AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ನಟನೆಯ ಹೊಸ ಸಿನಿಮಾ ಪ್ರೋಮೋಶೂಟ್ ಶುರು; ಇನ್ನೊಂದು ವಾರದಲ್ಲಿ ಲಾಂಚ್

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸುದೀಪ್ ಪ್ರಚಾರ ಮಾಡಿದರು. ಚುನಾವಣೆ ಮುಗಿದಿದೆ. ಈಗ ಅವರು ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ.

ಸುದೀಪ್ ನಟನೆಯ ಹೊಸ ಸಿನಿಮಾ ಪ್ರೋಮೋಶೂಟ್ ಶುರು; ಇನ್ನೊಂದು ವಾರದಲ್ಲಿ ಲಾಂಚ್
ನಟ ಸುದೀಪ್​
ರಾಜೇಶ್ ದುಗ್ಗುಮನೆ
|

Updated on: May 22, 2023 | 12:07 PM

Share

ಕಿಚ್ಚ ಸುದೀಪ್ (Kichcha Sudeep) ಅವರು ತಮ್ಮ ವೃತ್ತಿ ಜೀವನದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದರು. ‘ವಿಕ್ರಾಂತ್ ರೋಣ’ (Vikrant Rona Movie) ಬಳಿಕ ಅವರು ಹೊಸ ಸಿನಿಮಾ ಘೋಷಿಸಲಿಲ್ಲ. ಈ ಚಿತ್ರ ರಿಲೀಸ್ ಆಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಈವರೆಗೂ ಅವರು ಹೊಸ ಸಿನಿಮಾದ ಟೈಟಲ್ ಅನೌನ್ಸ್ ಆಗಿಲ್ಲ. ಈಗ ಕಿಚ್ಚ ಬ್ಯಾಕ್​ ಟು ಬ್ಯಾಕ್ 3 ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆ ಪೈಕಿ ಒಂದು ಸಿನಿಮಾದ ಪ್ರೋಮೋಶೂಟ್ ಇಂದು (ಮೇ 22) ಆರಂಭ ಆಗಿದೆ. ಜೂನ್ 1ರಂದು ಸಿನಿಮಾ ಘೋಷಣೆ ಆಗಲಿದೆ. ಈ ದಿನಕ್ಕಾಗಿ ಸುದೀಪ್ ಫ್ಯಾನ್ಸ್ ಕಾದಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಆ ಬಳಿಕ ಸುದೀಪ್ ಯಾವುದೇ ಹೊಸ ಸಿನಿಮಾ ಅನೌನ್ಸ್ ಮಾಡಲಿಲ್ಲ. ಕೆಲ ಸಮಯ ಕಿಚ್ಚ ರಾಜಕೀಯದಲ್ಲೂ ಬ್ಯುಸಿ ಆದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಅವರು ಪ್ರಚಾರ ಮಾಡಿದರು. ಈಗ ಚುನಾವಣೆ ಮುಗಿದಿದೆ. ಈಗ ಅವರು ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಟ್ವೀಟ್ ಮಾಡಿದ್ದ ಸುದೀಪ್ ಅವರು ಮೇ 22ರಂದು ಸಿನಿಮಾ ಶೂಟಿಂಗ್​ನಲ್ಲಿ ಭಾಗಿ ಆಗುವುದಾಗಿ ಹೇಳಿದ್ದರು. ಅಂತೆಯೇ ಅವರು ಭರ್ಜರಿಯಾಗಿ ಪ್ರೋಮೋಶೂಟ್ ಮಾಡಿಸುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ್ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಭಾಷಾ’ ಚಿತ್ರದ ಪ್ರೋಮೋಶೂಟ್ ಇದು ಎಂದು ಹೇಳಲಾಗುತ್ತಿದೆ.

ಇದರ ಹೊರತಾಗಿ ಇನ್ನೂ ಎರಡು ಸಿನಿಮಾಗಳಲ್ಲಿ ಸುದೀಪ್ ನಟಿಸಲಿದ್ದಾರೆ. ತಮಿಳಿನ ನಿರ್ದೇಶಕ ಚರಣ್ ಜೊತೆ ಸುದೀಪ್​ ಕೈ ಜೋಡಿಸುತ್ತಾರೆ ಎನ್ನಲಾಗಿದೆ. ‘ಬಿಲ್ಲ ರಂಗ ಭಾಷಾ’ ಹಾಗೂ ಚರಣ್ ಜೊತೆಗಿನ ಸಿನಿಮಾ ಬಹುತೇಕ ಒಟ್ಟೊಟ್ಟಿಗೆ ಚಿತ್ರೀಕರಣಗೊಳ್ಳಲಿವೆ ಎನ್ನಲಾಗುತ್ತಿವೆ. ಇವೆರಡು ಸಿನಿಮಾಗಳ ಬಳಿಕ ನಂದ ಕಿಶೋರ್ ಅವರ ಜೊತೆ ಸುದೀಪ್ ಸಿನಿಮಾ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ