AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್

ವಾರದ ಪಂಚಾಯ್ತಿಯಲ್ಲಿ ಲಾಯರ್ ಜಗದೀಶ್ ಪರವಾಗಿ ಕಿಚ್ಚ ಸುದೀಪ್ ಮಾತನಾಡಿದ್ದರು. ಲಾಯರ್ ಜಗದೀಶ್ ಅನ್ನು ಇತರೆ ಸ್ಪರ್ಧಿಗಳು ಪ್ರವೋಕ್ ಮಾಡಿದ್ದರಿಂದಲೇ ಆ ವ್ಯಕ್ತಿ ರೆಬೆಲ್ ಆದರು ಎಂದರು. ಜೊತೆಗೆ ರಂಜಿತ್ ಹೊರ ಹೋದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್
ಸುದೀಪ್​-ರಂಜಿತ್
ರಾಜೇಶ್ ದುಗ್ಗುಮನೆ
|

Updated on: Oct 21, 2024 | 7:05 AM

Share

ರಂಜಿತ್ ಅವರಿಗೆ ಈ ಬಾರಿಯ ಬಿಗ್ ಬಾಸ್​ನಲ್ಲಿ ಫಿನಾಲೆವರೆಗೆ ಹೋಗುವ ಅವಕಾಶ ಇತ್ತು. ಅವರು ಟಾಪ್​ ಐದರಲ್ಲಿ ಒಬ್ಬರಾಗುತ್ತಾರೆ ಎಂದು ಅನೇಕರು ಊಹಿಸಿದ್ದರು. ಆದರೆ, ಅವರು ಮೂರನೇ ವಾರವೇ ಎಲಿಮಿನೇಟ್ ಆಗಿದ್ದಾರೆ. ಅವರು ಜಗದೀಶ್ ಅವರ ಮೈ ಮುಟ್ಟಿದ ಆರೋಪದಲ್ಲಿ ಮನೆಗೆ ಹೋಗಿದ್ದಾರೆ. ಈಗ ಅವರ ಮನೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ರಂಜಿತ್ ಆಪ್ತರು. ರಂಜಿತ್ ಈ ರೀತಿ ಮಾಡಿಕೊಂಡು ಎಲಿಮಿನೇಟ್ ಆದ ಬಗ್ಗೆ ಸುದೀಪ್​ಗೆ ಕೋಪ ಇದೆ. ಅವರು ಇನ್ನೂ ಹಲವು ದಿನ ಬಿಗ್ ಬಾಸ್ ಮನೆಯಲ್ಲಿ ಇರಬೇಕು ಎಂಬುದು ಸುದೀಪ್ ಆಸೆ ಆಗಿತ್ತು. ಆದರೆ, ಸುಖಾಸುಮ್ಮನೆ ಫೈಟ್ ಮಾಡಿಕೊಂಡು ಅವರು ಹೊರ ಹೋಗಿದ್ದಾರೆ. ಈ ಬಗ್ಗೆ ವೀಕೆಂಡ್​ನಲ್ಲಿ ಸುದೀಪ್ ಮಾತನಾಡಿದ್ದಾರೆ.

‘ಬಿಗ್ ಬಾಸ್’ ವೇದಿಕೆ ಮೇಲೆ ರಂಜಿತ್ ಎಲಿಮಿನೇಟ್ ಆದ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ರಂಜಿತ್ ಅವರ ಎಲಿಮಿನೇಷನ್ ಬಗ್ಗೆ ಮಾತನಾಡುತ್ತಾ ನಕ್ಕಿದ್ದಾರೆ. ‘ಎಲಿಮಿನೇಟ್ ಆದ ರಂಜಿತ್ ಮನೆಯಲ್ಲಿ ಈಗ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಯಾವುದು ಗೊತ್ತಾ ಆ ಸಾಂಗ್? ಯಾರೋ ಯಾರೋ ಗೀಚಿ ಹೋದ ಹಾಡು’ ಎಂದು ಸುದೀಪ್ ಅಣಕಿಸಿದ್ದಾರೆ.

ಕಳೆದ ವಾರ ನಡೆದ ಘಟನೆಯಲ್ಲಿ ಮಾತನಾಡಬೇಕಿದ್ದಿದ್ದು ಹಂಸಾ ಹಾಗೂ ಜಗದೀಶ್. ಏಕೆಂದರೆ ಹಂಸಾ ವಿರುದ್ಧ ಜಗದೀಶ್ ಅವರು ಕೆಟ್ಟ ಪದ ಬಳಕೆ ಮಾಡಿದ್ದರು. ಈ ಪ್ರಕರಣದಲ್ಲಿ ರಂಜಿತ್ ಕೂಡ ಭಾಗಿ ಆದರು. ಅವರು ತಮಗೆ ಸಂಬಂಧವೇ ಇಲ್ಲದ ವಿಚಾರದಲ್ಲಿ ತಲೆ ಹಾಕಿ ಎಲ್ಲವನ್ನೂ ಹಾಳು ಮಾಡಿಕೊಂಡರು. ಇದರಿಂದ ಅವರಿಗೆ ಸಾಕಷ್ಟು ನಷ್ಟ ಆಗಿದೆ.

ಇದನ್ನೂ ಓದಿ: ಜಗದೀಶ್​ ಬಗ್ಗೆ ಬಿಗ್​ಬಾಸ್​ ತೋರಿಸದೇ ಇದ್ದಿದ್ದನ್ನು ಹೇಳಿದ ರಂಜಿತ್

ಜಗದೀಶ್ ಅವರು ಬಳಕೆ ಮಾಡಿದ ಅವಾಚ್ಯ ಶಬ್ದಗಳ ವಿಚಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಜಗಳವೇ ನಡೆದು ಹೋಗಿದೆ. ಇದು ಕಳೆದ ವಾರದ ಹೈಲೈಟ್ ಆಗಿತ್ತು. ಈಗ ದೊಡ್ಮನೆಗೆ ಹನುಮಂತ್ ಅವರು ವೈಲ್ಡ್ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ