Kichcha Sudeep: ‘ರಸ್ತೆಗೆ ಇಳಿದಾಗಲೇ ಅರ್ಹತೆ, ಯೋಗ್ಯತೆ ಗೊತ್ತಾಗೋದು’: ಕಿಚ್ಚ ಸುದೀಪ್

Kichcha Sudeep: ಪ್ರಚಾರಕ್ಕೆ ತೆರಳುವುದಕ್ಕೂ ಮೊದಲು ಟಿವಿ9 ಕನ್ನಡದ ಜೊತೆ ಸುದಿಪ್ ಮಾತನಾಡಿದ್ದಾರೆ. ರಮ್ಯಾ ಫ್ರೆಂಡ್​ಶಿಪ್ ಬಗ್ಗೆ, ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಅವರು ಮಾತನಾಡಿದ್ದಾರೆ.

Kichcha Sudeep: ‘ರಸ್ತೆಗೆ ಇಳಿದಾಗಲೇ ಅರ್ಹತೆ, ಯೋಗ್ಯತೆ ಗೊತ್ತಾಗೋದು’: ಕಿಚ್ಚ ಸುದೀಪ್
ಸುದೀಪ್
Follow us
|

Updated on: Apr 28, 2023 | 10:53 AM

ಕಿಚ್ಚ ಸುದೀಪ್ ಅವರು ಸದ್ಯ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಅವರು ಪ್ರಚಾರ ಮಾಡುತ್ತಿದ್ದಾರೆ. ಇಂದು (ಏಪ್ರಿಲ್ 28) ಹುಬ್ಬಳ್ಳಿ, ಕಲಘಟಗಿ, ಧಾರವಾಡ ಹಾಗೂ ಗದಗದಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ. ಪ್ರಚಾರಕ್ಕೆ ತೆರಳುವುದಕ್ಕೂ ಮೊದಲು ಟಿವಿ9 ಕನ್ನಡದ ಜೊತೆ ಸುದಿಪ್ (Sudeep) ಮಾತನಾಡಿದ್ದಾರೆ. ರಮ್ಯಾ ಫ್ರೆಂಡ್​ಶಿಪ್ ಬಗ್ಗೆ, ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಅವರು ಮಾತನಾಡಿದ್ದಾರೆ.

ರಾಜಕೀಯ ಬೇರೆ, ಫ್ರೆಂಡ್​ಶಿಪ್ ಬೇರೆ:

ಇತ್ತೀಚೆಗೆ ರಮ್ಯಾ ಸಂದರ್ಶನ ಒಂದರಲ್ಲಿ ಮಾತನಾಡುವಾಗ ಸುದೀಪ್ ಅವರು ರಾಜಕೀಯಕ್ಕೆ ಬರಬೇಕು ಎಂದು ಹೇಳಿದ್ದರು. ಆ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ‘ರಮ್ಯಾ ಅವರು ಕಾಂಗ್ರೆಸ್​​ನವರು. ಆದರೆ, ಫ್ರೆಂಡ್​ಶಿಪ್​ನಲ್ಲಿ ಎಂದಿಗೂ ಭೇದ-ಭಾವ ಬಂದಿಲ್ಲ. ಅವರು ಒಳ್ಳೆಯ ಸ್ನೇಹಿತೆ. ರಮ್ಯಾ ಯಾವಾಗ ಸಿಕ್ಕಾಗಲೂ ರಾಜಕೀಯ ಆ್ಯಂಗಲ್​ನಿಂದ ನನಗೆ ಸ್ಫೂರ್ತಿ ನೀಡುತ್ತಾರೆ’ ಎಂದಿದ್ದಾರೆ ಸುದೀಪ್.

ಗೀತಾ ಶಿವರಾಜ್​ಕುಮಾರ್ ಬಗ್ಗೆ ಸುದೀಪ್ ಮಾತು:

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, ‘ಗೀತಾ ಅಕ್ಕಗೆ ಆಲ್​ ದಿ ಬೆಸ್ಟ್ ಹೇಳುತ್ತೇನೆ. ಗೀತಾ ಅಕ್ಕ ಕೈಗೊಂಡಿರುವ ನಿರ್ಧಾರದ ಹಿಂದೆ ಒಳ್ಳೆಯ ಚಿಂತನೆ ಇರುತ್ತೆ. ಗೀತಕ್ಕಗೆ ಒಳ್ಳೆಯದಾಗಲಿ’ ಎಂದು ಹೇಳಿದ್ದಾರೆ. ಶಿವಣ್ಣ-ಗೀತಾ ದಂಪತಿ ಜೊತೆ ಸುದೀಪ್ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ.

ಸಿನಿಮಾ-ರಾಜಕೀಯ ಪ್ರಚಾರ ಎರಡೂ ಒಂದೇ

‘ಸಿನಿಮಾ, ರಾಜಕೀಯ ಪ್ರಚಾರದ ನಡುವೆ ವ್ಯತ್ಯಾಸ ಇಲ್ಲ. ಹೊಸ ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದೇವೆ.  ಜನರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡುತ್ತೇವೆ. ಸದ್ಯ ರಾಜಕೀಯದ ಬಗ್ಗೆ ನಾನು ಮಾತಾಡುವುದಿಲ್ಲ. ನನಗೆ ಸಿನಿಮಾದಲ್ಲಿ ಮಾಡಲು ಸಾಕಷ್ಟು ಕೆಲಸಗಳು ಇವೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ರಮ್ಯಾ ಮೊದಲ ಸಿನಿಮಾ ಅಭಿಗೆ 20 ವರ್ಷ, ಸಿನಿಮಾಕ್ಕೆ ಸಂಬಂಧಿಸಿದ ಅಪರೂಪದ ಚಿತ್ರಗಳ ಹಂಚಿಕೊಂಡ ನಟಿ

ನನಗೆ ಸಿಗ್ತಿರೋ ಪ್ರೀತಿಗೆ  ಬೆಲೆ ಕಟ್ಟಲಾಗುವುದಿಲ್ಲ..

‘ಮನೆಯಲ್ಲಿ ಇದ್ದಾಗ ಬರೀ ಸಿನಿಮಾ ಬಗ್ಗೆ ಮಾತ್ರ ಮಾಹಿತಿ ಸಿಗುತ್ತಿತ್ತು. ಜನರ ಮನಸ್ಸಿನಲ್ಲಿ ನಮಗೆ ಯಾವ ಸ್ಥಾನ ಇದೆ ಎಂಬುದು ಹೊರಗೆ ಬಂದಾಗ್ಲೇ ಗೊತ್ತಾಗೋದು. ರಸ್ತೆಗೆ ಇಳಿದಾಗಲೇ ಅರ್ಹತೆ, ಯೋಗ್ಯತೆ ಗೊತ್ತಾಗೋದು. ನಮಗೆ ಸಿಗುತ್ತಿರುವ ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ. ಅಭಿಮಾನ ನಮ್ಮ ಆಸ್ತಿ. ಅದೇ ನಮ್ಮನ್ನು ಎಬ್ಬಿಸೋದು. ನಾನು ಬಸವರಾಜ ಬೊಮ್ಮಾಯಿ ಅವರು ಹೇಳಿದ ರೀತಿ ಪ್ರಚಾರದಲ್ಲಿ ಭಾಗಿ ಆಗುತ್ತೇನೆ. ಪಕ್ಷ ಗೆದ್ದಲ್ಲಿ‌ ನಾನೂ ಜನರ ಸಮಸ್ಯೆ ಬಗ್ಗೆ ಹೇಳಬೇಕು ಎಂದುಕೊಂಡಿದ್ದೇನೆ’ ಎಂಬುದು ಸುದೀಪ್ ಮಾತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ