AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್

ವಾರದ ಪಂಚಾಯ್ತಿಯಲ್ಲಿ ಲಾಯರ್ ಜಗದೀಶ್ ಪರವಾಗಿ ಕಿಚ್ಚ ಸುದೀಪ್ ಮಾತನಾಡಿದ್ದರು. ಲಾಯರ್ ಜಗದೀಶ್ ಅನ್ನು ಇತರೆ ಸ್ಪರ್ಧಿಗಳು ಪ್ರವೋಕ್ ಮಾಡಿದ್ದರಿಂದಲೇ ಆ ವ್ಯಕ್ತಿ ರೆಬೆಲ್ ಆದರು ಎಂದರು. ಜೊತೆಗೆ ರಂಜಿತ್ ಹೊರ ಹೋದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್
ಸುದೀಪ್​-ರಂಜಿತ್
ರಾಜೇಶ್ ದುಗ್ಗುಮನೆ
|

Updated on: Oct 21, 2024 | 7:05 AM

Share

ರಂಜಿತ್ ಅವರಿಗೆ ಈ ಬಾರಿಯ ಬಿಗ್ ಬಾಸ್​ನಲ್ಲಿ ಫಿನಾಲೆವರೆಗೆ ಹೋಗುವ ಅವಕಾಶ ಇತ್ತು. ಅವರು ಟಾಪ್​ ಐದರಲ್ಲಿ ಒಬ್ಬರಾಗುತ್ತಾರೆ ಎಂದು ಅನೇಕರು ಊಹಿಸಿದ್ದರು. ಆದರೆ, ಅವರು ಮೂರನೇ ವಾರವೇ ಎಲಿಮಿನೇಟ್ ಆಗಿದ್ದಾರೆ. ಅವರು ಜಗದೀಶ್ ಅವರ ಮೈ ಮುಟ್ಟಿದ ಆರೋಪದಲ್ಲಿ ಮನೆಗೆ ಹೋಗಿದ್ದಾರೆ. ಈಗ ಅವರ ಮನೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ರಂಜಿತ್ ಆಪ್ತರು. ರಂಜಿತ್ ಈ ರೀತಿ ಮಾಡಿಕೊಂಡು ಎಲಿಮಿನೇಟ್ ಆದ ಬಗ್ಗೆ ಸುದೀಪ್​ಗೆ ಕೋಪ ಇದೆ. ಅವರು ಇನ್ನೂ ಹಲವು ದಿನ ಬಿಗ್ ಬಾಸ್ ಮನೆಯಲ್ಲಿ ಇರಬೇಕು ಎಂಬುದು ಸುದೀಪ್ ಆಸೆ ಆಗಿತ್ತು. ಆದರೆ, ಸುಖಾಸುಮ್ಮನೆ ಫೈಟ್ ಮಾಡಿಕೊಂಡು ಅವರು ಹೊರ ಹೋಗಿದ್ದಾರೆ. ಈ ಬಗ್ಗೆ ವೀಕೆಂಡ್​ನಲ್ಲಿ ಸುದೀಪ್ ಮಾತನಾಡಿದ್ದಾರೆ.

‘ಬಿಗ್ ಬಾಸ್’ ವೇದಿಕೆ ಮೇಲೆ ರಂಜಿತ್ ಎಲಿಮಿನೇಟ್ ಆದ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ರಂಜಿತ್ ಅವರ ಎಲಿಮಿನೇಷನ್ ಬಗ್ಗೆ ಮಾತನಾಡುತ್ತಾ ನಕ್ಕಿದ್ದಾರೆ. ‘ಎಲಿಮಿನೇಟ್ ಆದ ರಂಜಿತ್ ಮನೆಯಲ್ಲಿ ಈಗ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಯಾವುದು ಗೊತ್ತಾ ಆ ಸಾಂಗ್? ಯಾರೋ ಯಾರೋ ಗೀಚಿ ಹೋದ ಹಾಡು’ ಎಂದು ಸುದೀಪ್ ಅಣಕಿಸಿದ್ದಾರೆ.

ಕಳೆದ ವಾರ ನಡೆದ ಘಟನೆಯಲ್ಲಿ ಮಾತನಾಡಬೇಕಿದ್ದಿದ್ದು ಹಂಸಾ ಹಾಗೂ ಜಗದೀಶ್. ಏಕೆಂದರೆ ಹಂಸಾ ವಿರುದ್ಧ ಜಗದೀಶ್ ಅವರು ಕೆಟ್ಟ ಪದ ಬಳಕೆ ಮಾಡಿದ್ದರು. ಈ ಪ್ರಕರಣದಲ್ಲಿ ರಂಜಿತ್ ಕೂಡ ಭಾಗಿ ಆದರು. ಅವರು ತಮಗೆ ಸಂಬಂಧವೇ ಇಲ್ಲದ ವಿಚಾರದಲ್ಲಿ ತಲೆ ಹಾಕಿ ಎಲ್ಲವನ್ನೂ ಹಾಳು ಮಾಡಿಕೊಂಡರು. ಇದರಿಂದ ಅವರಿಗೆ ಸಾಕಷ್ಟು ನಷ್ಟ ಆಗಿದೆ.

ಇದನ್ನೂ ಓದಿ: ಜಗದೀಶ್​ ಬಗ್ಗೆ ಬಿಗ್​ಬಾಸ್​ ತೋರಿಸದೇ ಇದ್ದಿದ್ದನ್ನು ಹೇಳಿದ ರಂಜಿತ್

ಜಗದೀಶ್ ಅವರು ಬಳಕೆ ಮಾಡಿದ ಅವಾಚ್ಯ ಶಬ್ದಗಳ ವಿಚಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಜಗಳವೇ ನಡೆದು ಹೋಗಿದೆ. ಇದು ಕಳೆದ ವಾರದ ಹೈಲೈಟ್ ಆಗಿತ್ತು. ಈಗ ದೊಡ್ಮನೆಗೆ ಹನುಮಂತ್ ಅವರು ವೈಲ್ಡ್ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ