AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಸ್ಪೈಸಿ ಆಗಿದೆ ‘ರಾ ರಾ ರಕ್ಕಮ್ಮ’ ಸಾಂಗ್; ಹೆಚ್ಚಿತು ‘ವಿಕ್ರಾಂತ್ ರೋಣ’ ಚಿತ್ರದ ಮೈಲೇಜ್

Ra Ra Rakkamma Song: ಸಾಂಗ್ ಹಿಟ್ ಆದರೆ ಚಿತ್ರದ ಮೈಲೇಜ್ ಹೆಚ್ಚುತ್ತದೆ. ಈ ಮೊದಲು ಈ ರೀತಿ ಆದ ಸಾಕಷ್ಟು ಉದಾಹರಣೆಗಳು ಇವೆ. ಈಗಾಗಲೇ ‘ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಸಖತ್ ಸ್ಪೈಸಿ ಆಗಿದೆ ‘ರಾ ರಾ ರಕ್ಕಮ್ಮ’ ಸಾಂಗ್; ಹೆಚ್ಚಿತು ‘ವಿಕ್ರಾಂತ್ ರೋಣ’ ಚಿತ್ರದ ಮೈಲೇಜ್
‘ರಕ್ಕಮ್ಮ’ ಹಾಡಿನಲ್ಲಿ ಕಿಚ್ಚ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್
ರಾಜೇಶ್ ದುಗ್ಗುಮನೆ
|

Updated on:May 23, 2022 | 3:53 PM

Share

ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಇಂದು ವಿಶೇಷ ದಿನ. ಟೀಸರ್ ಹಾಗೂ ಪೋಸ್ಟರ್ ಮೂಲಕ ಗಮನ ಸೆಳೆದ ‘ವಿಕ್ರಾಂತ್ ರೋಣ’ ಸಿನಿಮಾದ  (Vikrant Rona Movie) ‘ರಾ ರಾ ರಕ್ಕಮ್ಮ..’ ಹಾಡಿನ (Ra Ra Rakkamma Song) ಲಿರಿಕಲ್ ವಿಡಿಯೋ ರಿಲೀಸ್ ಆಗಿದೆ. ಇದು ಅವರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಕಿಕ್ ಕೊಡುವ ರೀತಿಯಲ್ಲಿ ಈ ಹಾಡನ್ನು ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಈ ಹಾಡಿನಿಂದ ಚಿತ್ರಕ್ಕೆ ಒಳ್ಳೆಯ ಮೈಲೇಜ್ ಸಿಗುವ ಸೂಚನೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ವಿಶೇಷ ಹಾಡಿನಲ್ಲಿ ಅವರು ಸುದೀಪ್​ ಜೊತೆ ಸೇರಿ ಹೆಜ್ಜೆ ಹಾಕಿದ್ದಾರೆ. ಕೈಯಲ್ಲಿ ಸಾರಾಯಿ ಬಾಟಲಿ ಹಿಡಿದು, ಗ್ಲಾಮರಸ್​ ಆದಂತಹ ಕಾಸ್ಟ್ಯೂಮ್​ ಧರಿಸಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದ ಪೋಸ್ಟರ್ ಈ ಮೊದಲು ರಿಲೀಸ್ ಆಗಿತ್ತು. ಈಗ ಅವರ ಕುರಿತು ಸಿದ್ಧವಾದ ಹಾಡಿನ ಲಿರಿಕಲ್ ಸಾಂಗ್ ಸಖತ್ ಸದ್ದು ಮಾಡುತ್ತಿದೆ. ಈ ಮೂಲಕ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಂತೆ ಆಗಿದೆ.

ಸಾಂಗ್ ಹಿಟ್ ಆದರೆ ಚಿತ್ರದ ಮೈಲೇಜ್ ಹೆಚ್ಚುತ್ತದೆ. ಈ ಮೊದಲು ಈ ರೀತಿ ಆದ ಸಾಕಷ್ಟು ಉದಾಹರಣೆಗಳು ಇವೆ. ಈಗಾಗಲೇ ‘ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈಗ ರಿಲೀಸ್ ಆದ ‘ರಾ ರಾ ರಕ್ಕಮ್ಮ’ ಹಾಡಿನಿಂದ ಚಿತ್ರಕ್ಕೆ ಒಳ್ಳೆಯ ಹೈಪ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು, ಇದೊಂದು ಪಾರ್ಟಿ ಸಾಂಗ್ ರೀತಿ ಇದ್ದು, ಕುಣಿದು ಎಂಜಾಯ್ ಮಾಡುವವರಿಗೆ ಬೇಗ ಇಷ್ಟವಾಗುತ್ತದೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು

ಸಾಮಾನ್ಯವಾಗಿ ಎಲ್ಲಾ ಭಾಷೆಗಳಲ್ಲಿ ಸಾಂಗ್ ಏಕ ಕಾಲದಲ್ಲಿ ರಿಲೀಸ್ ಮಾಡಲಾಗುತ್ತದೆ. ಆದರೆ, ‘ವಿಕ್ರಾಂತ್​ ರೋಣ’ ಬೇರೆ ತಂತ್ರ ಬಳಸಿದೆ. ‘ರಾ ರಾ ರಕ್ಕಮ್ಮ..’ ಸಾಂಗ್ ಇಂದು ರಿಲೀಸ್ ಆಗಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಅನುಕ್ರಮವಾಗಿ ಮೇ 24, ಮೇ 25, ಮೇ 26 ಹಾಗೂ ಮೇ 27ರಂದು ಮಧ್ಯಾಹ್ನ 1.05 ಗಂಟೆಗೆ ಬಿಡುಗಡೆ ಆಗಲಿದೆ.

‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್​’ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:28 pm, Mon, 23 May 22

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು