AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್

ವಾರದ ಪಂಚಾಯ್ತಿಯಲ್ಲಿ ಲಾಯರ್ ಜಗದೀಶ್ ಪರವಾಗಿ ಕಿಚ್ಚ ಸುದೀಪ್ ಮಾತನಾಡಿದ್ದರು. ಲಾಯರ್ ಜಗದೀಶ್ ಅನ್ನು ಇತರೆ ಸ್ಪರ್ಧಿಗಳು ಪ್ರವೋಕ್ ಮಾಡಿದ್ದರಿಂದಲೇ ಆ ವ್ಯಕ್ತಿ ರೆಬೆಲ್ ಆದರು ಎಂದರು. ಜೊತೆಗೆ ರಂಜಿತ್ ಹೊರ ಹೋದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್
ಸುದೀಪ್​-ರಂಜಿತ್
ರಾಜೇಶ್ ದುಗ್ಗುಮನೆ
|

Updated on: Oct 21, 2024 | 7:05 AM

Share

ರಂಜಿತ್ ಅವರಿಗೆ ಈ ಬಾರಿಯ ಬಿಗ್ ಬಾಸ್​ನಲ್ಲಿ ಫಿನಾಲೆವರೆಗೆ ಹೋಗುವ ಅವಕಾಶ ಇತ್ತು. ಅವರು ಟಾಪ್​ ಐದರಲ್ಲಿ ಒಬ್ಬರಾಗುತ್ತಾರೆ ಎಂದು ಅನೇಕರು ಊಹಿಸಿದ್ದರು. ಆದರೆ, ಅವರು ಮೂರನೇ ವಾರವೇ ಎಲಿಮಿನೇಟ್ ಆಗಿದ್ದಾರೆ. ಅವರು ಜಗದೀಶ್ ಅವರ ಮೈ ಮುಟ್ಟಿದ ಆರೋಪದಲ್ಲಿ ಮನೆಗೆ ಹೋಗಿದ್ದಾರೆ. ಈಗ ಅವರ ಮನೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ರಂಜಿತ್ ಆಪ್ತರು. ರಂಜಿತ್ ಈ ರೀತಿ ಮಾಡಿಕೊಂಡು ಎಲಿಮಿನೇಟ್ ಆದ ಬಗ್ಗೆ ಸುದೀಪ್​ಗೆ ಕೋಪ ಇದೆ. ಅವರು ಇನ್ನೂ ಹಲವು ದಿನ ಬಿಗ್ ಬಾಸ್ ಮನೆಯಲ್ಲಿ ಇರಬೇಕು ಎಂಬುದು ಸುದೀಪ್ ಆಸೆ ಆಗಿತ್ತು. ಆದರೆ, ಸುಖಾಸುಮ್ಮನೆ ಫೈಟ್ ಮಾಡಿಕೊಂಡು ಅವರು ಹೊರ ಹೋಗಿದ್ದಾರೆ. ಈ ಬಗ್ಗೆ ವೀಕೆಂಡ್​ನಲ್ಲಿ ಸುದೀಪ್ ಮಾತನಾಡಿದ್ದಾರೆ.

‘ಬಿಗ್ ಬಾಸ್’ ವೇದಿಕೆ ಮೇಲೆ ರಂಜಿತ್ ಎಲಿಮಿನೇಟ್ ಆದ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ರಂಜಿತ್ ಅವರ ಎಲಿಮಿನೇಷನ್ ಬಗ್ಗೆ ಮಾತನಾಡುತ್ತಾ ನಕ್ಕಿದ್ದಾರೆ. ‘ಎಲಿಮಿನೇಟ್ ಆದ ರಂಜಿತ್ ಮನೆಯಲ್ಲಿ ಈಗ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಯಾವುದು ಗೊತ್ತಾ ಆ ಸಾಂಗ್? ಯಾರೋ ಯಾರೋ ಗೀಚಿ ಹೋದ ಹಾಡು’ ಎಂದು ಸುದೀಪ್ ಅಣಕಿಸಿದ್ದಾರೆ.

ಕಳೆದ ವಾರ ನಡೆದ ಘಟನೆಯಲ್ಲಿ ಮಾತನಾಡಬೇಕಿದ್ದಿದ್ದು ಹಂಸಾ ಹಾಗೂ ಜಗದೀಶ್. ಏಕೆಂದರೆ ಹಂಸಾ ವಿರುದ್ಧ ಜಗದೀಶ್ ಅವರು ಕೆಟ್ಟ ಪದ ಬಳಕೆ ಮಾಡಿದ್ದರು. ಈ ಪ್ರಕರಣದಲ್ಲಿ ರಂಜಿತ್ ಕೂಡ ಭಾಗಿ ಆದರು. ಅವರು ತಮಗೆ ಸಂಬಂಧವೇ ಇಲ್ಲದ ವಿಚಾರದಲ್ಲಿ ತಲೆ ಹಾಕಿ ಎಲ್ಲವನ್ನೂ ಹಾಳು ಮಾಡಿಕೊಂಡರು. ಇದರಿಂದ ಅವರಿಗೆ ಸಾಕಷ್ಟು ನಷ್ಟ ಆಗಿದೆ.

ಇದನ್ನೂ ಓದಿ: ಜಗದೀಶ್​ ಬಗ್ಗೆ ಬಿಗ್​ಬಾಸ್​ ತೋರಿಸದೇ ಇದ್ದಿದ್ದನ್ನು ಹೇಳಿದ ರಂಜಿತ್

ಜಗದೀಶ್ ಅವರು ಬಳಕೆ ಮಾಡಿದ ಅವಾಚ್ಯ ಶಬ್ದಗಳ ವಿಚಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಜಗಳವೇ ನಡೆದು ಹೋಗಿದೆ. ಇದು ಕಳೆದ ವಾರದ ಹೈಲೈಟ್ ಆಗಿತ್ತು. ಈಗ ದೊಡ್ಮನೆಗೆ ಹನುಮಂತ್ ಅವರು ವೈಲ್ಡ್ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!