AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಂಗ್​ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್​ ಫರ್ನಾಂಡಿಸ್​; ವಿಕ್ರಾಂತ್​ ರೋಣದಲ್ಲಿ ವಿಶೇಷ ಪಾತ್ರ

Gadang Rakkamma: ‘ಖಂಡಿತವಾಗಿಯೂ ವಿಕ್ರಾಂತ್​ ರೋಣ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಹೆಮ್ಮೆ ತರಲಿದೆ’ ಎಂದು ಕೆಲವೇ ದಿನಗಳ ಹಿಂದೆ ಟ್ವೀಟ್​ ಮಾಡಿದ್ದ ಜಾಕ್ವೆಲಿನ್ ಫರ್ನಾಂಡಿಸ್​, ಈಗ ತಮ್ಮ ಫಸ್ಟ್​ಲುಕ್​ ಬಿಡುಗಡೆ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.​

ಗಡಂಗ್​ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್​ ಫರ್ನಾಂಡಿಸ್​; ವಿಕ್ರಾಂತ್​ ರೋಣದಲ್ಲಿ ವಿಶೇಷ ಪಾತ್ರ
ಕಿಚ್ಚ ಸುದೀಪ್​, ಜಾಕ್ವೆಲಿನ್​ ಫರ್ನಾಂಡಿಸ್​
TV9 Web
| Edited By: |

Updated on:Jul 31, 2021 | 2:11 PM

Share

ಹತ್ತು ಹಲವು ಕಾರಣಗಳಿಂದಾಗಿ ‘ವಿಕ್ರಾಂತ್ ರೋಣ’ (Vikrant Rona) ಸಿನಿಮಾ ಸೌಂಡು ಮಾಡುತ್ತಿದೆ. ಕಿಚ್ಚ ಸುದೀಪ್​ (Kichcha Sudeep) ನಟನೆಯ ಈ ಚಿತ್ರದಲ್ಲಿ ಬಾಲಿವುಡ್​ ಬೆಡಗಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ನಟಿಸಿದ್ದಾರೆ ಎಂಬುದು ಕೆಲವೇ ದಿನಗಳ ಹಿಂದೆ ತಿಳಿದುಬಂದಿತ್ತು. ಆದರೆ ಪಾತ್ರದ ಹೆಸರೇನು ಮತ್ತು ಅವರ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಈಗ ಜಾಕ್ವೆಲಿನ್​ ಪಾತ್ರದ ಫಸ್ಟ್​ಲುಕ್​ ಬಹಿರಂಗಪಡಿಸಲಾಗಿದೆ. ಅವರ ಪಾತ್ರದ ಹೆಸರು ‘ಗಡಂಗ್​ ರಕ್ಕಮ್ಮ’ ಎಂದು ಕೂಡ ನಿರ್ದೇಶಕ ಅನೂಪ್​ ಭಂಡಾರಿ (Anup Bhandari) ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ವಿಶೇಷ ಹಾಡಿನಲ್ಲಿ ಅವರು ಸುದೀಪ್​ ಜೊತೆ ಸೇರಿ ಹೆಜ್ಜೆ ಹಾಕಿದ್ದಾರೆ. ಚಿತ್ರತಂಡ ರಿಲೀಸ್​ ಮಾಡಿರುವ ಹೊಸ​ ಪೋಸ್ಟರ್​ ಕೌತುಕ ಮೂಡಿಸುವಂತಿದೆ. ಕೈಯಲ್ಲಿ ಸಾರಾಯಿ ಬಾಟಲಿ ಹಿಡಿದು, ಗ್ಲಾಮರಸ್​ ಆದಂತಹ ಕಾಸ್ಟ್ಯೂಮ್​ ಧರಿಸಿ ನಿಂತಿರುವ ಜಾಕ್ವೆಲಿನ್​ ಅವರ ಲುಕ್​ ಗಮನ ಸೆಳೆಯುತ್ತಿದೆ.

‘ಗಡಂಗ್​ ರಕ್ಕಮ್ಮನಿಗೆ ಗೊತ್ತಿಲ್ಲದೇ ಇರುವುದು ಯಾವುದೂ ಇಲ್ಲ’ ಎಂಬ ಕ್ಯಾಪ್ಷನ್​ ಜೊತೆಗೆ ಪೋಸ್ಟರ್​ ಅನಾವರಣ ಮಾಡಲಾಗಿದೆ. ‘ಖಂಡಿತವಾಗಿಯೂ ವಿಕ್ರಾಂತ್​ ರೋಣ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಹೆಮ್ಮೆ ತರಲಿದೆ’ ಎಂದು ಕೆಲವೇ ದಿನಗಳ ಹಿಂದೆ ಟ್ವೀಟ್​ ಮಾಡಿದ್ದ ಜಾಕ್ವೆಲಿನ್, ಈಗ ತಮ್ಮ ಫಸ್ಟ್​ಲುಕ್​ ಬಿಡುಗಡೆ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.​ ‘ವಿಕ್ರಾಂತ್​ ರೋಣ ಸಿನಿಮಾದಲ್ಲಿನ ಗಡಂಗ್​ ರಕ್ಕಮ್ಮ ಎಂಬ ನನ್ನ ಪಾತ್ರವನ್ನು ಪರಿಚಯಿಸಲು ಖುಷಿ ಆಗುತ್ತಿದೆ’ ಎಂದು ಜಾಕ್ವೆಲಿನ್​ ಫರ್ನಾಂಡಿಸ್​ ಟ್ವೀಟ್​ ಮಾಡಿದ್ದಾರೆ. ಕನ್ನಡ ಸಿನಿಪ್ರಿಯರಿಂದ ಹಾಗೂ ಸುದೀಪ್​ ಅಭಿಮಾನಿಗಳಿಂದ ಅವರಿಗೆ ಭರ್ಜರಿ ಸ್ವಾಗತ ಸಿಗುತ್ತಿದೆ.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಜೊತೆಯಾಗಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಚಿತ್ರಕ್ಕೆ ಬಿ. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಜಾಕ್ವೆಲಿನ್​ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್​ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.

ಇದನ್ನೂ ಓದಿ:

‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​

ಜಾಕ್ವೆಲಿನ್ ಜೊತೆಗಿನ ನೆಚ್ಚಿನ ಚಿತ್ರಗಳನ್ನು ಹಂಚಿಕೊಂಡ ಕಿಚ್ಚ ಸುದೀಪ್

Published On - 2:03 pm, Sat, 31 July 21

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?