AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಸಮಯ ಸಿಕ್ಕಾಗಲೆಲ್ಲ ಇದನ್ನು ಮಾಡ್ತೀನಿ’; ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಸರ್​ಪ್ರೈಸ್​

ಎಲ್ಲಾ ಹೀರೋಗಳು ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸುವುದಿಲ್ಲ. ಆದರೆ, ಇನ್ನುಮುಂದೆ ಸಮಯ ಸಿಕ್ಕಾಗಲೆಲ್ಲ ಟ್ವಿಟರ್​ನಲ್ಲಿ ‘ಆಸ್ಕ್​ ಕಿಚ್ಚ’ ಸೆಷನ್ ನಡೆಸೋದಾಗಿ ಸುದೀಪ್ ಹೇಳಿದ್ದಾರೆ. ಈ ಮೂಲಕ ಫ್ಯಾನ್ಸ್​​ಗೆ ಸರ್​ಪ್ರೈಸ್ ನೀಡಿದ್ದಾರೆ.

Kichcha Sudeep: ‘ಸಮಯ ಸಿಕ್ಕಾಗಲೆಲ್ಲ ಇದನ್ನು ಮಾಡ್ತೀನಿ’; ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಸರ್​ಪ್ರೈಸ್​
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 16, 2024 | 7:26 AM

Share

ಕಿಚ್ಚ ಸುದೀಪ್ (kichcha Sudeep) ಅವರು ಸಿನಿಮಾ ಕೆಲಸ ಹಾಗೂ ಬಿಗ್ ಬಾಸ್ ನಿರೂಪಣೆ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ. ಈಗ ಅವರು ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನ ಮತ್ತೆ ಆರಂಭಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇದರ ಜೊತೆಗೆ ಸುದೀಪ್ ಕಡೆಯಿಂದ ಒಂದು ಸರ್​ಪ್ರೈಸ್ ಕೂಡ ಸಿಕ್ಕಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸ್ಟಾರ್ ಹೀರೋಗಳು ಅಭಿಮಾನಿಗಳನ್ನು ಎದುರುಗೊಳ್ಳೋದು ಸಿನಿಮಾ ರಿಲೀಸ್ ಸಂದರ್ಭದಲ್ಲಿ ಅಥವಾ ಬರ್ತ್​ಡೇ ದಿನ. ಉಳಿದ ಸಂದರ್ಭಗಳಲ್ಲಿ ನೆಚ್ಚಿನ​ ಹೀರೋಗೆ ಪ್ರಶ್ನೆ ಕೇಳಬೇಕು ಎಂದರೆ ಇರೋದು ಒಂದೇ ಮಾರ್ಗ, ಅದುವೇ ಸೋಶಿಯಲ್ ಮೀಡಿಯಾ. ಆದರೆ, ಎಲ್ಲಾ ಹೀರೋಗಳು ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸುವುದಿಲ್ಲ. ಆದರೆ, ಇನ್ನುಮುಂದೆ ಸಮಯ ಸಿಕ್ಕಾಗಲೆಲ್ಲ ಟ್ವಿಟರ್​ನಲ್ಲಿ ‘ಆಸ್ಕ್​ ಕಿಚ್ಚ’ ಸೆಷನ್ ನಡೆಸೋದಾಗಿ ಸುದೀಪ್ ಹೇಳಿದ್ದಾರೆ. ಈ ಮೂಲಕ ಫ್ಯಾನ್ಸ್​​ಗೆ ಸರ್​ಪ್ರೈಸ್ ನೀಡಿದ್ದಾರೆ.

ಮುಂಜಾನೆ ಈ ಬಗ್ಗೆ ಸುದೀಪ್ ಮಾಹಿತಿ ನೀಡಿದ್ದಾರೆ.  ‘ಇಂದಿನಿಂದ #AskKichcha ಆರಂಭಿಸೋಣ. ಸಮಯ ಸಿಕ್ಕಾಗ ಇದನ್ನು ಮಾಡುತ್ತೇನೆ. ಈಗ ವಿಮಾನ ಏರುವುದಕ್ಕೂ ಮೊದಲು ಅಭಿಮಾನಿಗಳ ಕೆಲವು ಪ್ರಶ್ನೆಗೆ ಉತ್ತರ ನೀಡುತ್ತೇನೆ’ ಎಂದು ಸುದೀಪ್ ಹೇಳಿದ್ದಾರೆ. ನಂತರ ಅಭಿಮಾನಿಗಳ ಪ್ರಶ್ನೆಗೆ ಅರ್ಧಗಂಟೆಗೂ ಹೆಚ್ಚು ಕಾಲ ಉತ್ತರ ನೀಡಿದ್ದಾರೆ. ನಂತರ ‘ಬೋರ್ಡಿಂಗ್ ಟೈಮ್’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಳ್ಳಂಬೆಳಿಗ್ಗೆ ‘ಮ್ಯಾಕ್ಸ್’ ಬಗ್ಗೆ ಅಪ್​ಡೇಟ್ ಕೊಟ್ಟ ಸುದೀಪ್​; ಎಲ್ಲಿಯವರೆಗೆ ಬಂತು ಶೂಟ್​?

ಇಂದಿನಿಂದ (ಜನವರಿ 16) ‘ಮ್ಯಾಕ್ಸ್’ ಸಿನಿಮಾದ ಶೂಟ್ ಮತ್ತೆ ಆರಂಭ ಆಗಲಿದೆ. ಈ ಚಿತ್ರದ ಬಗ್ಗೆ ಅಪ್​ಡೇಟ್​ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾ ಪೂರ್ಣಗೊಂಡ ಬಳಿಕ ಚಿತ್ರದ ಟ್ರೇಲರ್ ರಿಲೀಸ್ ಹಾಗೂ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡುವ ಆಲೋಚನೆಯಲ್ಲಿ ತಂಡ ಇದೆ. ಕ್ಲೈಮ್ಯಾಕ್ಸ್ ಶೂಟ್​ಗೆ ಸುದೀಪ್ ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ