AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲೇ ಪುಣ್ಯಭೂಮಿ ಆಗ್ಬೇಕು’: ವಿಷ್ಣು ಸ್ಮಾರಕದ ಬಗ್ಗೆ ಸುದೀಪ್​ ಪ್ರತಿಕ್ರಿಯೆ

ವಿಷ್ಣುವರ್ಧನ್​ ಅವರ ಪುಣ್ಯಭೂಮಿಗೆ ಸಂಬಂಧಿಸಿದಂತೆ ಅಭಿಮಾನಿಗಳು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ‘ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ’ ಎಂದು ಕಿಚ್ಚ ಸುದೀಪ್​ ಅವರು ಹೇಳಿದ್ದಾರೆ.

‘ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲೇ ಪುಣ್ಯಭೂಮಿ ಆಗ್ಬೇಕು’: ವಿಷ್ಣು ಸ್ಮಾರಕದ ಬಗ್ಗೆ ಸುದೀಪ್​ ಪ್ರತಿಕ್ರಿಯೆ
ವಿಷ್ಣುವರ್ಧನ್​ ಸಮಾಧಿ, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Dec 17, 2023 | 7:35 AM

Share

ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್​ (Vishnuvardhan) ಅವರ ಸ್ಮಾರಕ ಹಾಗೂ ಪುಣ್ಯಭೂಮಿಗೆ ಸಂಬಂಧಿಸಿದಂತೆ ಮೊದಲಿನಿಂದಲೂ ಗೊಂದಲಗಳು ಏರ್ಪಟ್ಟಿವೆ. ಈ ಕುರಿತು ನಟ ಕಿಚ್ಚ ಸುದೀಪ್​ ಅವರು ಮತ್ತೊಮ್ಮೆ ತಮ್ಮ ಅನಿಸಿಕೆ ಏನು ಎಂಬುದನ್ನು ಹಂಚಿಕೊಂಡಿದ್ದಾರೆ. ಇಂದು (ಡಿ.17) ವಿಷ್ಣುವರ್ಧನ್​ ಅವರ ಅಭಿಮಾನಿಗಳು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್​ (Kichcha Sudeep) ಅವರು ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಸುದೀಪ್ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

‘ಡಾ. ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ’ ಎಂದು ಕಿಚ್ಚ ಸುದೀಪ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಪ್ರತಿಭಟನೆ ಯಾಕೆ?

ಡಾ. ವಿಷ್ಣುವರ್ಧನ್​ ಅವರ ಅಂತ್ಯ ಸಂಸ್ಕಾರವಾದ ಅಭಿಮಾನ್‌ ಸ್ಟುಡಿಯೋ ಒಳಗೆ ಪ್ರವೇಶಿಸಲು ಅಭಿಮಾನಿಗಳಿಗೆ ನಿರ್ಬಂಧ ಹೇರಲಾಗುತ್ತಿದೆ. ಅಭಿಮಾನ್‌ ಸ್ಟುಡಿಯೋದ ಮಾಲೀಕರಿಂದ ಈ ರೀತಿ ಆಗುತ್ತಿದೆ ಎಂದು ವಿಷ್ಣು ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಆಚರಿಸಲು ಹಲವಾರು ತೊಂದರೆಗಳನ್ನು ನೀಡಲಾಗುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದು, ಈ ಸಂಬಂಧವಾಗಿ ಪ್ರತಿಭಟನೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಅವಿನಾಶ್-ಮಾಳವಿಕಾ ಜೀವನದಲ್ಲಿ ವಿಷ್ಣುವರ್ಧನ್​ಗೆ ಏಕಷ್ಟು ಪ್ರಾಧಾನ್ಯತೆ? ದೇವರ ಕೋಣೆಯಲ್ಲಿ ವಿಷ್ಣು ಫೋಟೊ ಏಕೆ?

ಇಂದು (ಡಿ.17) ಡಾ. ವಿಷ್ಣುವರ್ಧನ್‌ ಅಭಿಮಾನಿ ಸಂಘಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಮಾಡಲಾಗುತ್ತಿದೆ. ಫ್ರೀಡಂ ಪಾರ್ಕ್​ನಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ಕನ್ನಡಪರ ಸಂಘಟನೆಗಳು, ಕಲಾವಿದರ ಸಂಘ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ವಿಷ್ಣುವರ್ಧನ್‌ ಅವರ ಒಡನಾಡಿಗಳೆಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ