AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ನಟನೆಯ ಹೊಸ ಸಿನಿಮಾ ಪ್ರೋಮೋಶೂಟ್ ಶುರು; ಇನ್ನೊಂದು ವಾರದಲ್ಲಿ ಲಾಂಚ್

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸುದೀಪ್ ಪ್ರಚಾರ ಮಾಡಿದರು. ಚುನಾವಣೆ ಮುಗಿದಿದೆ. ಈಗ ಅವರು ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ.

ಸುದೀಪ್ ನಟನೆಯ ಹೊಸ ಸಿನಿಮಾ ಪ್ರೋಮೋಶೂಟ್ ಶುರು; ಇನ್ನೊಂದು ವಾರದಲ್ಲಿ ಲಾಂಚ್
ನಟ ಸುದೀಪ್​
ರಾಜೇಶ್ ದುಗ್ಗುಮನೆ
|

Updated on: May 22, 2023 | 12:07 PM

Share

ಕಿಚ್ಚ ಸುದೀಪ್ (Kichcha Sudeep) ಅವರು ತಮ್ಮ ವೃತ್ತಿ ಜೀವನದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದರು. ‘ವಿಕ್ರಾಂತ್ ರೋಣ’ (Vikrant Rona Movie) ಬಳಿಕ ಅವರು ಹೊಸ ಸಿನಿಮಾ ಘೋಷಿಸಲಿಲ್ಲ. ಈ ಚಿತ್ರ ರಿಲೀಸ್ ಆಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಈವರೆಗೂ ಅವರು ಹೊಸ ಸಿನಿಮಾದ ಟೈಟಲ್ ಅನೌನ್ಸ್ ಆಗಿಲ್ಲ. ಈಗ ಕಿಚ್ಚ ಬ್ಯಾಕ್​ ಟು ಬ್ಯಾಕ್ 3 ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆ ಪೈಕಿ ಒಂದು ಸಿನಿಮಾದ ಪ್ರೋಮೋಶೂಟ್ ಇಂದು (ಮೇ 22) ಆರಂಭ ಆಗಿದೆ. ಜೂನ್ 1ರಂದು ಸಿನಿಮಾ ಘೋಷಣೆ ಆಗಲಿದೆ. ಈ ದಿನಕ್ಕಾಗಿ ಸುದೀಪ್ ಫ್ಯಾನ್ಸ್ ಕಾದಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಆ ಬಳಿಕ ಸುದೀಪ್ ಯಾವುದೇ ಹೊಸ ಸಿನಿಮಾ ಅನೌನ್ಸ್ ಮಾಡಲಿಲ್ಲ. ಕೆಲ ಸಮಯ ಕಿಚ್ಚ ರಾಜಕೀಯದಲ್ಲೂ ಬ್ಯುಸಿ ಆದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಅವರು ಪ್ರಚಾರ ಮಾಡಿದರು. ಈಗ ಚುನಾವಣೆ ಮುಗಿದಿದೆ. ಈಗ ಅವರು ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಟ್ವೀಟ್ ಮಾಡಿದ್ದ ಸುದೀಪ್ ಅವರು ಮೇ 22ರಂದು ಸಿನಿಮಾ ಶೂಟಿಂಗ್​ನಲ್ಲಿ ಭಾಗಿ ಆಗುವುದಾಗಿ ಹೇಳಿದ್ದರು. ಅಂತೆಯೇ ಅವರು ಭರ್ಜರಿಯಾಗಿ ಪ್ರೋಮೋಶೂಟ್ ಮಾಡಿಸುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ್ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಭಾಷಾ’ ಚಿತ್ರದ ಪ್ರೋಮೋಶೂಟ್ ಇದು ಎಂದು ಹೇಳಲಾಗುತ್ತಿದೆ.

ಇದರ ಹೊರತಾಗಿ ಇನ್ನೂ ಎರಡು ಸಿನಿಮಾಗಳಲ್ಲಿ ಸುದೀಪ್ ನಟಿಸಲಿದ್ದಾರೆ. ತಮಿಳಿನ ನಿರ್ದೇಶಕ ಚರಣ್ ಜೊತೆ ಸುದೀಪ್​ ಕೈ ಜೋಡಿಸುತ್ತಾರೆ ಎನ್ನಲಾಗಿದೆ. ‘ಬಿಲ್ಲ ರಂಗ ಭಾಷಾ’ ಹಾಗೂ ಚರಣ್ ಜೊತೆಗಿನ ಸಿನಿಮಾ ಬಹುತೇಕ ಒಟ್ಟೊಟ್ಟಿಗೆ ಚಿತ್ರೀಕರಣಗೊಳ್ಳಲಿವೆ ಎನ್ನಲಾಗುತ್ತಿವೆ. ಇವೆರಡು ಸಿನಿಮಾಗಳ ಬಳಿಕ ನಂದ ಕಿಶೋರ್ ಅವರ ಜೊತೆ ಸುದೀಪ್ ಸಿನಿಮಾ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್