AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಾ ಅಯ್ಯಂಗಾರ್ ವಿಚಾರದಲ್ಲಿ ನೀನು ಮಾಡಿದ್ದು ತಪ್ಪು’; ವೇದಿಕೆ ಮೇಲೆ ಧನಂಜಯ್​​ಗೆ ತಿಳಿ ಹೇಳಿದ ಸುದೀಪ್

ಧನಂಜಯ್ ಹಾಗೂ ಅಮೃತಾ ಅವರು ‘ಪಾಪ್​ಕಾರ್ನ್ ಮಂಕಿ ಟೈಗರ್’, ‘ಬಡವ ರಾಸ್ಕಲ್​’ ಹಾಗೂ ‘ಹೊಯ್ಸಳ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರ ಮಧ್ಯೆ ಒಳ್ಳೆಯ ಆಪ್ತತೆ ಬೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on:Mar 21, 2023 | 7:34 AM

Share

ಕಿಚ್ಚ ಸುದೀಪ್ (Kichcha Sudeep) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಅನೇಕ ಕಾರ್ಯಕ್ರಮಗಳಿಗೆ ತೆರಳಿ ತಮ್ಮ ಬೆಂಬಲ ಸೂಚಿಸುತ್ತಾರೆ. ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಾರ್ಚ್​ 20ರಂದು ನಡೆಯಿತು. ಇದಕ್ಕೆ ಸುದೀಪ್ (Sudeep) ಅವರು ಅತಿಥಿ ಆಗಿ ಆಗಮಿಸಿದ್ದರು. ಇಡೀ ತಂಡಕ್ಕೆ ಅವರು ಶುಭಕೋರಿದರು. ಸುದೀಪ್ ಬೆಂಬಲ ಕಂಡು ಇಡೀ ತಂಡ ಸಂತಸ ವ್ಯಕ್ತಪಡಿಸಿತು. ವೇದಿಕೆ ಏರಿದ ಸುದೀಪ್ ಅವರು ಡಾಲಿ ಧನಂಜಯ್ ಹಾಗೂ ಅಮೃತಾ ಅಯ್ಯಂಗಾರ್ ಅವರ ಕಾಲೆಳೆದರು. ಇದು ಸಖತ್ ಫನ್ನಿ ಆಗಿತ್ತು.

ಧನಂಜಯ್ ಹಾಗೂ ಅಮೃತಾ ಅವರು ‘ಪಾಪ್​ಕಾರ್ನ್ ಮಂಕಿ ಟೈಗರ್’, ‘ಬಡವ ರಾಸ್ಕಲ್​’ ಹಾಗೂ ‘ಹೊಯ್ಸಳ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರ ಮಧ್ಯೆ ಒಳ್ಳೆಯ ಆಪ್ತತೆ ಬೆಳೆದಿದೆ. ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ಮಾತಿದೆ. ಆದರೆ, ಇದನ್ನು ಅವರು ಒಪ್ಪಿಕೊಂಡಿಲ್ಲ. ಅವರ ಮಧ್ಯೆ ಪ್ರೀತಿ ಇದೆಯೋ ಇಲ್ಲವೋ ಒಳ್ಳೆಯ ಫ್ರೆಂಡ್​ಶಿಪ್ ಅಂತೂ ಇದೆ. ಸುದೀಪ್ ವೇದಿಕೆ ಏರಿದಾಗ ಇವರ ವಿಚಾರವನ್ನು ಇಟ್ಟುಕೊಂಡು ಎಲ್ಲರನ್ನೂ ನಗಿಸಿದರು.

ಇದನ್ನೂ ಓದಿ: Ramya: ಹೊಸ ವರ್ಷದ ಸ್ವಾಗತಕ್ಕೆ ಲಂಡನ್​ಗೆ ತೆರಳಿದ ರಮ್ಯಾ; ಸಾಥ್​ ನೀಡಿದ ಅಮೃತಾ ಅಯ್ಯಂಗಾರ್​

ಮೊದಲು ವೇದಿಕೆ ಏರಿದ ಅಮೃತಾ ಅಯ್ಯಂಗಾರ್ ಅವರು ಡಾಲಿಯನ್ನು ನಾಲ್ಕೈದು ಬಾರಿ ಹೊಗಳಿದರು. ಅವರು ಸುಂದರವಾಗಿ ಕಾಣ್ತಿದಾರೆ ಎಂದು ಮೆಚ್ಚುಗೆ ಸೂಚಿಸಿದರು. ನಂತರ ಸುದೀಪ್ ಜೊತೆ ವೇದಿಕೆ ಏರಿದ ಧನಂಜಯ್ ಅವರು ಒಂದೇ ಬಾರಿ ಅಮೃತಾ ಹೆಸರನ್ನು ಹೇಳಿದರು. ಇದನ್ನು ಸುದೀಪ್ ನೆನಪಿಟ್ಟುಕೊಂಡಿದ್ದರು. ಧನಂಜಯ್ ಈ ರೀತಿ ಒಂದೇ ಮಾತಲ್ಲಿ ಅಮೃತಾ ಅವರ ಬಗ್ಗೆ ಹೇಳಿದ್ದು ನ್ಯಾಯ ಅಲ್ಲ ಎಂದರು ಕಿಚ್ಚ.

ಇದನ್ನೂ ಓದಿ: Daali Dhananjay: ಸುದೀಪ್ ಬಳಿ ಮನವಿಯೊಂದನ್ನು ಮಾಡಿದ ಡಾಲಿ, ನಡೆಸಿಕೊಡ್ತಾರಾ ಕಿಚ್ಚ?

ಆಗ ಧನಂಜಯ್ ಅಮೃತಾ ಅವರನ್ನು ಹೊಗಳಲು ಮುಂದಾದರು. ‘ಮೂರು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ವಿ. ಎಲ್ಲಾ ಸಿನಿಮಾಗಳಲ್ಲೂ ಅದ್ಭುತವಾಗಿ ಕೆಲಸ ಮಾಡಿದ್ದಾರೆ’ ಎಂದು ಧನಂಜಯ್ ಹೇಳುತ್ತಿದ್ದಂತೆ ಸುದೀಪ್ ಅವರು ಮತ್ತೆ ಕಾಲೆಳೆಯಲು ಮುಂದಾದರು. ‘ಹೌದು ನೀವ್ಯಾಕೆ ಇವರೊಟ್ಟಿಗೆ ಕೆಲಸ ಮಾಡ್ತೀರಾ? ಬೇರೆ ಕಲಾವಿದರಿಗೆ ಡೇಟ್ಸ್​ ಕೊಡಿ. ಅವರ ಜೊತೆಯೂ ಕೆಲಸ ಮಾಡಿ. ಇವರೊಟ್ಟಿಗೆ ಸಿನಿಮಾ ಮಾಡ್ತಾ ಇದ್ರೆ ಬೇರೆ ಹೀರೋಗಳಿಗೆ ನೀವು ಹೇಗೆ ಸಿಗ್ತೀರಾ? ಇಷ್ಟೆಲ್ಲ ಮಾಡಿದ್ರೂ ನಿಮ್ಮನ್ನು ಹೊಗಳುತ್ತಿಲ್ಲ’ ಎಂದು ಅಮೃತಾಗೆ ಸುದೀಪ್ ಹೇಳಿದರು. ಈ ಮಾತನ್ನು ಕೇಳಿ ಎಲ್ಲರೂ ನಕ್ಕರು. ಕೊನೆಯಲ್ಲಿ ಇವರ ಕೆಮಿಸ್ಟ್ರಿ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Tue, 21 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!