AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ವಿಕ್ರಾಂತ್​ ರೋಣ’ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಶುರು; ಕಿಚ್ಚನ ಅಭಿಮಾನಿಗಳಿಗೆ ಸೂಪರ್​ ಸಂಡೆ

Vikrant Rona Ticket Booking: ಕಿಚ್ಚ ಸುದೀ​ಪ್​ ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಚಿತ್ರದ ಕ್ರೇಜ್​ ಜೋರಾಗಿದೆ. ಬಿಡುಗಡೆಗೆ ನಾಲ್ಕು ದಿನ ಇರುವಾಗಲೇ ಮುಂಗಡ ಟಿಕೆಟ್​ ಬುಕಿಂಗ್​ ಆರಂಭ ಆಗಿದೆ.

Kichcha Sudeep: ‘ವಿಕ್ರಾಂತ್​ ರೋಣ’ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಶುರು; ಕಿಚ್ಚನ ಅಭಿಮಾನಿಗಳಿಗೆ ಸೂಪರ್​ ಸಂಡೆ
ಕಿಚ್ಚ ಸುದೀಪ್
TV9 Web
| Edited By: |

Updated on: Jul 24, 2022 | 12:00 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರ ಮುಂಚೂಣಿಯಲ್ಲಿದೆ. ಈ ಸಿನಿಮಾ ನೋಡಲು ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಮೊದಲ ದಿನ ಮೊದಲ ಶೋ ನೋಡಬೇಕು ಎಂಬ ಆಸೆ ಎಲ್ಲರಿಗೂ ಇದೆ. ಆದಷ್ಟು ಬೇಗ ಟಿಕೆಟ್​ ಬುಕ್​ ಮಾಡಬೇಕು ಎಂದುಕೊಂಡು ಕಾಯುತ್ತಿದ್ದ ಸಿನಿಪ್ರಿಯರಿಗೆ ಕಿಚ್ಚ ಸುದೀಪ್ (Kichcha Sudeep)​ ಕಡೆಯಿಂದ ಈಗ ಗುಡ್​ ನ್ಯೂಸ್​ ಸಿಕ್ಕಿದೆ. ಭಾನುವಾರ (ಜುಲೈ 24) ಮಧ್ಯಾಹ್ನ 12 ಗಂಟೆಯಿಂದ ಮುಂಗಡ ಟಿಕೆಟ್​ ಬುಕಿಂಗ್ (Vikrant Rona Ticket Booking) ಶುರುವಾಗಿದೆ. ಕನ್ನಡ ವರ್ಷನ್​ ಬುಕಿಂಗ್​ಗೆ ಮೊದಲು ಅವಕಾಶ ನೀಡಲಾಗಿದೆ. ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಕಾಯ್ದಿರಿಸಲು ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ಜುಲೈ 28ರಂದು ‘ವಿಕ್ರಾಂತ್​ ರೋಣ’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ‘ವಿಕ್ರಾಂತ್​ ರೋಣ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅವರು ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬೃಹತ್​ ಸೆಟ್​ಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಸಿನಿಮಾ 3ಡಿ ಅವತರಣಿಕೆಯಲ್ಲಿ ಮೂಡಿಬರುತ್ತಿರುವುದು ವಿಶೇಷ. ಆ ಕಾರಣದಿಂದಲೂ ಅಭಿಮಾನಿಗಳ ವಲಯದಲ್ಲಿ ಸಖತ್​ ಹೈಪ್​ ಸೃಷ್ಟಿ ಆಗಿದೆ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿರುವುದು ಮಾತ್ರವಲ್ಲದೇ, ಒಂದು ಪ್ರಮುಖ ದೃಶ್ಯದಲ್ಲೂ ನಟಿಸಿದ್ದಾರೆ. ‘ರಾ ರಾ ರಕ್ಕಮ್ಮ..’ ಸಾಂಗ್​ ಈಗಾಗಲೇ ಸೂಪರ್​ ಹಿಟ್​ ಆಗಿದೆ. ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಲು ಈ ಹಾಡಿನ ಕೊಡುಗೆ ದೊಡ್ಡದಿದೆ. ನಿರೂಪ್​ ಭಂಡಾರಿ, ನೀತಾ ಅಶೋಕ್​ ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಮಾತ್ರ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ಮಲಯಾಳಂ, ತೆಲುಗು ಮುಂತಾದ ಭಾಷೆಗಳಿಗೆ ‘ವಿಕ್ರಾಂತ್​ ರೋಣ’ ಡಬ್​ ಆಗಿದೆ. ವಿಶ್ವಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಚಿತ್ರವನ್ನು ಭರ್ಜರಿಯಾಗಿ ಬರಮಾಡಿಕೊಳ್ಳಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಎಲ್ಲ ಥಿಯೇಟರ್​ಗಳ ಮುಂಭಾಗದಲ್ಲೂ ಸುದೀಪ್​ ಅವರ ಕಟೌಟ್​ಗಳು ರಾರಾಜಿಸುತ್ತಿವೆ. ಕೆಲವು ಕಡೆಗಳಲ್ಲಿ ಸುದೀಪ್​ ಮತ್ತು ಪುನೀತ್​ ಅವರ ಜೋಡಿ ಕಟೌಟ್​ ನಿಲ್ಲಿಸಲಾಗುತ್ತಿರುವುದು ವಿಶೇಷ.

Follow Us
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ