AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ವಿಕ್ರಾಂತ್​ ರೋಣ’ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಶುರು; ಕಿಚ್ಚನ ಅಭಿಮಾನಿಗಳಿಗೆ ಸೂಪರ್​ ಸಂಡೆ

Vikrant Rona Ticket Booking: ಕಿಚ್ಚ ಸುದೀ​ಪ್​ ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಚಿತ್ರದ ಕ್ರೇಜ್​ ಜೋರಾಗಿದೆ. ಬಿಡುಗಡೆಗೆ ನಾಲ್ಕು ದಿನ ಇರುವಾಗಲೇ ಮುಂಗಡ ಟಿಕೆಟ್​ ಬುಕಿಂಗ್​ ಆರಂಭ ಆಗಿದೆ.

Kichcha Sudeep: ‘ವಿಕ್ರಾಂತ್​ ರೋಣ’ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಶುರು; ಕಿಚ್ಚನ ಅಭಿಮಾನಿಗಳಿಗೆ ಸೂಪರ್​ ಸಂಡೆ
ಕಿಚ್ಚ ಸುದೀಪ್
TV9 Web
| Edited By: |

Updated on: Jul 24, 2022 | 12:00 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರ ಮುಂಚೂಣಿಯಲ್ಲಿದೆ. ಈ ಸಿನಿಮಾ ನೋಡಲು ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಮೊದಲ ದಿನ ಮೊದಲ ಶೋ ನೋಡಬೇಕು ಎಂಬ ಆಸೆ ಎಲ್ಲರಿಗೂ ಇದೆ. ಆದಷ್ಟು ಬೇಗ ಟಿಕೆಟ್​ ಬುಕ್​ ಮಾಡಬೇಕು ಎಂದುಕೊಂಡು ಕಾಯುತ್ತಿದ್ದ ಸಿನಿಪ್ರಿಯರಿಗೆ ಕಿಚ್ಚ ಸುದೀಪ್ (Kichcha Sudeep)​ ಕಡೆಯಿಂದ ಈಗ ಗುಡ್​ ನ್ಯೂಸ್​ ಸಿಕ್ಕಿದೆ. ಭಾನುವಾರ (ಜುಲೈ 24) ಮಧ್ಯಾಹ್ನ 12 ಗಂಟೆಯಿಂದ ಮುಂಗಡ ಟಿಕೆಟ್​ ಬುಕಿಂಗ್ (Vikrant Rona Ticket Booking) ಶುರುವಾಗಿದೆ. ಕನ್ನಡ ವರ್ಷನ್​ ಬುಕಿಂಗ್​ಗೆ ಮೊದಲು ಅವಕಾಶ ನೀಡಲಾಗಿದೆ. ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಕಾಯ್ದಿರಿಸಲು ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ಜುಲೈ 28ರಂದು ‘ವಿಕ್ರಾಂತ್​ ರೋಣ’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ‘ವಿಕ್ರಾಂತ್​ ರೋಣ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅವರು ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬೃಹತ್​ ಸೆಟ್​ಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಸಿನಿಮಾ 3ಡಿ ಅವತರಣಿಕೆಯಲ್ಲಿ ಮೂಡಿಬರುತ್ತಿರುವುದು ವಿಶೇಷ. ಆ ಕಾರಣದಿಂದಲೂ ಅಭಿಮಾನಿಗಳ ವಲಯದಲ್ಲಿ ಸಖತ್​ ಹೈಪ್​ ಸೃಷ್ಟಿ ಆಗಿದೆ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿರುವುದು ಮಾತ್ರವಲ್ಲದೇ, ಒಂದು ಪ್ರಮುಖ ದೃಶ್ಯದಲ್ಲೂ ನಟಿಸಿದ್ದಾರೆ. ‘ರಾ ರಾ ರಕ್ಕಮ್ಮ..’ ಸಾಂಗ್​ ಈಗಾಗಲೇ ಸೂಪರ್​ ಹಿಟ್​ ಆಗಿದೆ. ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಲು ಈ ಹಾಡಿನ ಕೊಡುಗೆ ದೊಡ್ಡದಿದೆ. ನಿರೂಪ್​ ಭಂಡಾರಿ, ನೀತಾ ಅಶೋಕ್​ ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಮಾತ್ರ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ಮಲಯಾಳಂ, ತೆಲುಗು ಮುಂತಾದ ಭಾಷೆಗಳಿಗೆ ‘ವಿಕ್ರಾಂತ್​ ರೋಣ’ ಡಬ್​ ಆಗಿದೆ. ವಿಶ್ವಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಚಿತ್ರವನ್ನು ಭರ್ಜರಿಯಾಗಿ ಬರಮಾಡಿಕೊಳ್ಳಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಎಲ್ಲ ಥಿಯೇಟರ್​ಗಳ ಮುಂಭಾಗದಲ್ಲೂ ಸುದೀಪ್​ ಅವರ ಕಟೌಟ್​ಗಳು ರಾರಾಜಿಸುತ್ತಿವೆ. ಕೆಲವು ಕಡೆಗಳಲ್ಲಿ ಸುದೀಪ್​ ಮತ್ತು ಪುನೀತ್​ ಅವರ ಜೋಡಿ ಕಟೌಟ್​ ನಿಲ್ಲಿಸಲಾಗುತ್ತಿರುವುದು ವಿಶೇಷ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್