ಹಿರಿತೆರೆಗೆ ಬಡ್ತಿ ಪಡೆದ ಅಥರ್ವಗೆ ಸುದೀಪ್ ಸಾಥ್ ‘ಟೇಲ್ಸ್ ಆಫ್ ಮಹಾನಗರ’ಕ್ಕೆ ಕಿಚ್ಚನ ಖಡಕ್ ಧ್ವನಿ

Kichcha Sudeep: ನಟ ಕಿಚ್ಚ ಸುದೀಪ್ ಮತ್ತೊಮ್ಮೆ ಹೊಸಬರ ತಂಡಕ್ಕೆ ಬೆಂಬಲ ನೀಡಿದ್ದಾರೆ, ಯುವಕರ ಹೊಸ ಪ್ರಯತ್ನ 'ಟೇಲ್ಸ್ ಆಫ್ ಮಹಾನಗರ' ಸಿನಿಮಾದ ಟೀಸರ್​ಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ಹಿರಿತೆರೆಗೆ ಬಡ್ತಿ ಪಡೆದ ಅಥರ್ವಗೆ ಸುದೀಪ್ ಸಾಥ್ 'ಟೇಲ್ಸ್ ಆಫ್ ಮಹಾನಗರ'ಕ್ಕೆ ಕಿಚ್ಚನ ಖಡಕ್ ಧ್ವನಿ
ಟೇಲ್ಸ್ ಆಫ್ ಮಹಾನಗರ
Follow us
|

Updated on: Aug 12, 2023 | 10:57 PM

ನಟ ಕಿಚ್ಚ ಸುದೀಪ್ (Kichcha Sudeep) ಹೊಸ ಪ್ರತಿಭೆಗಳಿಗೆ ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಹಲವು ಹೊಸ ಚಿತ್ರ ತಂಡಗಳಿಗೆ ಸೂಕ್ತ ರೀತಿಯ ಸಹಾಯ, ಮಾರ್ಗದರ್ಶನಗಳನ್ನು ನೀಡಿದ್ದಾರೆ, ನೀಡುತ್ತಲೇ ಇದ್ದಾರೆ. ಇದೀಗ ಯುವ ತಂಡವೊಂದು ಮಾಡಿರುವ ಹೊಸ ಸಿನಿಮಾಕ್ಕೆ ಬೆಂಬಲ ನೀಡಿರುವ ಸುದೀಪ್, ಟೀಸರ್​ಗೆ (Teaser) ತಮ್ಮ ಧ್ವನಿ ನೀಡಿದ್ದಾರೆ. ಆ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ಪುನರ್ ​ವಿವಾಹ’, ‘ಪತ್ತೆದಾರಿ ಪ್ರತಿಭಾ’ ಧಾರಾವಾಹಿಗಳಲ್ಲಿ ನಟಿಸಿರುವ ಅಥರ್ವ ನಾಯಕನಾಗಿ ನಟಿಸಿರುವ ‘ಟೇಲ್ಸ್ ಆಫ್ ಮಹಾನಗರ’ ಸಿನಿಮಾದ ಟೀಸರ್ ಇದೀಗ ಬಿಡುಗಡೆ ಆಗಿದ್ದು, ಟೀಸರ್​ಗೆ ನಟ ಕಿಚ್ಚ ಸುದೀಪ್ ಹಿನ್ನೆಲೆ ಧ್ವನಿ ನೀಡಿದ್ದಾರೆ. ಕಿರುತೆರೆಯಿಂದ ಹಿರಿತೆರೆಗೆ ಬಡ್ತಿ ಪಡೆದಿರುವ ಅಥರ್ವ, ಜನಪ್ರಿಯ ನಿರ್ದೇಶಕ ಬಿ.ಎನ್ ವಿಜಯ್ ಕುಮಾರ್(ಗೆಜ್ಜೆನಾದ) ಅವರ ಪುತ್ರ. ‘ಟೇಲ್ಸ್ ಆಫ್ ಮಹಾನಗರ’ ಸಿನಿಮಾವನ್ನು ಧರ್ಮೇಂದ್ರ ಎಂ ರಾವ್ ಅವರೊಟ್ಟಿಗೆ ಸೇರಿ ಇವರೇ ನಿರ್ಮಾಣ ಮಾಡಿದ್ದಾರೆ. ವಿಜಯ್ ಕುಮಾರ್ ಅವರು ಈ ಹಿಂದೆ “ಗೆಜ್ಜೆನಾದ”, ” ನಂದ ಲವ್ಸ್ ನಂದಿತಾ”, “ಕನ್ನಡದ ಕಂದ”, “ಆಟ” ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

‘ಟೇಲ್ಸ್ ಆಫ್ ಮಹಾನಗರ’ ಸಿನಿಮಾವು ಮಹಾನಗರವೊಂದರಲ್ಲಿ ನಡೆಯುವ ಕಥೆಯಾಗಿದೆ. ಅಧಿಕಾರ, ಹೆಣ್ಣು ಹಾಗೂ ಧರ್ಮ ಈ ಮೂರು ವಿಷಯಗಳಿಗೆ ಸಂಬಂಧಿಸಿದ ಮೂರು ವಿಭಿನ್ನ ಕಥೆಗಳು ಸಿನಿಮಾದಲ್ಲಿವೆ. ಈ ಸಿನಿಮಾಕ್ಕೆ ನಾಯಕ ಅಥರ್ವ್ ಸ್ವತಃ ಕಥೆ ಬರೆದಿದ್ದಾರೆ. ಚಿತ್ರಕಥೆಯನ್ನು ಅಥರ್ವ್ ಹಾಗೂ ರಾಜೀವ್ ಕಿರಣ್ ವೆನಿಯಲ್ ಒಟ್ಟು ಸೇರಿ ರಚಿಸಿದ್ದಾರೆ. ಸಿನಿಮಾದಲ್ಲಿ ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರೆಮೋಲ, ಸಂಪತ್ ಮೈತ್ರೇಯ, ಬಿ.ಸುರೇಶ್, ರೂಪಾ ರಾಯಪ್ಪ, ಆಶೀಶ್, ಬಿ.ಎಂ.ವೆಂಕಟೇಶ್, ಮೋಹನ್, ಆರ್ ಜೆ ಅನೂಪ, ನಾಗರಾಜ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ:ಕಿಚ್ಚ ಸುದೀಪ್ v/s ನಿರ್ಮಾಪಕ ಕುಮಾರ್: ಮೊದಲ ದಿನದ ಸಭೆ ಅಂತ್ಯ, ನಾಳೆಯೂ ಮುಂದುವರೆಯಲಿದೆ ಚರ್ಚೆ

ಕೆಲವು ಜಾಹೀರಾತು, ಕಿರುಚಿತ್ರ ಹಾಗೂ ಧಾರಾವಾಹಿಗಳನ್ನು ನಿರ್ದೇಶನ ಮಾಡಿರುವ ರಾಜೀವ್ ಕಿರಣ್ ವೆನಿಯಲ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಈಗ ಬಿಡುಗಡೆ ಆಗಿರುವ ಟೀಸರ್​ನಲ್ಲಿ ಕೆಲವು ಗಮನಾರ್ಹ ಅಂಶಗಳಿದ್ದು, ಟೀಸರ್ ಕುತೂಹಲ ಕೆರಳಿಸುವಂತಿದೆ. ಸಿನಿಮಾದ ಛಾಯಾಗ್ರಹಣವನ್ನು ರೌಶನ್ ಜಾ ಮಾಡಿದ್ದಾರೆ. ಪ್ರದೀಪ್ ಗೋಪಾಲ್ ಸಂಕಲನ ಹಾಗೂ ಸಿದ್ಧಾರ್ಥ್ ಪರಾಶರ್ ಸಂಗೀತ ನಿರ್ದೇಶನ ಸಿನಿಮಾಕ್ಕಿದೆ. ಸಿನಿಮಾವು ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಲಿದೆ.

ಇನ್ನು ಕಿಚ್ಚ ಸುದೀಪ್ ಅವರು ಪ್ರಸ್ತುತ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚೆನ್ನೈ ಸಮೀಪದಲ್ಲಿ ಹೊಸ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಟೀಸರ್ ಬಹುವಾಗಿ ಗಮನ ಸೆಳೆದಿದ್ದು, ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಶೀಘ್ರದಲ್ಲಿಯೇ ಸಿನಿಮಾದ ಹೆಸರು ಘೋಷಣೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ