AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಸಮಯ ಸಿಕ್ಕಾಗಲೆಲ್ಲ ಇದನ್ನು ಮಾಡ್ತೀನಿ’; ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಸರ್​ಪ್ರೈಸ್​

ಎಲ್ಲಾ ಹೀರೋಗಳು ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸುವುದಿಲ್ಲ. ಆದರೆ, ಇನ್ನುಮುಂದೆ ಸಮಯ ಸಿಕ್ಕಾಗಲೆಲ್ಲ ಟ್ವಿಟರ್​ನಲ್ಲಿ ‘ಆಸ್ಕ್​ ಕಿಚ್ಚ’ ಸೆಷನ್ ನಡೆಸೋದಾಗಿ ಸುದೀಪ್ ಹೇಳಿದ್ದಾರೆ. ಈ ಮೂಲಕ ಫ್ಯಾನ್ಸ್​​ಗೆ ಸರ್​ಪ್ರೈಸ್ ನೀಡಿದ್ದಾರೆ.

Kichcha Sudeep: ‘ಸಮಯ ಸಿಕ್ಕಾಗಲೆಲ್ಲ ಇದನ್ನು ಮಾಡ್ತೀನಿ’; ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಸರ್​ಪ್ರೈಸ್​
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 16, 2024 | 7:26 AM

Share

ಕಿಚ್ಚ ಸುದೀಪ್ (kichcha Sudeep) ಅವರು ಸಿನಿಮಾ ಕೆಲಸ ಹಾಗೂ ಬಿಗ್ ಬಾಸ್ ನಿರೂಪಣೆ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ. ಈಗ ಅವರು ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನ ಮತ್ತೆ ಆರಂಭಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇದರ ಜೊತೆಗೆ ಸುದೀಪ್ ಕಡೆಯಿಂದ ಒಂದು ಸರ್​ಪ್ರೈಸ್ ಕೂಡ ಸಿಕ್ಕಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸ್ಟಾರ್ ಹೀರೋಗಳು ಅಭಿಮಾನಿಗಳನ್ನು ಎದುರುಗೊಳ್ಳೋದು ಸಿನಿಮಾ ರಿಲೀಸ್ ಸಂದರ್ಭದಲ್ಲಿ ಅಥವಾ ಬರ್ತ್​ಡೇ ದಿನ. ಉಳಿದ ಸಂದರ್ಭಗಳಲ್ಲಿ ನೆಚ್ಚಿನ​ ಹೀರೋಗೆ ಪ್ರಶ್ನೆ ಕೇಳಬೇಕು ಎಂದರೆ ಇರೋದು ಒಂದೇ ಮಾರ್ಗ, ಅದುವೇ ಸೋಶಿಯಲ್ ಮೀಡಿಯಾ. ಆದರೆ, ಎಲ್ಲಾ ಹೀರೋಗಳು ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸುವುದಿಲ್ಲ. ಆದರೆ, ಇನ್ನುಮುಂದೆ ಸಮಯ ಸಿಕ್ಕಾಗಲೆಲ್ಲ ಟ್ವಿಟರ್​ನಲ್ಲಿ ‘ಆಸ್ಕ್​ ಕಿಚ್ಚ’ ಸೆಷನ್ ನಡೆಸೋದಾಗಿ ಸುದೀಪ್ ಹೇಳಿದ್ದಾರೆ. ಈ ಮೂಲಕ ಫ್ಯಾನ್ಸ್​​ಗೆ ಸರ್​ಪ್ರೈಸ್ ನೀಡಿದ್ದಾರೆ.

ಮುಂಜಾನೆ ಈ ಬಗ್ಗೆ ಸುದೀಪ್ ಮಾಹಿತಿ ನೀಡಿದ್ದಾರೆ.  ‘ಇಂದಿನಿಂದ #AskKichcha ಆರಂಭಿಸೋಣ. ಸಮಯ ಸಿಕ್ಕಾಗ ಇದನ್ನು ಮಾಡುತ್ತೇನೆ. ಈಗ ವಿಮಾನ ಏರುವುದಕ್ಕೂ ಮೊದಲು ಅಭಿಮಾನಿಗಳ ಕೆಲವು ಪ್ರಶ್ನೆಗೆ ಉತ್ತರ ನೀಡುತ್ತೇನೆ’ ಎಂದು ಸುದೀಪ್ ಹೇಳಿದ್ದಾರೆ. ನಂತರ ಅಭಿಮಾನಿಗಳ ಪ್ರಶ್ನೆಗೆ ಅರ್ಧಗಂಟೆಗೂ ಹೆಚ್ಚು ಕಾಲ ಉತ್ತರ ನೀಡಿದ್ದಾರೆ. ನಂತರ ‘ಬೋರ್ಡಿಂಗ್ ಟೈಮ್’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಳ್ಳಂಬೆಳಿಗ್ಗೆ ‘ಮ್ಯಾಕ್ಸ್’ ಬಗ್ಗೆ ಅಪ್​ಡೇಟ್ ಕೊಟ್ಟ ಸುದೀಪ್​; ಎಲ್ಲಿಯವರೆಗೆ ಬಂತು ಶೂಟ್​?

ಇಂದಿನಿಂದ (ಜನವರಿ 16) ‘ಮ್ಯಾಕ್ಸ್’ ಸಿನಿಮಾದ ಶೂಟ್ ಮತ್ತೆ ಆರಂಭ ಆಗಲಿದೆ. ಈ ಚಿತ್ರದ ಬಗ್ಗೆ ಅಪ್​ಡೇಟ್​ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾ ಪೂರ್ಣಗೊಂಡ ಬಳಿಕ ಚಿತ್ರದ ಟ್ರೇಲರ್ ರಿಲೀಸ್ ಹಾಗೂ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡುವ ಆಲೋಚನೆಯಲ್ಲಿ ತಂಡ ಇದೆ. ಕ್ಲೈಮ್ಯಾಕ್ಸ್ ಶೂಟ್​ಗೆ ಸುದೀಪ್ ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ