AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ರಸ್ತೆಗೆ ಇಳಿದಾಗಲೇ ಅರ್ಹತೆ, ಯೋಗ್ಯತೆ ಗೊತ್ತಾಗೋದು’: ಕಿಚ್ಚ ಸುದೀಪ್

Kichcha Sudeep: ಪ್ರಚಾರಕ್ಕೆ ತೆರಳುವುದಕ್ಕೂ ಮೊದಲು ಟಿವಿ9 ಕನ್ನಡದ ಜೊತೆ ಸುದಿಪ್ ಮಾತನಾಡಿದ್ದಾರೆ. ರಮ್ಯಾ ಫ್ರೆಂಡ್​ಶಿಪ್ ಬಗ್ಗೆ, ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಅವರು ಮಾತನಾಡಿದ್ದಾರೆ.

Kichcha Sudeep: ‘ರಸ್ತೆಗೆ ಇಳಿದಾಗಲೇ ಅರ್ಹತೆ, ಯೋಗ್ಯತೆ ಗೊತ್ತಾಗೋದು’: ಕಿಚ್ಚ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Apr 28, 2023 | 10:53 AM

Share

ಕಿಚ್ಚ ಸುದೀಪ್ ಅವರು ಸದ್ಯ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಅವರು ಪ್ರಚಾರ ಮಾಡುತ್ತಿದ್ದಾರೆ. ಇಂದು (ಏಪ್ರಿಲ್ 28) ಹುಬ್ಬಳ್ಳಿ, ಕಲಘಟಗಿ, ಧಾರವಾಡ ಹಾಗೂ ಗದಗದಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ. ಪ್ರಚಾರಕ್ಕೆ ತೆರಳುವುದಕ್ಕೂ ಮೊದಲು ಟಿವಿ9 ಕನ್ನಡದ ಜೊತೆ ಸುದಿಪ್ (Sudeep) ಮಾತನಾಡಿದ್ದಾರೆ. ರಮ್ಯಾ ಫ್ರೆಂಡ್​ಶಿಪ್ ಬಗ್ಗೆ, ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಅವರು ಮಾತನಾಡಿದ್ದಾರೆ.

ರಾಜಕೀಯ ಬೇರೆ, ಫ್ರೆಂಡ್​ಶಿಪ್ ಬೇರೆ:

ಇತ್ತೀಚೆಗೆ ರಮ್ಯಾ ಸಂದರ್ಶನ ಒಂದರಲ್ಲಿ ಮಾತನಾಡುವಾಗ ಸುದೀಪ್ ಅವರು ರಾಜಕೀಯಕ್ಕೆ ಬರಬೇಕು ಎಂದು ಹೇಳಿದ್ದರು. ಆ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ‘ರಮ್ಯಾ ಅವರು ಕಾಂಗ್ರೆಸ್​​ನವರು. ಆದರೆ, ಫ್ರೆಂಡ್​ಶಿಪ್​ನಲ್ಲಿ ಎಂದಿಗೂ ಭೇದ-ಭಾವ ಬಂದಿಲ್ಲ. ಅವರು ಒಳ್ಳೆಯ ಸ್ನೇಹಿತೆ. ರಮ್ಯಾ ಯಾವಾಗ ಸಿಕ್ಕಾಗಲೂ ರಾಜಕೀಯ ಆ್ಯಂಗಲ್​ನಿಂದ ನನಗೆ ಸ್ಫೂರ್ತಿ ನೀಡುತ್ತಾರೆ’ ಎಂದಿದ್ದಾರೆ ಸುದೀಪ್.

ಗೀತಾ ಶಿವರಾಜ್​ಕುಮಾರ್ ಬಗ್ಗೆ ಸುದೀಪ್ ಮಾತು:

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, ‘ಗೀತಾ ಅಕ್ಕಗೆ ಆಲ್​ ದಿ ಬೆಸ್ಟ್ ಹೇಳುತ್ತೇನೆ. ಗೀತಾ ಅಕ್ಕ ಕೈಗೊಂಡಿರುವ ನಿರ್ಧಾರದ ಹಿಂದೆ ಒಳ್ಳೆಯ ಚಿಂತನೆ ಇರುತ್ತೆ. ಗೀತಕ್ಕಗೆ ಒಳ್ಳೆಯದಾಗಲಿ’ ಎಂದು ಹೇಳಿದ್ದಾರೆ. ಶಿವಣ್ಣ-ಗೀತಾ ದಂಪತಿ ಜೊತೆ ಸುದೀಪ್ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ.

ಸಿನಿಮಾ-ರಾಜಕೀಯ ಪ್ರಚಾರ ಎರಡೂ ಒಂದೇ

‘ಸಿನಿಮಾ, ರಾಜಕೀಯ ಪ್ರಚಾರದ ನಡುವೆ ವ್ಯತ್ಯಾಸ ಇಲ್ಲ. ಹೊಸ ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದೇವೆ.  ಜನರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡುತ್ತೇವೆ. ಸದ್ಯ ರಾಜಕೀಯದ ಬಗ್ಗೆ ನಾನು ಮಾತಾಡುವುದಿಲ್ಲ. ನನಗೆ ಸಿನಿಮಾದಲ್ಲಿ ಮಾಡಲು ಸಾಕಷ್ಟು ಕೆಲಸಗಳು ಇವೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ರಮ್ಯಾ ಮೊದಲ ಸಿನಿಮಾ ಅಭಿಗೆ 20 ವರ್ಷ, ಸಿನಿಮಾಕ್ಕೆ ಸಂಬಂಧಿಸಿದ ಅಪರೂಪದ ಚಿತ್ರಗಳ ಹಂಚಿಕೊಂಡ ನಟಿ

ನನಗೆ ಸಿಗ್ತಿರೋ ಪ್ರೀತಿಗೆ  ಬೆಲೆ ಕಟ್ಟಲಾಗುವುದಿಲ್ಲ..

‘ಮನೆಯಲ್ಲಿ ಇದ್ದಾಗ ಬರೀ ಸಿನಿಮಾ ಬಗ್ಗೆ ಮಾತ್ರ ಮಾಹಿತಿ ಸಿಗುತ್ತಿತ್ತು. ಜನರ ಮನಸ್ಸಿನಲ್ಲಿ ನಮಗೆ ಯಾವ ಸ್ಥಾನ ಇದೆ ಎಂಬುದು ಹೊರಗೆ ಬಂದಾಗ್ಲೇ ಗೊತ್ತಾಗೋದು. ರಸ್ತೆಗೆ ಇಳಿದಾಗಲೇ ಅರ್ಹತೆ, ಯೋಗ್ಯತೆ ಗೊತ್ತಾಗೋದು. ನಮಗೆ ಸಿಗುತ್ತಿರುವ ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ. ಅಭಿಮಾನ ನಮ್ಮ ಆಸ್ತಿ. ಅದೇ ನಮ್ಮನ್ನು ಎಬ್ಬಿಸೋದು. ನಾನು ಬಸವರಾಜ ಬೊಮ್ಮಾಯಿ ಅವರು ಹೇಳಿದ ರೀತಿ ಪ್ರಚಾರದಲ್ಲಿ ಭಾಗಿ ಆಗುತ್ತೇನೆ. ಪಕ್ಷ ಗೆದ್ದಲ್ಲಿ‌ ನಾನೂ ಜನರ ಸಮಸ್ಯೆ ಬಗ್ಗೆ ಹೇಳಬೇಕು ಎಂದುಕೊಂಡಿದ್ದೇನೆ’ ಎಂಬುದು ಸುದೀಪ್ ಮಾತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು