AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದರ್ಶನ್ ​ಮೇಲೆ ಕೋಪ ಇಲ್ಲ, ನಾವು ಕಿತ್ತಾಡಿಕೊಂಡಿಲ್ಲ’; ಬರ್ತ್​ಡೇ ದಿನ ಖುಷಿ ಖುಷಿಯಿಂದ ಮಾತನಾಡಿದ ಸುದೀಪ್

ಇತ್ತೀಚೆಗೆ ಸುಮಲತಾ ಅಂಬರೀಷ್ ಬರ್ತ್​ಡೇ ಆಚರಿಸಿಕೊಂಡರು. ಈ ವೇದಿಕೆ ಮೇಲೆ ದರ್ಶನ್ ಹಾಗೂ ಸುದೀಪ್ ಒಟ್ಟಾಗಿ ಕಾಣಿಸಿಕೊಂಡರು. ಆರು ವರ್ಷಗಳ ಬಳಿಕ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರು. ಆದರೆ, ಇವರ ಮಧ್ಯೆ ಮಾತುಕತೆ ನಡೆದಿಲ್ಲ. ಈಗ ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದಾರೆ.

‘ದರ್ಶನ್ ​ಮೇಲೆ ಕೋಪ ಇಲ್ಲ, ನಾವು ಕಿತ್ತಾಡಿಕೊಂಡಿಲ್ಲ’; ಬರ್ತ್​ಡೇ ದಿನ ಖುಷಿ ಖುಷಿಯಿಂದ ಮಾತನಾಡಿದ ಸುದೀಪ್
ಸುದೀಪ್-ದರ್ಶನ್
Malatesh Jaggin
| Edited By: |

Updated on: Sep 02, 2023 | 1:17 PM

Share

ನಟ ದರ್ಶನ್ ಹಾಗೂ ಸುದೀಪ್ (Sudeep) ಮಧ್ಯೆ ವೈಮನಸ್ಸು ಮೂಡಿ ಹಲವು ವರ್ಷಗಳು ಕಳೆದಿವೆ. ಇಬ್ಬರೂ ಒಂದಾಗಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಈ ವಿಚಾರದಲ್ಲಿ ಪಾಸಿಟಿವ್ ಆಗಿ ಪ್ರತಿಕ್ರಿಯಿಸುತ್ತಲೇ ಬಂದಿದ್ದಾರೆ. ಇಂದು (ಸೆಪ್ಟೆಂಬರ್ 2) ಸುದೀಪ್ ಜನ್ಮದಿನ. ಈ ವೇಳೆ ಅವರು ದರ್ಶನ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ದರ್ಶನ್ ಮೇಲೆ ಕೋಪವಿಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಜೊತೆಗೆ ರಾಜಿ ಸಂಧಾನದ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಸುಮಲತಾ ಅಂಬರೀಷ್ ಬರ್ತ್​ಡೇ ಆಚರಿಸಿಕೊಂಡರು. ಈ ವೇದಿಕೆ ಮೇಲೆ ದರ್ಶನ್ ಹಾಗೂ ಸುದೀಪ್ ಒಟ್ಟಾಗಿ ಕಾಣಿಸಿಕೊಂಡರು. ಆರು ವರ್ಷಗಳ ಬಳಿಕ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರು. ಆದರೆ, ಇವರ ಮಧ್ಯೆ ಮಾತುಕತೆ ನಡೆದಿಲ್ಲ. ಈಗ ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ‘ದರ್ಶನ್ ಹಾಗೂ ನಾನು ಒಂದೇ ಪಾರ್ಟಿಯಲ್ಲಿ ಭೇಟಿ ಆಗಿದ್ದು ನನಗೆ ಖುಷಿ ತಂದಿದೆ. ನಾವು ಕಿತ್ತಾಡಿಕೊಂಡಿಲ್ಲ. ನನಗೆ ದರ್ಶನ್ ಮೇಲೆ ಕೋಪವಿಲ್ಲ. ನಂಗೂ ಕೆಲವು ಪ್ರಶ್ನೆಗಳು ಇವೆ, ಅದೇ ರೀತಿ ದರ್ಶನ್​ಗೂ ಪ್ರಶ್ನೆ ಇದೆ. ಇಬ್ಬರೂ ಮುಖಾಮುಖಿ ಆದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗೋದು. ಸುಮಲತಾ ಮೇಲಿನ ಗೌರವದಿಂದ ಆ ಪಾರ್ಟಿಗೆ ಹೋಗಿದ್ದೆ’ ಎಂದಿದ್ದಾರೆ ಸುದೀಪ್.

‘ನಾನು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್​​ಗಳನ್ನು ನೋಡಲು ಹೋಗುವುದಿಲ್ಲ. ದರ್ಶನ್ ಏನು ಪೋಸ್ಟ್ ಮಾಡಿದ್ದಾರೆ ಎಂಬುದನ್ನು ನಾನು ನೋಡಿಲ್ಲ. ನೇರವಾಗಿ ಏನಾದರೂ ಹೇಳಿದರೆ ಅದನ್ನು ಪರಿಗಣನೆ ಮಾಡುತ್ತೇನೆ. ಶೇಕ್ ಹ್ಯಾಂಡ್ ಮಾಡೋದು ದೊಡ್ಡದಲ್ಲ. ಕೆಲವೊಂದಕ್ಕೆ ಸಮಯ ಕೂಡಿ ಆ ಬಳಿಕ ಸರಿ ಹೋಗುತ್ತದೆ. ನಾವು ಇಬ್ಬರು ಮತ್ತೆ ಒಂದಾದ್ರೆ ನನಗೆ ಖುಷಿ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ

ಅಭಿಮಾನಿಗಳು ಬರ್ತ್​​ಡೇ ಆಚರಿಸುತ್ತಿರುವ ಬಗ್ಗೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ‘ಎಲ್ಲವೂ ಸರ್ಪ್ರೈಸ್ ಆಗಿ ಬರುತ್ತಿದೆ. ರಾತ್ರಿಯಿಂದ ನಿದ್ದೆಯನ್ನೇ ಮಾಡಿಲ್ಲ. ನಿಮ್ಮಿಂದಲೇ ತಾಳ್ಮೆ ಕಲಿತಿದ್ದೀನಿ. ನಾನು ಹೇಗೆ ಬೇಕಾದ್ರು ಇರುತ್ತೇನೆ ಎನ್ನುವುದಕ್ಕೆ ಆಗುವುದಿಲ್ಲ. ಕಲಾವಿದರಾಗಿ ನಾವು ಸರ್ವೆಂಟ್ ಆಗಬೇಕು. ಸಾವಿರ ನೋವಿರಲಿ ಎಲ್ಲರನ್ನೂ ಭೇಟಿಯಾಗಬೇಕು’ ಎಂದಿದ್ದಾರೆ ಕಿಚ್ಚ. ನಿರ್ದೇಶನಕ್ಕೆ ಸುದೀಪ್ ಮರಳುತ್ತಿದ್ದಾರೆ. ಇದಕ್ಕೆ ಅವರು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದಾರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ