AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಇಂದು ವಿಶೇಷ ದಿನ; ‘ವಿಕ್ರಾಂತ್​ ರೋಣ’ ರಿಲೀಸ್ ಯಾವಾಗ?

‘ವಿಕ್ರಾಂತ್ ರೋಣ’ ಚಿತ್ರಕ್ಕಾಗಿ ಸುದೀಪ್​ ಭಿನ್ನ ಅವತಾರ ತಾಳಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಕಾರಣಕ್ಕೆ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಇಂದು ವಿಶೇಷ ದಿನ; ‘ವಿಕ್ರಾಂತ್​ ರೋಣ’ ರಿಲೀಸ್ ಯಾವಾಗ?
ಸುದೀಪ್​
TV9 Web
| Edited By: |

Updated on: Dec 07, 2021 | 6:00 AM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ತೆರೆಕಂಡು ಯಶಸ್ಸು ಪಡೆದುಕೊಂಡಿದೆ. ಈಗ ಸುದೀಪ್​ ಅವರ ಸಂಪೂರ್ಣ ಗಮನ ‘ವಿಕ್ರಾಂತ್​ ರೋಣ’ ಚಿತ್ರದ ಮೇಲಿದೆ. ಈ ಸಿನಿಮಾ ಬಗ್ಗೆ ಸುದೀಪ್​ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಲವು ಬಾರಿ ಅವರು ‘ವಿಕ್ರಾಂತ್​ ರೋಣ’ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದೇ ಇದಕ್ಕೆ ಸಾಕ್ಷಿ. ಹೀಗಾಗಿ, ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ರಿಲೀಸ್​ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಈ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕೊರೆಯುತ್ತಿತ್ತು. ಇದಕ್ಕೆ ಈಗ ಉತ್ತರ ಸಿಗುವ ಸಮಯ ಬಂದಿದೆ. ಇಂದು (ಡಿಸೆಂಬರ್​ 7) ಬೆಳಗ್ಗೆ 11:05ಕ್ಕೆ ವಿಕ್ರಾಂತ್​ ರೋಣ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಲಿದೆ.

‘ವಿಕ್ರಾಂತ್ ರೋಣ’ ಚಿತ್ರಕ್ಕಾಗಿ ಸುದೀಪ್​ ಭಿನ್ನ ಅವತಾರ ತಾಳಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಕಾರಣಕ್ಕೆ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾ ಪೋಸ್ಟರ್​ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಸಿನಿಮಾದ ರಿಲೀಸ್​ ದಿನಾಂಕ ತಿಳಿದುಕೊಳ್ಳುವ ಸಮಯ ಬಂದಿದೆ.

ಮೂಲಗಳ ಪ್ರಕಾರ ಫೆಬ್ರವರಿ ಅಂತ್ಯದ ವೇಳೆಗೆ ‘ವಿಕ್ರಾಂತ್​ ರೋಣ’ ರಿಲೀಸ್​ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ಜನವರಿ ತಿಂಗಳಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಇವೆಲ್ಲವೂ ದೊಡ್ಡ ಬಜೆಟ್​ ಚಿತ್ರಗಳೇ. ಈ ಸಿನಿಮಾ ಸುಗ್ಗಿಯ ಅಬ್ಬರ ಮುಗಿಯೋಕೆ ಕನಿಷ್ಠ ಒಂದು ತಿಂಗಳಾದರೂ ಬೇಕು. ಈ ಕಾರಣಕ್ಕೆ ಫೆಬ್ರವರಿ ಅಂತ್ಯಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​ ಮಾಡಿದರೆ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್​ ಮಾಡಬಹುದು.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್ ಪಾಂಡಿಯನ್​ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಚಿತ್ರ ಮೂಡಿಬರುತ್ತಿದೆ. ವಿಲಿಯಮ್​ ಡೇವಿಡ್​ ಛಾಯಾಗ್ರಹಣ, ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ಗಳು ಸಿಕ್ಕಾಪಟ್ಟೆ ಕೌತುಕ ಮೂಡಿಸಿವೆ. ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್​, ಸಿನಿಮಾ ಪ್ರಿಯರಿಗೆ ಗುಡ್​ ನ್ಯೂಸ್​; ‘83’ ಟೀಮ್​ ಜತೆ ಸೇರಿಕೊಂಡ ಕಿಚ್ಚ ಸುದೀಪ್​

ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ