AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಪ್ಲ್ಯಾನ್​ನಲ್ಲಿ ದೊಡ್ಡ ಬದಲಾವಣೆ; ಒಟಿಟಿ ಆಫರ್​ ಬೆನ್ನಲ್ಲೇ ಟೀಸರ್​ ರಿಲೀಸ್​ ಮುಂದೂಡಿಕೆ?

Vikrant Rona Movie: ಮೊದಲಿನ ಪ್ಲ್ಯಾನ್​ ಪ್ರಕಾರವೇ ನಡೆದರೆ ಫೆ.24ರಂದು ‘ವಿಕ್ರಾಂತ್​ ರೋಣ’ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಈ ನಡುವೆ ಚಿತ್ರದ ಬಗ್ಗೆ ಹೊಸ ಹೊಸ ಮಾಹಿತಿ ಕೇಳಿಬಂದಿದೆ.

‘ವಿಕ್ರಾಂತ್​ ರೋಣ’ ಪ್ಲ್ಯಾನ್​ನಲ್ಲಿ ದೊಡ್ಡ ಬದಲಾವಣೆ; ಒಟಿಟಿ ಆಫರ್​ ಬೆನ್ನಲ್ಲೇ ಟೀಸರ್​ ರಿಲೀಸ್​ ಮುಂದೂಡಿಕೆ?
‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಕಿಚ್ಚ ಸುದೀಪ್​, ಜಾಕ್ವೆಲಿನ್​ ಫರ್ನಾಂಡಿಸ್​
TV9 Web
| Edited By: |

Updated on: Jan 06, 2022 | 2:43 PM

Share

ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​ ಪ್ರಕರಣಗಳ (Omicron Cases in India) ಕಾರಣದಿಂದ ಎಲ್ಲ ಉದ್ಯಮಗಳು ಆತಂಕಕ್ಕೆ ಒಳಗಾಗಿವೆ. ಚಿತ್ರರಂಗ ಕೂಡ ಅನಿಶ್ಚಿತತೆಯಲ್ಲಿ ಕಾಲ ಕಳೆಯುವಂತಾಗಿದೆ. ದೊಡ್ಡ ದೊಡ್ಡ ಸಿನಿಮಾಗಳು ಕೂಡ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಳ್ಳುತ್ತಿವೆ. ತೆಲುಗಿನಲ್ಲಿ ‘ಆರ್​ಆರ್​ಆರ್​’ ಹಾಗೂ ‘ರಾಧೆ ಶ್ಯಾಮ್​’ ಚಿತ್ರಗಳ ರಿಲೀಸ್​ ಡೇಟ್​ ಈಗಾಗಲೇ ಪೋಸ್ಟ್​ಪೋನ್​ ಆಗಿದೆ. ಕನ್ನಡದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ವಿಕ್ರಾಂತ್​ ರೋಣ’ (Vikrant Rona Movie) ಮೇಲೆ ಎಲ್ಲರ ಗಮನ ನೆಟ್ಟಿದೆ. ಸುದೀಪ್​ (Kichcha Sudeep) ಅಭಿನಯದ ಈ ಸಿನಿಮಾ ಬಗ್ಗೆ ಕೆಲವು ಇಂಟರೆಸ್ಟಿಂಗ್​ ವಿಚಾರಗಳು ಕೇಳಿಬರುತ್ತಿವೆ. ಈ ಚಿತ್ರತಂಡ ಕೂಡ ಕೆಲವು ಪ್ಲ್ಯಾನ್​ಗಳನ್ನು ಬದಲಾಯಿಸಿಕೊಳ್ಳುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಒಟಿಟಿ ಪ್ಲಾಟ್​ಫಾರ್ಮ್​ಗಳಿಂದ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ ಎಂಬ ಮಾತು ಕೇಳಿಬಂದಿದೆ.

‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಬಂಡವಾಳ ಹೂಡಿದ್ದಾರೆ. ಮುಖ್ಯಪಾತ್ರದಲ್ಲಿ ಕಿಚ್ಚ ಸುದೀಪ್​, ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಫೆ.3ರಂದು ವಿಶ್ವಾದ್ಯಂತ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಲು ಸಿದ್ಧತೆ ನಡೆಯುತ್ತಿತ್ತು. ಆದರೆ ಕೊವಿಡ್​ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿರುವುದರಿಂದ ತಂಡದ ಪ್ಲ್ಯಾನ್​ ಬದಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

ಸದ್ಯಕ್ಕೆ ‘ವಿಕ್ರಾಂತ್​ ರೋಣ’ ಟೀಸರ್​ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎನ್ನಲಾಗಿದೆ. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾದ ಪ್ರಸಾರ ಹಕ್ಕುಗಳನ್ನು ಖರೀದಿಸಲು ದೊಡ್ಡ ದೊಡ್ಡ ಒಟಿಟಿ ಸಂಸ್ಥೆಗಳು ಮುಂದೆ ಬಂದಿವೆ. ಒಳ್ಳೆಯ ಮೊತ್ತಕ್ಕೆ ಆಫರ್​ ಮಾಡಲಾಗುತ್ತಿದೆಯಂತೆ. ಆದರೆ ಈ ಬಗ್ಗೆ ಚಿತ್ರತಂಡ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಈ ಮೊದಲಿನ ಪ್ಲ್ಯಾನ್​ ಪ್ರಕಾರವೇ ನಡೆದರೆ ಫೆ.24ರಂದು ‘ವಿಕ್ರಾಂತ್​ ರೋಣ’ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

ಬೃಹತ್​ ಸೆಟ್​ಗಳನ್ನು ನಿರ್ಮಿಸಿ ‘ವಿಕ್ರಾಂತ್​ ರೋಣ’ ಚಿತ್ರೀಕರಣ ಮಾಡಲಾಗಿದೆ. ಈ ಚಿತ್ರ 3ಡಿ ವರ್ಷನ್​ನಲ್ಲಿಯೂ ಮೂಡಿಬರುತ್ತಿದೆ. ಹಾಗಾಗಿ ಥಿಯೇಟರ್​ನಲ್ಲಿ ರಿಲೀಸ್​ ಮಾಡುವುದೇ ಚಿತ್ರತಂಡದ ಮೊದಲ ಆದ್ಯತೆ ಆಗಿರಲಿದೆ. ಸುದೀಪ್​ ಕೂಡ ಈ ಸಿನಿಮಾ ಬಗ್ಗೆ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್​ಗಳು ಗಮನ ಸೆಳೆದಿವೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಟೈಟಲ್​ ಲಾಂಚ್​ ಮಾಡಿದ್ದು ಈ ಸಿನಿಮಾದ ವಿಶೇಷವಾಗಿತ್ತು.

ಇದನ್ನೂ ಓದಿ:

ಸುದೀಪ್​ ಬಾಡಿಗಾರ್ಡ್​ಗೆ ವಿಡಿಯೋ ಕಾಲ್​ ಮಾಡಿ ಕನ್ನಡದಲ್ಲಿ ಮಾತಾಡಿದ ದೀಪಿಕಾ; ಇದಕ್ಕಿದೆ ವಿಶೇಷ ಕಾರಣ

ಪ್ರೇಕ್ಷಕರಿಗೆ 10 ಕೋಟಿ ರೂ. ವಾಪಸ್​ ನೀಡಬೇಕು ಆರ್​ಆರ್​ಆರ್​ ನಿರ್ಮಾಪಕರು; ಹೀಗಾದ್ರೆ ಚಿತ್ರದ ಭವಿಷ್ಯ ಏನು?

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ