AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಬಗ್ಗೆ ರಣವೀರ್​ ಸಿಂಗ್​ ಪ್ರೀತಿಯ ಮಾತು; ‘83’ ಚಿತ್ರಕ್ಕೆ ಸ್ಟಾರ್​ ನಟರ ಕಾತರ

83 Movie: ‘ಒಬ್ಬ ಕ್ರಿಕೆಟ್​ ಪ್ರೇಮಿಯಾಗಿ, ಭಾರತೀಯನಾಗಿ ಥಿಯೇಟರ್​ನಲ್ಲಿ ಈ ಚಿತ್ರವನ್ನು ನೋಡಿ ಎಂಜಾಯ್​ ಮಾಡಲು ಬಯಸುತ್ತೇನೆ’ ಎಂದು ‘83’ ಚಿತ್ರದ ಬಗ್ಗೆ ಕಿಚ್ಚ ಸುದೀಪ್​ ಹೇಳಿದ್ದಾರೆ.

ಸುದೀಪ್​ ಬಗ್ಗೆ ರಣವೀರ್​ ಸಿಂಗ್​ ಪ್ರೀತಿಯ ಮಾತು; ‘83’ ಚಿತ್ರಕ್ಕೆ ಸ್ಟಾರ್​ ನಟರ ಕಾತರ
ಕಿಚ್ಚ ಸುದೀಪ್​, ರಣವೀರ್​ ಸಿಂಗ್
TV9 Web
| Edited By: |

Updated on: Dec 18, 2021 | 1:21 PM

Share

ಕ್ರಿಕೆಟ್​ ಬಗ್ಗೆ ಕಿಚ್ಚ ಸುದೀಪ್ (Kichcha Sudeep)​ ಅವರಿಗೆ ಅಪಾರವಾದ ಆಸಕ್ತಿ ಇದೆ. 1983ರಲ್ಲಿ ಭಾರತೀಯ ಕ್ರಿಕೆಟ್​ ತಂಡ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ‘83’ (83 Movie) ಸಿನಿಮಾ ಸಿದ್ಧಗೊಂಡಿದೆ. ಅದನ್ನು ಕರ್ನಾಟಕದಲ್ಲಿ ಸುದೀಪ್​ ಪ್ರಸ್ತುತಪಡಿಸುತ್ತಿದ್ದಾರೆ. ಅಲ್ಲದೇ, ಈ ಸಿನಿಮಾ ಬಗ್ಗೆ ತಮಗೆ ಎಷ್ಟು ಕಾತರ ಇದೆ ಎಂಬುದನ್ನು ಅವರು ವಿವರಿಸಿದ್ದಾರೆ. ಆ ವಿಡಿಯೋವನ್ನು ರಣವೀರ್​ ಸಿಂಗ್​ (Ranveer Singh) ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ‘ಹೆಸರಾಂತ ನಟ, ನಿರ್ದೇಶಕ, ನಿರ್ಮಾಪಕ ಕಿಚ್ಚ ಸುದೀಪ್​ ಅವರು ಭಾರತದ ಮಹಾನ್​ ಗೆಲುವನ್ನು ಬೆಳ್ಳಿಪರದೆ ಮೇಲೆ ನೋಡಲು ಕಾತರಾಗಿದ್ದಾರೆ’ ಎಂದು ಆ ವಿಡಿಯೋಗೆ ರಣವೀರ್​ ಸಿಂಗ್​ ಅವರು ಕ್ಯಾಪ್ಷನ್​ ನೀಡಿದ್ದಾರೆ. ಹಿಂದಿಯಲ್ಲಿ ತಯಾರಾಗಿರುವ ‘83’ ಸಿನಿಮಾ ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳು ಭಾಷೆಗೆ ಡಬ್​ ಆಗಿ ತೆರೆಕಾಣುತ್ತಿದೆ. ಡಿ.24ರಂದು ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗುತ್ತಿದೆ.

‘1983ರ ವಿಶ್ವಕಪ್​ ಬಗ್ಗೆ ಮಾತನಾಡಲು ಹಲವು ವಿಚಾರಗಳಿವೆ. ಅದರಲ್ಲೊಂದು ಕಥೆ ಇದೆ ಅಂತ ಒಂದು ತಂಡ ನಂಬಿದೆ. ಆ ಕಥೆ ಮಹತ್ವದ್ದಾಗಲಿದೆ ಎಂಬ ನಂಬಿಕೆ ಆ ತಂಡಕ್ಕೆ ಇದೆ. ಆ ನಂಬಿಕೆಯೇ ನನಗೆ ಒಂದು ಅದ್ಭುತ ಕಥೆಯಂತೆ ಕಾಣಿಸುತ್ತಿದೆ. ಒಬ್ಬ ಕ್ರಿಕೆಟ್​ ಪ್ರೇಮಿಯಾಗಿ, ಭಾರತೀಯನಾಗಿ ಥಿಯೇಟರ್​ನಲ್ಲಿ ಈ ಚಿತ್ರವನ್ನು ನೋಡಿ ಎಂಜಾಯ್​ ಮಾಡಲು ಬಯಸುತ್ತೇನೆ. ಇಂಥ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ನಿರ್ದೇಶಕ ಕಬೀರ್​ ಖಾನ್​ ಮತ್ತು ಇಡೀ ತಂಡಕ್ಕೆ ನನ್ನ ಅಭಿನಂದನೆಗಳು. ಭಾರತ ವಿಶ್ವಕಪ್​ ಗೆದ್ದಾಗ ಎಷ್ಟು ಖುಷಿ ಆಗಿತ್ತೋ ಅದೇ ರೀತಿ ಈ ಸಿನಿಮಾ ತೆರೆ​ಕಾಣುತ್ತಿರುವುದಕ್ಕೆ ಖುಷಿ ಆಗುತ್ತಿದೆ’ ಎಂದು ಸುದೀಪ್​ ಹೇಳಿದ್ದಾರೆ.

ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಹಲವು ತಿಂಗಳಿಂದ ಕಾಯುತ್ತಿದ್ದರು. ಮೊದಲ ಲಾಕ್​ಡೌನ್​ ಶುರುವಾಗುವುದಕ್ಕೂ ಮುನ್ನವೇ ಈ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಆದರೆ ಲಾಕ್​ಡೌನ್​ ಜಾರಿಯಾದ ಬಳಿಕ ಬಿಡುಗಡೆ ದಿನಾಂಕ ಮುಂದೂಡಿಕೊಳ್ಳುವುದು ಅನಿವಾರ್ಯ ಆಗಿತ್ತು. ರಣವೀರ್​ ಸಿಂಗ್​ ನಟನೆಯ ಈ ಚಿತ್ರ ಈಗ ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ಡಿ.24ರಂದು ತೆರೆ ಕಾಣಲಿದೆ. ಕಿಚ್ಚ ಸುದೀಪ್​ ಅವರು ಕೂಡ ಈಗ ಈ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ. ಅಂದರೆ, ಕನ್ನಡದಲ್ಲಿ ‘83’ ಸಿನಿಮಾವನ್ನು ಸುದೀಪ್​ ಅರ್ಪಿಸುತ್ತಿದ್ದಾರೆ.

ಕಪಿಲ್​ ದೇವ್​ ಪಾತ್ರದಲ್ಲಿ ನಟಿಸಲು ರಣವೀರ್​ ಸಿಂಗ್​ ತುಂಬ ಶ್ರಮಪಟ್ಟಿದ್ದಾರೆ. ಟೀಸರ್​ ಮತ್ತು ಪೋಸ್ಟರ್​ಗಳಲ್ಲಿ ಅವರ ಲುಕ್​ ಗಮನ ಸೆಳೆದಿದೆ. ಕರ್ನಾಟಕದಲ್ಲಿ ಶಾಲಿನಿ ಆರ್ಟ್ಸ್ ಹಾಗೂ ರಿಲಯನ್ಸ್ ಎಂಟರ್​ಟೇನ್ಮೆಂಟ್​ ಸಂಸ್ಥೆಗಳು ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿವೆ. ದೀಪಿಕಾ ಪಡುಕೋಣೆ, ಕಬೀರ್ ಖಾನ್, ವಿಷ್ಣು ವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಹಾಗೂ 83 ಫಿಲ್ಮ್ ಲಿಮಿಟೆಡ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ.

ಇದನ್ನೂ ಓದಿ:

ಜೆನಿಲಿಯಾ ರಿತೇಶ್​ ದಂಪತಿಗೆ ಸುದೀಪ್​ ಪ್ರೀತಿಯ ವಿಶ್​; ಹೊಸ ಕಾರ್ಯಕ್ಕೆ ಕಿಚ್ಚನ ಪ್ರೋತ್ಸಾಹ

ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್​

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ