AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಸ್ಪೈಸಿ ಆಗಿದೆ ‘ರಾ ರಾ ರಕ್ಕಮ್ಮ’ ಸಾಂಗ್; ಹೆಚ್ಚಿತು ‘ವಿಕ್ರಾಂತ್ ರೋಣ’ ಚಿತ್ರದ ಮೈಲೇಜ್

Ra Ra Rakkamma Song: ಸಾಂಗ್ ಹಿಟ್ ಆದರೆ ಚಿತ್ರದ ಮೈಲೇಜ್ ಹೆಚ್ಚುತ್ತದೆ. ಈ ಮೊದಲು ಈ ರೀತಿ ಆದ ಸಾಕಷ್ಟು ಉದಾಹರಣೆಗಳು ಇವೆ. ಈಗಾಗಲೇ ‘ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಸಖತ್ ಸ್ಪೈಸಿ ಆಗಿದೆ ‘ರಾ ರಾ ರಕ್ಕಮ್ಮ’ ಸಾಂಗ್; ಹೆಚ್ಚಿತು ‘ವಿಕ್ರಾಂತ್ ರೋಣ’ ಚಿತ್ರದ ಮೈಲೇಜ್
‘ರಕ್ಕಮ್ಮ’ ಹಾಡಿನಲ್ಲಿ ಕಿಚ್ಚ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್
Follow us
ರಾಜೇಶ್ ದುಗ್ಗುಮನೆ
|

Updated on:May 23, 2022 | 3:53 PM

ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಇಂದು ವಿಶೇಷ ದಿನ. ಟೀಸರ್ ಹಾಗೂ ಪೋಸ್ಟರ್ ಮೂಲಕ ಗಮನ ಸೆಳೆದ ‘ವಿಕ್ರಾಂತ್ ರೋಣ’ ಸಿನಿಮಾದ  (Vikrant Rona Movie) ‘ರಾ ರಾ ರಕ್ಕಮ್ಮ..’ ಹಾಡಿನ (Ra Ra Rakkamma Song) ಲಿರಿಕಲ್ ವಿಡಿಯೋ ರಿಲೀಸ್ ಆಗಿದೆ. ಇದು ಅವರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಕಿಕ್ ಕೊಡುವ ರೀತಿಯಲ್ಲಿ ಈ ಹಾಡನ್ನು ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಈ ಹಾಡಿನಿಂದ ಚಿತ್ರಕ್ಕೆ ಒಳ್ಳೆಯ ಮೈಲೇಜ್ ಸಿಗುವ ಸೂಚನೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ವಿಶೇಷ ಹಾಡಿನಲ್ಲಿ ಅವರು ಸುದೀಪ್​ ಜೊತೆ ಸೇರಿ ಹೆಜ್ಜೆ ಹಾಕಿದ್ದಾರೆ. ಕೈಯಲ್ಲಿ ಸಾರಾಯಿ ಬಾಟಲಿ ಹಿಡಿದು, ಗ್ಲಾಮರಸ್​ ಆದಂತಹ ಕಾಸ್ಟ್ಯೂಮ್​ ಧರಿಸಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದ ಪೋಸ್ಟರ್ ಈ ಮೊದಲು ರಿಲೀಸ್ ಆಗಿತ್ತು. ಈಗ ಅವರ ಕುರಿತು ಸಿದ್ಧವಾದ ಹಾಡಿನ ಲಿರಿಕಲ್ ಸಾಂಗ್ ಸಖತ್ ಸದ್ದು ಮಾಡುತ್ತಿದೆ. ಈ ಮೂಲಕ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಂತೆ ಆಗಿದೆ.

ಸಾಂಗ್ ಹಿಟ್ ಆದರೆ ಚಿತ್ರದ ಮೈಲೇಜ್ ಹೆಚ್ಚುತ್ತದೆ. ಈ ಮೊದಲು ಈ ರೀತಿ ಆದ ಸಾಕಷ್ಟು ಉದಾಹರಣೆಗಳು ಇವೆ. ಈಗಾಗಲೇ ‘ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈಗ ರಿಲೀಸ್ ಆದ ‘ರಾ ರಾ ರಕ್ಕಮ್ಮ’ ಹಾಡಿನಿಂದ ಚಿತ್ರಕ್ಕೆ ಒಳ್ಳೆಯ ಹೈಪ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು, ಇದೊಂದು ಪಾರ್ಟಿ ಸಾಂಗ್ ರೀತಿ ಇದ್ದು, ಕುಣಿದು ಎಂಜಾಯ್ ಮಾಡುವವರಿಗೆ ಬೇಗ ಇಷ್ಟವಾಗುತ್ತದೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು

ಸಾಮಾನ್ಯವಾಗಿ ಎಲ್ಲಾ ಭಾಷೆಗಳಲ್ಲಿ ಸಾಂಗ್ ಏಕ ಕಾಲದಲ್ಲಿ ರಿಲೀಸ್ ಮಾಡಲಾಗುತ್ತದೆ. ಆದರೆ, ‘ವಿಕ್ರಾಂತ್​ ರೋಣ’ ಬೇರೆ ತಂತ್ರ ಬಳಸಿದೆ. ‘ರಾ ರಾ ರಕ್ಕಮ್ಮ..’ ಸಾಂಗ್ ಇಂದು ರಿಲೀಸ್ ಆಗಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಅನುಕ್ರಮವಾಗಿ ಮೇ 24, ಮೇ 25, ಮೇ 26 ಹಾಗೂ ಮೇ 27ರಂದು ಮಧ್ಯಾಹ್ನ 1.05 ಗಂಟೆಗೆ ಬಿಡುಗಡೆ ಆಗಲಿದೆ.

‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್​’ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:28 pm, Mon, 23 May 22

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್