ಸುದೀಪ್ ನಟನೆಯ ಹೊಸ ಸಿನಿಮಾ ಪ್ರೋಮೋಶೂಟ್ ಶುರು; ಇನ್ನೊಂದು ವಾರದಲ್ಲಿ ಲಾಂಚ್

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸುದೀಪ್ ಪ್ರಚಾರ ಮಾಡಿದರು. ಚುನಾವಣೆ ಮುಗಿದಿದೆ. ಈಗ ಅವರು ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ.

ಸುದೀಪ್ ನಟನೆಯ ಹೊಸ ಸಿನಿಮಾ ಪ್ರೋಮೋಶೂಟ್ ಶುರು; ಇನ್ನೊಂದು ವಾರದಲ್ಲಿ ಲಾಂಚ್
ನಟ ಸುದೀಪ್​
Follow us
|

Updated on: May 22, 2023 | 12:07 PM

ಕಿಚ್ಚ ಸುದೀಪ್ (Kichcha Sudeep) ಅವರು ತಮ್ಮ ವೃತ್ತಿ ಜೀವನದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದರು. ‘ವಿಕ್ರಾಂತ್ ರೋಣ’ (Vikrant Rona Movie) ಬಳಿಕ ಅವರು ಹೊಸ ಸಿನಿಮಾ ಘೋಷಿಸಲಿಲ್ಲ. ಈ ಚಿತ್ರ ರಿಲೀಸ್ ಆಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಈವರೆಗೂ ಅವರು ಹೊಸ ಸಿನಿಮಾದ ಟೈಟಲ್ ಅನೌನ್ಸ್ ಆಗಿಲ್ಲ. ಈಗ ಕಿಚ್ಚ ಬ್ಯಾಕ್​ ಟು ಬ್ಯಾಕ್ 3 ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆ ಪೈಕಿ ಒಂದು ಸಿನಿಮಾದ ಪ್ರೋಮೋಶೂಟ್ ಇಂದು (ಮೇ 22) ಆರಂಭ ಆಗಿದೆ. ಜೂನ್ 1ರಂದು ಸಿನಿಮಾ ಘೋಷಣೆ ಆಗಲಿದೆ. ಈ ದಿನಕ್ಕಾಗಿ ಸುದೀಪ್ ಫ್ಯಾನ್ಸ್ ಕಾದಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಆ ಬಳಿಕ ಸುದೀಪ್ ಯಾವುದೇ ಹೊಸ ಸಿನಿಮಾ ಅನೌನ್ಸ್ ಮಾಡಲಿಲ್ಲ. ಕೆಲ ಸಮಯ ಕಿಚ್ಚ ರಾಜಕೀಯದಲ್ಲೂ ಬ್ಯುಸಿ ಆದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಅವರು ಪ್ರಚಾರ ಮಾಡಿದರು. ಈಗ ಚುನಾವಣೆ ಮುಗಿದಿದೆ. ಈಗ ಅವರು ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಟ್ವೀಟ್ ಮಾಡಿದ್ದ ಸುದೀಪ್ ಅವರು ಮೇ 22ರಂದು ಸಿನಿಮಾ ಶೂಟಿಂಗ್​ನಲ್ಲಿ ಭಾಗಿ ಆಗುವುದಾಗಿ ಹೇಳಿದ್ದರು. ಅಂತೆಯೇ ಅವರು ಭರ್ಜರಿಯಾಗಿ ಪ್ರೋಮೋಶೂಟ್ ಮಾಡಿಸುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ್ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಭಾಷಾ’ ಚಿತ್ರದ ಪ್ರೋಮೋಶೂಟ್ ಇದು ಎಂದು ಹೇಳಲಾಗುತ್ತಿದೆ.

ಇದರ ಹೊರತಾಗಿ ಇನ್ನೂ ಎರಡು ಸಿನಿಮಾಗಳಲ್ಲಿ ಸುದೀಪ್ ನಟಿಸಲಿದ್ದಾರೆ. ತಮಿಳಿನ ನಿರ್ದೇಶಕ ಚರಣ್ ಜೊತೆ ಸುದೀಪ್​ ಕೈ ಜೋಡಿಸುತ್ತಾರೆ ಎನ್ನಲಾಗಿದೆ. ‘ಬಿಲ್ಲ ರಂಗ ಭಾಷಾ’ ಹಾಗೂ ಚರಣ್ ಜೊತೆಗಿನ ಸಿನಿಮಾ ಬಹುತೇಕ ಒಟ್ಟೊಟ್ಟಿಗೆ ಚಿತ್ರೀಕರಣಗೊಳ್ಳಲಿವೆ ಎನ್ನಲಾಗುತ್ತಿವೆ. ಇವೆರಡು ಸಿನಿಮಾಗಳ ಬಳಿಕ ನಂದ ಕಿಶೋರ್ ಅವರ ಜೊತೆ ಸುದೀಪ್ ಸಿನಿಮಾ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ