AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್

ವಾರದ ಪಂಚಾಯ್ತಿಯಲ್ಲಿ ಲಾಯರ್ ಜಗದೀಶ್ ಪರವಾಗಿ ಕಿಚ್ಚ ಸುದೀಪ್ ಮಾತನಾಡಿದ್ದರು. ಲಾಯರ್ ಜಗದೀಶ್ ಅನ್ನು ಇತರೆ ಸ್ಪರ್ಧಿಗಳು ಪ್ರವೋಕ್ ಮಾಡಿದ್ದರಿಂದಲೇ ಆ ವ್ಯಕ್ತಿ ರೆಬೆಲ್ ಆದರು ಎಂದರು. ಜೊತೆಗೆ ರಂಜಿತ್ ಹೊರ ಹೋದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್
ಸುದೀಪ್​-ರಂಜಿತ್
ರಾಜೇಶ್ ದುಗ್ಗುಮನೆ
|

Updated on: Oct 21, 2024 | 7:05 AM

Share

ರಂಜಿತ್ ಅವರಿಗೆ ಈ ಬಾರಿಯ ಬಿಗ್ ಬಾಸ್​ನಲ್ಲಿ ಫಿನಾಲೆವರೆಗೆ ಹೋಗುವ ಅವಕಾಶ ಇತ್ತು. ಅವರು ಟಾಪ್​ ಐದರಲ್ಲಿ ಒಬ್ಬರಾಗುತ್ತಾರೆ ಎಂದು ಅನೇಕರು ಊಹಿಸಿದ್ದರು. ಆದರೆ, ಅವರು ಮೂರನೇ ವಾರವೇ ಎಲಿಮಿನೇಟ್ ಆಗಿದ್ದಾರೆ. ಅವರು ಜಗದೀಶ್ ಅವರ ಮೈ ಮುಟ್ಟಿದ ಆರೋಪದಲ್ಲಿ ಮನೆಗೆ ಹೋಗಿದ್ದಾರೆ. ಈಗ ಅವರ ಮನೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ರಂಜಿತ್ ಆಪ್ತರು. ರಂಜಿತ್ ಈ ರೀತಿ ಮಾಡಿಕೊಂಡು ಎಲಿಮಿನೇಟ್ ಆದ ಬಗ್ಗೆ ಸುದೀಪ್​ಗೆ ಕೋಪ ಇದೆ. ಅವರು ಇನ್ನೂ ಹಲವು ದಿನ ಬಿಗ್ ಬಾಸ್ ಮನೆಯಲ್ಲಿ ಇರಬೇಕು ಎಂಬುದು ಸುದೀಪ್ ಆಸೆ ಆಗಿತ್ತು. ಆದರೆ, ಸುಖಾಸುಮ್ಮನೆ ಫೈಟ್ ಮಾಡಿಕೊಂಡು ಅವರು ಹೊರ ಹೋಗಿದ್ದಾರೆ. ಈ ಬಗ್ಗೆ ವೀಕೆಂಡ್​ನಲ್ಲಿ ಸುದೀಪ್ ಮಾತನಾಡಿದ್ದಾರೆ.

‘ಬಿಗ್ ಬಾಸ್’ ವೇದಿಕೆ ಮೇಲೆ ರಂಜಿತ್ ಎಲಿಮಿನೇಟ್ ಆದ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ರಂಜಿತ್ ಅವರ ಎಲಿಮಿನೇಷನ್ ಬಗ್ಗೆ ಮಾತನಾಡುತ್ತಾ ನಕ್ಕಿದ್ದಾರೆ. ‘ಎಲಿಮಿನೇಟ್ ಆದ ರಂಜಿತ್ ಮನೆಯಲ್ಲಿ ಈಗ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಯಾವುದು ಗೊತ್ತಾ ಆ ಸಾಂಗ್? ಯಾರೋ ಯಾರೋ ಗೀಚಿ ಹೋದ ಹಾಡು’ ಎಂದು ಸುದೀಪ್ ಅಣಕಿಸಿದ್ದಾರೆ.

ಕಳೆದ ವಾರ ನಡೆದ ಘಟನೆಯಲ್ಲಿ ಮಾತನಾಡಬೇಕಿದ್ದಿದ್ದು ಹಂಸಾ ಹಾಗೂ ಜಗದೀಶ್. ಏಕೆಂದರೆ ಹಂಸಾ ವಿರುದ್ಧ ಜಗದೀಶ್ ಅವರು ಕೆಟ್ಟ ಪದ ಬಳಕೆ ಮಾಡಿದ್ದರು. ಈ ಪ್ರಕರಣದಲ್ಲಿ ರಂಜಿತ್ ಕೂಡ ಭಾಗಿ ಆದರು. ಅವರು ತಮಗೆ ಸಂಬಂಧವೇ ಇಲ್ಲದ ವಿಚಾರದಲ್ಲಿ ತಲೆ ಹಾಕಿ ಎಲ್ಲವನ್ನೂ ಹಾಳು ಮಾಡಿಕೊಂಡರು. ಇದರಿಂದ ಅವರಿಗೆ ಸಾಕಷ್ಟು ನಷ್ಟ ಆಗಿದೆ.

ಇದನ್ನೂ ಓದಿ: ಜಗದೀಶ್​ ಬಗ್ಗೆ ಬಿಗ್​ಬಾಸ್​ ತೋರಿಸದೇ ಇದ್ದಿದ್ದನ್ನು ಹೇಳಿದ ರಂಜಿತ್

ಜಗದೀಶ್ ಅವರು ಬಳಕೆ ಮಾಡಿದ ಅವಾಚ್ಯ ಶಬ್ದಗಳ ವಿಚಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಜಗಳವೇ ನಡೆದು ಹೋಗಿದೆ. ಇದು ಕಳೆದ ವಾರದ ಹೈಲೈಟ್ ಆಗಿತ್ತು. ಈಗ ದೊಡ್ಮನೆಗೆ ಹನುಮಂತ್ ಅವರು ವೈಲ್ಡ್ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ