ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್

ವಾರದ ಪಂಚಾಯ್ತಿಯಲ್ಲಿ ಲಾಯರ್ ಜಗದೀಶ್ ಪರವಾಗಿ ಕಿಚ್ಚ ಸುದೀಪ್ ಮಾತನಾಡಿದ್ದರು. ಲಾಯರ್ ಜಗದೀಶ್ ಅನ್ನು ಇತರೆ ಸ್ಪರ್ಧಿಗಳು ಪ್ರವೋಕ್ ಮಾಡಿದ್ದರಿಂದಲೇ ಆ ವ್ಯಕ್ತಿ ರೆಬೆಲ್ ಆದರು ಎಂದರು. ಜೊತೆಗೆ ರಂಜಿತ್ ಹೊರ ಹೋದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್
ಸುದೀಪ್​-ರಂಜಿತ್
Follow us
|

Updated on: Oct 21, 2024 | 7:05 AM

ರಂಜಿತ್ ಅವರಿಗೆ ಈ ಬಾರಿಯ ಬಿಗ್ ಬಾಸ್​ನಲ್ಲಿ ಫಿನಾಲೆವರೆಗೆ ಹೋಗುವ ಅವಕಾಶ ಇತ್ತು. ಅವರು ಟಾಪ್​ ಐದರಲ್ಲಿ ಒಬ್ಬರಾಗುತ್ತಾರೆ ಎಂದು ಅನೇಕರು ಊಹಿಸಿದ್ದರು. ಆದರೆ, ಅವರು ಮೂರನೇ ವಾರವೇ ಎಲಿಮಿನೇಟ್ ಆಗಿದ್ದಾರೆ. ಅವರು ಜಗದೀಶ್ ಅವರ ಮೈ ಮುಟ್ಟಿದ ಆರೋಪದಲ್ಲಿ ಮನೆಗೆ ಹೋಗಿದ್ದಾರೆ. ಈಗ ಅವರ ಮನೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ರಂಜಿತ್ ಆಪ್ತರು. ರಂಜಿತ್ ಈ ರೀತಿ ಮಾಡಿಕೊಂಡು ಎಲಿಮಿನೇಟ್ ಆದ ಬಗ್ಗೆ ಸುದೀಪ್​ಗೆ ಕೋಪ ಇದೆ. ಅವರು ಇನ್ನೂ ಹಲವು ದಿನ ಬಿಗ್ ಬಾಸ್ ಮನೆಯಲ್ಲಿ ಇರಬೇಕು ಎಂಬುದು ಸುದೀಪ್ ಆಸೆ ಆಗಿತ್ತು. ಆದರೆ, ಸುಖಾಸುಮ್ಮನೆ ಫೈಟ್ ಮಾಡಿಕೊಂಡು ಅವರು ಹೊರ ಹೋಗಿದ್ದಾರೆ. ಈ ಬಗ್ಗೆ ವೀಕೆಂಡ್​ನಲ್ಲಿ ಸುದೀಪ್ ಮಾತನಾಡಿದ್ದಾರೆ.

‘ಬಿಗ್ ಬಾಸ್’ ವೇದಿಕೆ ಮೇಲೆ ರಂಜಿತ್ ಎಲಿಮಿನೇಟ್ ಆದ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ರಂಜಿತ್ ಅವರ ಎಲಿಮಿನೇಷನ್ ಬಗ್ಗೆ ಮಾತನಾಡುತ್ತಾ ನಕ್ಕಿದ್ದಾರೆ. ‘ಎಲಿಮಿನೇಟ್ ಆದ ರಂಜಿತ್ ಮನೆಯಲ್ಲಿ ಈಗ ಒಂದು ಹಾಡು ಪ್ಲೇ ಆಗುತ್ತಿದೆಯಂತೆ. ಯಾವುದು ಗೊತ್ತಾ ಆ ಸಾಂಗ್? ಯಾರೋ ಯಾರೋ ಗೀಚಿ ಹೋದ ಹಾಡು’ ಎಂದು ಸುದೀಪ್ ಅಣಕಿಸಿದ್ದಾರೆ.

ಕಳೆದ ವಾರ ನಡೆದ ಘಟನೆಯಲ್ಲಿ ಮಾತನಾಡಬೇಕಿದ್ದಿದ್ದು ಹಂಸಾ ಹಾಗೂ ಜಗದೀಶ್. ಏಕೆಂದರೆ ಹಂಸಾ ವಿರುದ್ಧ ಜಗದೀಶ್ ಅವರು ಕೆಟ್ಟ ಪದ ಬಳಕೆ ಮಾಡಿದ್ದರು. ಈ ಪ್ರಕರಣದಲ್ಲಿ ರಂಜಿತ್ ಕೂಡ ಭಾಗಿ ಆದರು. ಅವರು ತಮಗೆ ಸಂಬಂಧವೇ ಇಲ್ಲದ ವಿಚಾರದಲ್ಲಿ ತಲೆ ಹಾಕಿ ಎಲ್ಲವನ್ನೂ ಹಾಳು ಮಾಡಿಕೊಂಡರು. ಇದರಿಂದ ಅವರಿಗೆ ಸಾಕಷ್ಟು ನಷ್ಟ ಆಗಿದೆ.

ಇದನ್ನೂ ಓದಿ: ಜಗದೀಶ್​ ಬಗ್ಗೆ ಬಿಗ್​ಬಾಸ್​ ತೋರಿಸದೇ ಇದ್ದಿದ್ದನ್ನು ಹೇಳಿದ ರಂಜಿತ್

ಜಗದೀಶ್ ಅವರು ಬಳಕೆ ಮಾಡಿದ ಅವಾಚ್ಯ ಶಬ್ದಗಳ ವಿಚಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಜಗಳವೇ ನಡೆದು ಹೋಗಿದೆ. ಇದು ಕಳೆದ ವಾರದ ಹೈಲೈಟ್ ಆಗಿತ್ತು. ಈಗ ದೊಡ್ಮನೆಗೆ ಹನುಮಂತ್ ಅವರು ವೈಲ್ಡ್ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ