್ರ ವೀಕ್ಷಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಶಾಲೆಯ ಸಿಬ್ಬಂದಿಗೆ ಕಿಚ್ಚ ಸುದೀಪ್​ ಅಭಿಮಾನಿಗಳು ಕರೆಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ತಪ್ಪು ಮಾಡಿದವರು ವಿಡಿಯೋ ಮೂಲಕ ಕ್ಷಮೆ ಯಾಚಿಸಬೇಕು ಅಥವಾ ಕಾನೂನಿನ ಕಠಿಣ ಕ್ರಮ ಎದುರಿಸಲು ಸಿದ್ಧರಾಗಬೇಕು ಎಂದು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
Image
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Image
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Image
Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ
Image
Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ

ಅನೂಪ್​ ಭಂಡಾರಿ ಅವರು ‘ವಿಕ್ರಾಂತ್ ರೋಣ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅದ್ದೂರಿಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​, ನೀತಾ ಅಶೋಕ್​ ಮುಂತಾದವರು ಸುದೀಪ್​ ಜೊತೆ ನಟಿಸಿದ್ದಾರೆ. ಎಲ್ಲ ವಯೋಮಾನದ ಪ್ರೇಕ್ಷಕರಿಗೆ ಈ ಚಿತ್ರ ಇಷ್ಟ ಆಗುತ್ತಿದೆ. ಮಕ್ಕಳಿಗೆ ಹೆಚ್ಚು ಇಷ್ಟ ಆಗುತ್ತಿದೆ. ಆ ಕಾರಣದಿಂದಲೂ ‘ವಿಕ್ರಾಂತ್​ ರೋಣ’ನ ಹೈಪ್​ ಹೆಚ್ಚಾಗಿದೆ. ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ, ಮಲಯಾಳಂ ಮುಂತಾದ ಭಾಷೆಗಳಿಗೆ ಡಬ್​ ಆಗಿಯೂ ಈ ಸಿನಿಮಾ ರಿಲೀಸ್​ ಆಗಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್