AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಸ್ ವಿವಾದ ಹಾಗೂ ದರ್ಶನ್ ಫ್ಯಾನ್ಸ್ ಬಗ್ಗೆ ನೇರವಾಗಿ ಮಾತನಾಡಿದ ಸುದೀಪ್

ಸೂಪರ್​ ಹಿಟ್​ ಆದ ‘ಮ್ಯಾಕ್ಸ್’ ಸಿನಿಮಾದ ಸಕ್ಸಸ್ ಮೀಟ್ ಮಾಡಲಾಗಿದೆ. ಈ ವೇಳೆ ಬಾಸ್ ಪದದ ಕುರಿತು ಎದ್ದಿರುವ ವಿವಾದಕ್ಕೆ ಕಿಚ್ಚ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಬಗ್ಗೆಯೂ ಸುದೀಪ್ ಮಾತನಾಡಿದ್ದಾರೆ. ‘ಯಾರಿಗೋ ಟಾಂಟ್​ ನೀಡಿ ಸೆಲೆಬ್ರೇಟ್ ಮಾಡುವವನು ನಾನಲ್ಲ’ ಎಂದು ಸುದೀಪ್ ಖಡಕ್ ಆಗಿ ಹೇಳಿದ್ದಾರೆ.

ಬಾಸ್ ವಿವಾದ ಹಾಗೂ ದರ್ಶನ್ ಫ್ಯಾನ್ಸ್ ಬಗ್ಗೆ ನೇರವಾಗಿ ಮಾತನಾಡಿದ ಸುದೀಪ್
Kichcha Sudeep
ಮದನ್​ ಕುಮಾರ್​
|

Updated on: Dec 30, 2024 | 10:10 PM

Share

‘ಮ್ಯಾಕ್ಸ್’ ಸಿನಿಮಾ ಯಶಸ್ಸು ಕಂಡ ಬಳಿಕ ಕತ್ತರಿಸಿದ ಕೇಕ್​ನಲ್ಲಿ ‘ಬಾಸಿಸಂ ಕಾಲ ಮುಗಿಯಿತು’ ಎಂದು ಬರೆದಿದ್ದು ಅನೇಕರ ಕಣ್ಣು ಕುಕ್ಕಿತ್ತು. ಆ ವಿಚಾರದ ಬಗ್ಗೆ ಕಿಚ್ಚ ಸುದೀಪ್ ಅವರು ಸಕ್ಸಸ್​ ಮೀಟ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ಯಶ್, ದರ್ಶನ್, ಧ್ರುವ, ಉಪ್ಪಿ, ಶಿವಣ್ಣ ಎಲ್ಲರೂ ಸೇರಿದರೆ ಕನ್ನಡ ಚಿತ್ರರಂಗ. ದರ್ಶನ್ ಫ್ಯಾನ್ಸ್ ವಿಷಯ ಬಂದಾಗ ನಾನೇ ಹೇಳಿದ್ದೆ. ದರ್ಶನ್ ಫ್ಯಾನ್ಸ್​ಗೆ ಬೈಯ್ಯಬೇಡಿ. ಅವರು ನೋವಲ್ಲಿ ಇದ್ದಾರೆ. ಇದನ್ನು ನಾನೇ ಹೇಳಿದ ಮೇಲೆ ನಾವು ಯಾಕೆ ಅವರಿಗೆ ಟಾಂಟ್ ಕೊಡೋಣ? ನಾವೆಲ್ಲ ಬಹಳ ಚಿಕ್ಕವರು. ಇಂದು ಚಿತ್ರರಂಗ ಕೊರಗುತ್ತಿದೆ. ನಾವೆಲ್ಲ ಸಿನಿಮಾವನ್ನು ಉಳಿಸೋಕೆ ಹೋಗೋಣವೋ ಅಥವಾ ಈ ಥರದ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾ ಕೂರೋಣವಾ ಹೇಳಿ’ ಎಂದಿದ್ದಾರೆ ಸುದೀಪ್​.

‘ನಾವು ಯಾಕೆ ಟಾಂಟ್ ಕೊಡಬೇಕು? ಏನು ಸಿಗುತ್ತೆ ನಮಗೆ ಅದರಿಂದ? ನಾವೇನು ಚತ್ರಪತಿಗಳ? ಚಕ್ರವರ್ತಿಗಳಾ? ವಯಸ್ಸಾಗಿ ನಾವು ಕೂಡ ಹೋಗುವವರೇ ಒಂದು ದಿನ. ಬದುಕಿರುವಾಗ, ಒಂದು ಸಿನಿಮಾ ನಮ್ಮ ಕೈ ಹಿಡಿದಿರುವಾಗ ಬೆಳೆಯೋಣ, ಇನ್ನಷ್ಟು ಆಸೆಪಡೋಣ. ಒಳ್ಳೆಯ ಸಿನಿಮಾ ಮಾಡೋಣ. ಎಲ್ಲರೂ ನನ್ನ ಸಹೋದರನ ರೀತಿ ಇದ್ದೋರು’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

‘ಅಭಿಮಾನಿಗಳು ಯಶ್ ಬಾಸ್, ಧ್ರುವ ಬಾಸ್, ಉಪ್ಪಿ ಬಾಸ್, ಶಿವಣ್ಣ ಬಾಸ್ ಅನ್ನೋದಿಲ್ವಾ? ಎಲ್ಲರಿಗೂ ಅವರವರ ಅಭಿಮಾನಿಗಳು ಹಾಗೆಯೇ ಕರೆಯುತ್ತಾರೆ. ನನಗೂ ದರ್ಶನ್​ಗೂ ಏನೂ ಇಲ್ಲ. ಅವರು ಕೂಡ ಬಹಳ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಪ್ರತಿಯೊಬ್ಬರೂ ಕಷ್ಟಪಟ್ಟಿದ್ದಾರೆ. ಕನ್ನಡ ಚಿತ್ರರಂಗ ಇಂದು ತುಂಬ ನೋವಲ್ಲಿ ಇದೆ. ಚಿತ್ರರಂಗ ಬೆಳೆಯಬೇಕು ಎಂದರೆ ವಿವಾದ ಬೇಡ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: ಬಾಸಿಸಂ​ ಕೇಕ್​ ವಿವಾದಕ್ಕೆ ಸ್ಪಷ್ಟನೆ ನೀಡಿದ ಸುದೀಪ್​ ಆಪ್ತ ಪ್ರದೀಪ್​

‘ನನ್ನ ಫ್ಯಾನ್ಸ್ ಹೋಗಿ ಎಲ್ಲ ಹೀರೋಗಳ ಸಿನಿಮಾ ನೋಡುತ್ತಾರೆ. ಅವರ ಫ್ಯಾನ್ಸ್ ಬಂದು ನನ್ನ ಸಿನಿಮಾ ನೋಡುತ್ತಾರೆ. ಆನ್​ಲೈನ್​ನಲ್ಲಿ ಒಂದು ವಾತಾವರಣ ಬೆಳೆಯುವಾಗ ಯಾರೋ ಒಬ್ಬರು ಒಂದು ಆಯಾಮ ಕೊಡುವುದೇ ತಪ್ಪು. ಕೆಟ್ಟ ಅಹಂಕಾರ ನಮ್ಮಲ್ಲಿ ಇದೆ ಅಂತ ನೀವು ಅಂದುಕೊಂಡಿರುವುದೇ ತಪ್ಪು. ನಮ್ಮ ಹಿರಿಯರು ಚಿತ್ರರಂಗವನ್ನು ತಮ್ಮ ಭುಜದಮೇಲೆ ಹೊತ್ತುಕೊಂಡು ಬೆಳೆಸಿದ್ದಾರೆ. ಇವತ್ತು ನಮ್ಮ ಕೈಗೆ ಕೊಟ್ಟಿದ್ದಾರೆ. ನಾನು ಇನ್ನಷ್ಟು ಬೆಳೆಸಿ ಮುಂದಿನ ತಲೆಮಾರಿಗೆ ಕೊಟ್ಟು ಹೋಗಬೇಕು’ ಎಂದು ಸುದೀಪ್ ಹೇಳಿದ್ದಾರೆ.

ಡಿಸೆಂಬರ್​ 25ರಂದು ತೆರೆಕಂಡ ಮ್ಯಾಕ್ಸ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಇದರಿಂದ ಸುದೀಪ್ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ಇದೇ ಖುಷಿಯಲ್ಲಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್​ 30) ಸಕ್ಸಸ್ ಮೀಟ್ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?