AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಗುರು, ನಾನು ಶಿಷ್ಯ: ಯುಐ, ಮ್ಯಾಕ್ಸ್ ಕ್ಲ್ಯಾಶ್ ಬಗ್ಗೆ ಸುದೀಪ್ ಸ್ಪಷ್ಟನೆ

ಡಿಸೆಂಬರ್​ ತಿಂಗಳಲ್ಲಿ ಘಟಾನುಘಟಿ ಸ್ಟಾರ್​ ನಟರ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಡಿಸೆಂಬರ್​ 20ರಂದು ಉಪೇಂದ್ರ ನಟನೆಯ ‘ಯುಐ’ ಸಿನಿಮಾ ತೆರೆ ಕಾಣಲಿದೆ. ಅದಾಗಿ ಐದೇ ದಿನಕ್ಕೆ, ಅಂದರೆ, ಡಿಸೆಂಬರ್​ 25ರಂದು ಸುದೀಪ್​ ಅಭಿನಯದ ‘ಮ್ಯಾಕ್ಸ್’ ಸಿನಿಮಾ ತೆರೆಕಾಣಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್​ ಅವರು ಮಾತನಾಡಿದ್ದಾರೆ.

ಉಪೇಂದ್ರ ಗುರು, ನಾನು ಶಿಷ್ಯ: ಯುಐ, ಮ್ಯಾಕ್ಸ್ ಕ್ಲ್ಯಾಶ್ ಬಗ್ಗೆ ಸುದೀಪ್ ಸ್ಪಷ್ಟನೆ
ಉಪೇಂದ್ರ, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on:Dec 02, 2024 | 12:01 AM

Share

ಕಿಚ್ಚ ಸುದೀಪ್​ ಅವರ ಅಭಿಮಾನಿಗಳಿಗೆ ಈ ವರ್ಷ ಡಿಸೆಂಬರ್​ 25ರ ದಿನ ತುಂಬ ಸ್ಪೆಷಲ್​. ಯಾಕೆಂದರೆ, ‘ವಿಕ್ರಾಂತ್ ರೋಣ’ ಬಳಿಕ ಸುದೀಪ್​ ನಟಿಸಿದ ‘ಮ್ಯಾಕ್ಸ್’ ಚಿತ್ರ ಡಿ.25ರಂದು ಬಿಡುಗಡೆ ಆಗುತ್ತಿದೆ. ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲಿ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ‘ಯುಐ’ ಸಿನಿಮಾದ ಜೊತೆಗಿನ ಕ್ಲ್ಯಾಶ್ ಬಗ್ಗೆ ಪ್ರಶ್ನೆ ಎದುರಾಯಿತು. ಡಿಸೆಂಬರ್​ 20ರಂದು ಉಪೇಂದ್ರ ಅಭಿನಯದ ‘ಯುಐ’ ಸಿನಿಮಾ ರಿಲೀಸ್​ ಆಗಲಿದೆ. ಎರಡು ಚಿತ್ರಗಳ ಬಿಡುಗಡೆ ದಿನಾಂಕಗಳ ನಡುವೆ ಇರುವುದು ಚಿಕ್ಕ ಗ್ಯಾಪ್ ಮಾತ್ರ. ಈ ಬಗ್ಗೆ ಸುದೀಪ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಉಪೇಂದ್ರ ಅವರ ಸ್ಟಾರ್​ಡಮ್​ ಬಗ್ಗೆ ನನಗೆ ಅನುಮಾನವೇ ಇಲ್ಲ. ಚಿತ್ರರಂಗಕ್ಕೆ ಅವರು ಬಹಳ ಕೊಡುಗೆ ನೀಡಿದ್ದಾರೆ. ನಾವೆಲ್ಲ ಅವರನ್ನು ನೋಡಿ ಕಲಿತುಕೊಂಡು ಬಂದವರು. ಉಪೇಂದ್ರ ಅವರಿಗೆ ಇಲ್ಲದೇ ಇರುವ ತಲೆ ನೋವು ನಮಗೆ-ನಿಮಗೆ ಯಾಕೆ? ಅವರೇ ಇದರ ಬಗ್ಗೆ ಎಲ್ಲಿಯೂ ಮಾತನಾಡುತ್ತಿಲ್ಲ. ಎರಡು ಕನ್ನಡ ಸಿನಿಮಾ ಬರೋಕೆ ಕಾರಣ ಇದೆ. ಕನ್ನಡ ಸಿನಿಮಾ ಬರದಿದ್ದಾಗಲೇ ಬೇರೆ ಭಾಷೆಯ ಸಿನಿಮಾಗಳ ಹಾವಳಿ ನಡೆಯೋದು’ ಎಂದರು ಸುದೀಪ್​.

‘ನನ್ನ ಸಿನಿಮಾ ಅಲ್ಲ ಎಂದರೂ ಉಪೇಂದ್ರ ಅವರ ಸಿನಿಮಾವನ್ನು ದಯವಿಟ್ಟು ನಂಬಿ. ನನಗೆ ಅವರ ಮೇಲೆ ಅಪಾರ ಗೌರವ ಇದೆ. ಯಾವಾಗ ನಿರ್ದೇಶನ ಮಾಡ್ತೀರಿ ಅಂತ ನಾನು ಆಗಾಗ ಅವರನ್ನು ಒತ್ತಾಯಿಸುತ್ತಿದ್ದೆ. ಇದೇ ದಿನಾಂಕದಲ್ಲಿ ರಿಲೀಸ್​ ಮಾಡಬೇಕಾ ಎಂಬುದು ನಿರ್ಮಾಪಕರ ಆಯ್ಕೆ. ಈ ರಿಲೀಸ್​ನಿಂದ ಉಪೇಂದ್ರ ಅವರ ತಂಡಕ್ಕೆ ತೊಂದರೆ ಆಗಲ್ಲ. ನಮ್ಮಲ್ಲಿ ಕ್ಲ್ಯಾಶ್ ಇಲ್ಲ. ಗುರು ಬರುತ್ತಿದ್ದಾರೆ. ಸ್ವಲ್ಪ ದಿನ ಆದ್ಮೇನೆ ನಾನು ಶಿಷ್ಯನಾಗಿ ಬರುತ್ತಿದ್ದೇನೆ. ನಮ್ಮ ಚಿತ್ರರಂಗದಲ್ಲಿ ಯಾವ ಹೀರೋಗಳ ಜೊತೆಗೂ ಕ್ಲ್ಯಾಶ್ ಇಲ್ಲ’ ಎಂದು ಸುದೀಪ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: Max Release Date: ಡಿಸೆಂಬರ್​ 25ಕ್ಕೆ ಬಿಡುಗಡೆ ಆಗಲಿದೆ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ

‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರಿಗೆ ಹೀರೋಯಿನ್ ಇಲ್ಲ. ಆ ಬಗ್ಗೆ ಕೂಡ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಕೇಳಿಬಂತು. ಅದರ ಬಗ್ಗೆ ಸುದೀಪ್ ಮಾತನಾಡಿದರು. ‘ನಾವು ಮಹಿಳೆಯರಿಗೆ ಗೌರವ ನೀಡಬೇಕು. ಅಗತ್ಯ ಇದ್ದಾಗ ಮಾತ್ರ ಸಿನಿಮಾದಲ್ಲಿ ಹೀರೋಯಿನ್ ಇರಬೇಕು. ಇಲ್ಲದಿದ್ದರೆ ಒಂದು ಹಾಡಿಗೆ ಯಾಕೆ ಬಂದಿದ್ದೀರಿ ಅಂತ ನೀವೇ ಕೇಳುತ್ತೀರಿ. ಈ ಕಥೆಯಲ್ಲಿ ಹೀರೋಯಿನ್ ಅವಶ್ಯಕತೆ ಇರಲಿಲ್ಲ ಅಂತ ನನಗೆ ಅನಿಸಿತು. ಇದು ಒಂದು ರಾತ್ರಿಯಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿ ಹೀರೋಯಿನ್ ಪಾತ್ರವನ್ನು ತುರುಕೋಕೆ ಆಗಲ್ಲ. ನಾನು ಬೆಳಗ್ಗೆ ಎದ್ದರೆ ಸ್ಕ್ರಿಪ್ಟ್ ಹುಡುಕುತ್ತೇನೆ, ಹೀರೋಯಿನ್ ಅಲ್ಲ’ ಎಂದಿದ್ದಾರೆ ಸುದೀಪ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:59 pm, Sun, 1 December 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ