AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಸ್ ವಿವಾದ ಹಾಗೂ ದರ್ಶನ್ ಫ್ಯಾನ್ಸ್ ಬಗ್ಗೆ ನೇರವಾಗಿ ಮಾತನಾಡಿದ ಸುದೀಪ್

ಸೂಪರ್​ ಹಿಟ್​ ಆದ ‘ಮ್ಯಾಕ್ಸ್’ ಸಿನಿಮಾದ ಸಕ್ಸಸ್ ಮೀಟ್ ಮಾಡಲಾಗಿದೆ. ಈ ವೇಳೆ ಬಾಸ್ ಪದದ ಕುರಿತು ಎದ್ದಿರುವ ವಿವಾದಕ್ಕೆ ಕಿಚ್ಚ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಬಗ್ಗೆಯೂ ಸುದೀಪ್ ಮಾತನಾಡಿದ್ದಾರೆ. ‘ಯಾರಿಗೋ ಟಾಂಟ್​ ನೀಡಿ ಸೆಲೆಬ್ರೇಟ್ ಮಾಡುವವನು ನಾನಲ್ಲ’ ಎಂದು ಸುದೀಪ್ ಖಡಕ್ ಆಗಿ ಹೇಳಿದ್ದಾರೆ.

ಬಾಸ್ ವಿವಾದ ಹಾಗೂ ದರ್ಶನ್ ಫ್ಯಾನ್ಸ್ ಬಗ್ಗೆ ನೇರವಾಗಿ ಮಾತನಾಡಿದ ಸುದೀಪ್
Kichcha Sudeep
ಮದನ್​ ಕುಮಾರ್​
|

Updated on: Dec 30, 2024 | 10:10 PM

Share

‘ಮ್ಯಾಕ್ಸ್’ ಸಿನಿಮಾ ಯಶಸ್ಸು ಕಂಡ ಬಳಿಕ ಕತ್ತರಿಸಿದ ಕೇಕ್​ನಲ್ಲಿ ‘ಬಾಸಿಸಂ ಕಾಲ ಮುಗಿಯಿತು’ ಎಂದು ಬರೆದಿದ್ದು ಅನೇಕರ ಕಣ್ಣು ಕುಕ್ಕಿತ್ತು. ಆ ವಿಚಾರದ ಬಗ್ಗೆ ಕಿಚ್ಚ ಸುದೀಪ್ ಅವರು ಸಕ್ಸಸ್​ ಮೀಟ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ಯಶ್, ದರ್ಶನ್, ಧ್ರುವ, ಉಪ್ಪಿ, ಶಿವಣ್ಣ ಎಲ್ಲರೂ ಸೇರಿದರೆ ಕನ್ನಡ ಚಿತ್ರರಂಗ. ದರ್ಶನ್ ಫ್ಯಾನ್ಸ್ ವಿಷಯ ಬಂದಾಗ ನಾನೇ ಹೇಳಿದ್ದೆ. ದರ್ಶನ್ ಫ್ಯಾನ್ಸ್​ಗೆ ಬೈಯ್ಯಬೇಡಿ. ಅವರು ನೋವಲ್ಲಿ ಇದ್ದಾರೆ. ಇದನ್ನು ನಾನೇ ಹೇಳಿದ ಮೇಲೆ ನಾವು ಯಾಕೆ ಅವರಿಗೆ ಟಾಂಟ್ ಕೊಡೋಣ? ನಾವೆಲ್ಲ ಬಹಳ ಚಿಕ್ಕವರು. ಇಂದು ಚಿತ್ರರಂಗ ಕೊರಗುತ್ತಿದೆ. ನಾವೆಲ್ಲ ಸಿನಿಮಾವನ್ನು ಉಳಿಸೋಕೆ ಹೋಗೋಣವೋ ಅಥವಾ ಈ ಥರದ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾ ಕೂರೋಣವಾ ಹೇಳಿ’ ಎಂದಿದ್ದಾರೆ ಸುದೀಪ್​.

‘ನಾವು ಯಾಕೆ ಟಾಂಟ್ ಕೊಡಬೇಕು? ಏನು ಸಿಗುತ್ತೆ ನಮಗೆ ಅದರಿಂದ? ನಾವೇನು ಚತ್ರಪತಿಗಳ? ಚಕ್ರವರ್ತಿಗಳಾ? ವಯಸ್ಸಾಗಿ ನಾವು ಕೂಡ ಹೋಗುವವರೇ ಒಂದು ದಿನ. ಬದುಕಿರುವಾಗ, ಒಂದು ಸಿನಿಮಾ ನಮ್ಮ ಕೈ ಹಿಡಿದಿರುವಾಗ ಬೆಳೆಯೋಣ, ಇನ್ನಷ್ಟು ಆಸೆಪಡೋಣ. ಒಳ್ಳೆಯ ಸಿನಿಮಾ ಮಾಡೋಣ. ಎಲ್ಲರೂ ನನ್ನ ಸಹೋದರನ ರೀತಿ ಇದ್ದೋರು’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

‘ಅಭಿಮಾನಿಗಳು ಯಶ್ ಬಾಸ್, ಧ್ರುವ ಬಾಸ್, ಉಪ್ಪಿ ಬಾಸ್, ಶಿವಣ್ಣ ಬಾಸ್ ಅನ್ನೋದಿಲ್ವಾ? ಎಲ್ಲರಿಗೂ ಅವರವರ ಅಭಿಮಾನಿಗಳು ಹಾಗೆಯೇ ಕರೆಯುತ್ತಾರೆ. ನನಗೂ ದರ್ಶನ್​ಗೂ ಏನೂ ಇಲ್ಲ. ಅವರು ಕೂಡ ಬಹಳ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಪ್ರತಿಯೊಬ್ಬರೂ ಕಷ್ಟಪಟ್ಟಿದ್ದಾರೆ. ಕನ್ನಡ ಚಿತ್ರರಂಗ ಇಂದು ತುಂಬ ನೋವಲ್ಲಿ ಇದೆ. ಚಿತ್ರರಂಗ ಬೆಳೆಯಬೇಕು ಎಂದರೆ ವಿವಾದ ಬೇಡ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: ಬಾಸಿಸಂ​ ಕೇಕ್​ ವಿವಾದಕ್ಕೆ ಸ್ಪಷ್ಟನೆ ನೀಡಿದ ಸುದೀಪ್​ ಆಪ್ತ ಪ್ರದೀಪ್​

‘ನನ್ನ ಫ್ಯಾನ್ಸ್ ಹೋಗಿ ಎಲ್ಲ ಹೀರೋಗಳ ಸಿನಿಮಾ ನೋಡುತ್ತಾರೆ. ಅವರ ಫ್ಯಾನ್ಸ್ ಬಂದು ನನ್ನ ಸಿನಿಮಾ ನೋಡುತ್ತಾರೆ. ಆನ್​ಲೈನ್​ನಲ್ಲಿ ಒಂದು ವಾತಾವರಣ ಬೆಳೆಯುವಾಗ ಯಾರೋ ಒಬ್ಬರು ಒಂದು ಆಯಾಮ ಕೊಡುವುದೇ ತಪ್ಪು. ಕೆಟ್ಟ ಅಹಂಕಾರ ನಮ್ಮಲ್ಲಿ ಇದೆ ಅಂತ ನೀವು ಅಂದುಕೊಂಡಿರುವುದೇ ತಪ್ಪು. ನಮ್ಮ ಹಿರಿಯರು ಚಿತ್ರರಂಗವನ್ನು ತಮ್ಮ ಭುಜದಮೇಲೆ ಹೊತ್ತುಕೊಂಡು ಬೆಳೆಸಿದ್ದಾರೆ. ಇವತ್ತು ನಮ್ಮ ಕೈಗೆ ಕೊಟ್ಟಿದ್ದಾರೆ. ನಾನು ಇನ್ನಷ್ಟು ಬೆಳೆಸಿ ಮುಂದಿನ ತಲೆಮಾರಿಗೆ ಕೊಟ್ಟು ಹೋಗಬೇಕು’ ಎಂದು ಸುದೀಪ್ ಹೇಳಿದ್ದಾರೆ.

ಡಿಸೆಂಬರ್​ 25ರಂದು ತೆರೆಕಂಡ ಮ್ಯಾಕ್ಸ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಇದರಿಂದ ಸುದೀಪ್ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ಇದೇ ಖುಷಿಯಲ್ಲಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್​ 30) ಸಕ್ಸಸ್ ಮೀಟ್ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ