‘ಮ್ಯಾಕ್ಸ್​ ಸಿನಿಮಾ ಅಪ್​ಡೇಟ್​ ಬಗ್ಗೆ ವ್ಯಂಗ್ಯ ಬೇಡ’: ಸುದೀಪ್​ ಖಡಕ್​ ಎಚ್ಚರಿಕೆ

ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಮುಗಿಸಿದ ಬಳಿಕ ಸಿಸಿಎಲ್​ನತ್ತ ಮುಖ ಮಾಡಿದ್ದಾರೆ. ಇದರ ಜೊತೆಗೆ ‘ಮ್ಯಾಕ್ಸ್​’ ಸಿನಿಮಾದ ಕೆಲಸಗಳೂ ಭರದಿಂದ ಸಾಗುತ್ತಿವೆ. ಈ ಚಿತ್ರದಿಂದ ಅಪ್​ಡೇಟ್​ ಬರುವುದು ತಡವಾಗುತ್ತಿದೆ ಎಂಬ ಕಾರಣಕ್ಕೆ ಕೆಲವು ನೆಟ್ಟಿಗರು ವ್ಯಂಗ್ಯ ಮಾಡುತ್ತಿದ್ದಾರೆ. ಅಂಥವರಿಗೆ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಮಾಡಿರುವ ಟ್ವೀಟ್​ ವೈರಲ್​ ಆಗಿದೆ.

‘ಮ್ಯಾಕ್ಸ್​ ಸಿನಿಮಾ ಅಪ್​ಡೇಟ್​ ಬಗ್ಗೆ ವ್ಯಂಗ್ಯ ಬೇಡ’: ಸುದೀಪ್​ ಖಡಕ್​ ಎಚ್ಚರಿಕೆ
ಕಿಚ್ಚ ಸುದೀಪ್​
Follow us
|

Updated on: Feb 08, 2024 | 12:47 PM

ನಟ ಕಿಚ್ಚ ಸುದೀಪ್​ (Kichcha Sudeep) ಅವರು ತುಂಬ ಬ್ಯುಸಿ ಆಗಿದ್ದಾರೆ. ಇತ್ತೀಚೆಗಷ್ಟೇ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮದ ನಿರೂಪಣೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಅದರ ಜೊತೆಗೆ ಅವರಿಗೆ ಕ್ರಿಕೆಟ್​ನಲ್ಲೂ ಆಸಕ್ತಿ ಇರುವುದರಿಂದ ‘ಸೆಲೆಬ್ರಿಟಿ ಕ್ರಿಕೆಟ್​ ಲೀಗ್​’ (CCL) ಕಡೆಗೂ ಗಮನ ಹರಿಸಿದ್ದಾರೆ. ಈ ಬಾರಿ ‘ಸಿಸಿಎಲ್’ 10ನೇ ಸೀಸನ್​ ಆದ್ದರಿಂದ ನಿರೀಕ್ಷೆ ಜೋರಾಗಿದೆ. ಬಿಗ್​ ಬಾಸ್​, ಕ್ರಿಕೆಟ್​ ನಡುವೆ ‘ಮ್ಯಾಕ್ಸ್​’ ಸಿನಿಮಾದ ಕೆಲಸಗಳನ್ನೂ ಸುದೀಪ್​ ಮರೆತಿಲ್ಲ. ಅದರ ಬಗ್ಗೆಯೂ ಅವರು ಗಮನ ಹರಿಸಿದ್ದಾರೆ. ಈ ನಡುವೆ ‘ಮ್ಯಾಕ್ಸ್​’ (Max Movie) ಸಿನಿಮಾದಿಂದ ಅಪ್​ಡೇಟ್ಸ್​ ಬರುತ್ತಿಲ್ಲ ಎಂಬುದು ಕೆಲವರ ದೂರು. ಇನ್ನೂ ಕೆಲವರು ಈ ವಿಚಾರದಲ್ಲಿ ವ್ಯಂಗ್ಯ ಮಾಡಿರುವುದು ಸುದೀಪ್​ ಅವರ ಗಮನಕ್ಕೆ ಬಂದಿದೆ. ಅದಕ್ಕೆ ಅವರು ಖಡಕ್​ ಉತ್ತರ ನೀಡಿದ್ದಾರೆ.

‘ಅಪ್​ಡೇಟ್ಸ್​ ಬಗ್ಗೆ ಅನೇಕರು ಟ್ವೀಟ್​ಗಳನ್ನು ಮಾಡುತ್ತಿರುವುದು ನೋಡಲು ಕ್ರೇಜಿ ಎನಿಸುತ್ತದೆ. ಬಿಡುಗಡೆ ಆಗುತ್ತಿರುವ ಬೇರೆ ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಅಥವಾ ಬೇರೆ ನಟರ ಜೊತೆ ಪೈಪೋಟಿ ಮಾಡಲು ಅಪ್​ಡೇಟ್ಸ್​ ನೀಡುವುದಿಲ್ಲ. ಚಿತ್ರತಂಡದಿಂದ ಪೂರ್ಣವಾಗಿ ಏನನ್ನಾದರೂ ಅನೌನ್ಸ್​ ಮಾಡಬೇಕು ಎಂದಾಗ ಅಪ್​ಡೇಟ್ಸ್​ ನೀಡಲಾಗುವುದು’ ಎಂದು ಸುದೀಪ್​ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್ ಮುಗಿದ ಬಳಿಕ ಸುದೀಪ್​ಗೆ ಸಂಗೀತಾ ಶೃಂಗೇರಿ ವಿಶೇಷ ಮಾತು

‘ನನ್ನ ಕೆಲಸದ ಬಗ್ಗೆ ನೀವೆಲ್ಲರೂ ತೋರಿಸಿದ ಆಸಕ್ತಿಯನ್ನು ನಾನು ಯಾವಾಗಲೂ ಮೆಚ್ಚಿಕೊಂಡಿದ್ದೇನೆ. ಆದರೆ ಬಿಗ್​ ಬಾಸ್ ಬಗ್ಗೆ ಮತ್ತು ಸಿಸಿಎಲ್​ ಬಗ್ಗೆ ನೀವು ವ್ಯಂಗ್ಯ ಮಾಡಿದರೆ ಅದರಿಂದ ಒಂದು ಸಿನಿಮಾಗೆ ಸರಿಯಾದ ರೀತಿಯಲ್ಲಿ ಇಂಟರೆಸ್ಟ್​ ತೋರಿಸಿದಂತೆ ಆಗುವುದಿಲ್ಲ. ಮ್ಯಾಕ್ಸ್​ ಸಿನಿಮಾ ಚೆನ್ನಾಗಿ ಮೂಡಿಬರುತ್ತಿದೆ. ನಿಮ್ಮನ್ನು ಮನರಂಜಿಸಲು ಅದೇ ನಮ್ಮ ಮೊದಲು ಆದ್ಯತೆ. ಅದಕ್ಕಾಗಿ ಸಾಧ್ಯವಿರುವ ರೀತಿಯಲ್ಲಿ ಪ್ರಯತ್ನಿಸುತ್ತಿದ್ದೇವೆ’ ಎಂದು ಸುದೀಪ್​ ಅವರು ಬರೆದುಕೊಂಡಿದ್ದಾರೆ.

‘ಮ್ಯಾಕ್ಸ್​’ ಸಿನಿಮಾಗೆ ಮಹಾಬಲಿಪುರಂನಲ್ಲಿ ಶೂಟಿಂಗ್​ ನಡೆಯುತ್ತಿದೆ. ತಮಿಳಿನ ವಿಜಯ್​ ಕಾರ್ತಿಕೇಯನ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಾಲಿವುಡ್​ ನಿರ್ಮಾಪಕ ಕಲೈಪುಲಿ ಎಸ್​. ಧಾನು ಅವರು ಈ ಸಿನಿಮಾವನ್ನು ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೊದಲು ಬಿಡುಗಡೆಯಾದ ಫಸ್ಲ್​ ಗ್ಲಿಂಪ್ಸ್​ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು. ಈ ಸಿನಿಮಾದಲ್ಲಿ ಸುದೀಪ್​ ಅವರು ರಗಡ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’