AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಜೊತೆ ನಟ ಸುದೀಪ್​ ಉತ್ತಮ ಒಡನಾಟ ಹೊಂದಿದ್ದಾರೆ. ಅದೇ ಆತ್ಮೀಯತೆಯ ಕಾರಣದಿಂದ ಕಿಚ್ಚ ಕೆಲವು ಮಾತುಗಳನ್ನು ಹಂಚಿಕೊಂಡಿದ್ದಾರೆ.

ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!
ಸುದೀಪ್​ - ರವಿಚಂದ್ರನ್​
ಮದನ್​ ಕುಮಾರ್​
|

Updated on: Mar 16, 2021 | 11:48 AM

Share

ಕಿಚ್ಚ ಸುದೀಪ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ‘ಕೋಟಿಗೊಬ್ಬ 3’ ಚಿತ್ರತಂಡ ದೊಡ್ಡ ಕಾರ್ಯಕ್ರಮ ನಡೆಸಿದೆ. ಇದರಲ್ಲಿ ಸ್ಯಾಂಡಲ್​ವುಡ್​ನ ಅನೇಕರು ಪಾಲ್ಗೊಂಡಿದ್ದರು. ವೇದಿಕೆ ಮೇಲೆ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಕೂಡ ಇದ್ದರು. ಈ ಸಂದರ್ಭದಲ್ಲಿ ಅವರ ಬಗ್ಗೆ ಸುದೀಪ್​ ಮಾತನಾಡಿದರು. ರವಿಚಂದ್ರನ್​ ಯಾವಾಗಲೂ ಕಪ್ಪು ಬಟ್ಟೆ ಧರಿಸೋದು ಯಾಕೆ ಎಂಬುದನ್ನು ಸುದೀಪ್ ಬಹಿರಂಗ ಪಡಿಸಿದರು.

‘ರವಿಚಂದ್ರನ್​ ಅವರ ಸಿನಿಮಾಗಳನ್ನು ನೋಡಿಕೊಂಡು, ನಾನು ಕೂಡ ಅವರ ರೀತಿಯೇ ಆಗಬೇಕು ಎಂದು ಕಪ್ಪು ಬಟ್ಟೆ ಹಾಕುತ್ತಿದ್ದೆ. ನಾನು ಬ್ಲಾಕ್​ ಬಟ್ಟೆ ಹಾಕಲು ಕಾರಣವೇ ರವಿ ಸರ್​. ನೀವು ಯಾವಾಗಲೂ ಬ್ಲಾಕ್​ ಹಾಕುತ್ತೀರಿ ಎಂದು ಅವರನ್ನು ಒಮ್ಮೆ ನಾನು ಕೇಳಿದ್ದೆ. ಅದಕ್ಕೆ ಎರಡು ಕಾರಣ ಇದೆ ಅಂದರು. ಒಂದು- ನಾವು ಬೆಳ್ಳಗೆ ಕಾಣುತ್ತೇವೆ. ಎರಡನೆಯದು- ನಾವು ತೆಳ್ಳಗೆ ಕಾಣುತ್ತೇವೆ ಅಂತ ರವಿಚಂದ್ರನ್​ ಹೇಳಿದ್ದರು’ ಎಂದಿದ್ದಾರೆ ಸುದೀಪ್​.

ರವಿಚಂದ್ರನ್​ ಬಗ್ಗೆ ಬಹಳ ಗೌರವದ ಮಾತುಗಳನ್ನು ಸುದೀಪ್​ ಹೇಳಿದ್ದಾರೆ. ‘ರವಿಚಂದ್ರನ್​ ರೀತಿಯ ದೊಡ್ಡ ಕಲಾವಿದರು ಈ ವೇದಿಕೆಯಲ್ಲಿ ನಿಂತುಕೊಂಡು ಸುದೀಪ್​ ನನ್ನ ದೊಡ್ಡ ಮಗ ಎಂದಾಗ ನನಗೆ ಎಲ್ಲಿಲ್ಲದ ಖುಷಿ ಆಗತ್ತೆ. ಒಬ್ಬ ಕಲಾವಿದನಾಗಿ ನನ್ನ ಬಗ್ಗೆ ಹೊಗಳುವುದು ಬೇರೆ. ಮನಪೂರ್ವಕವಾಗಿ ನನ್ನನ್ನು ದೊಡ್ಮಗ ಎನ್ನುವುದೇ ಬೇರೆ. ಆ ಸ್ಥಾನ ಕೊಟ್ಟಿದ್ದಾಗಿ ಥ್ಯಾಂಕ್​ ಯೂ ಸೋ ಮಚ್​’ ಎಂದು ‘ಕ್ರೇಜಿ ಸ್ಟಾರ್​’ಗೆ ಕಿಚ್ಚ ಧನ್ಯವಾದ ಸಲ್ಲಿಸಿದರು.

ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್​ವುಡ್​ನ ಅನೇಕ ಸ್ಟಾರ್​ಗಳ ಭಾಗವಹಿಸಿದ್ದರು. ಶಿವರಾಜ್​ ಕುಮಾರ್​, ರಮೇಶ್​ ಅರವಿಂದ್​, ಸುನೀಲ್​ ಕುಮಾರ್​ ದೇಸಾಯಿ, ರಾಕ್​ಲೈನ್​ ವೆಂಕಟೇಶ್​ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸುದೀಪ್​ ಅವರ 25 ವರ್ಷಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಸಾವಿರಾರು ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕನ್ನಡ ಚಿತ್ರರಂಗದ ಪರವಾಗಿ ವಿಶೇಷ ಬೇಡಿಕೆ ಇಟ್ಟ ಕಿಚ್ಚ ಸುದೀಪ್​

Kichcha Sudeep: ನೀವು ಕೊಟ್ಟ ಪ್ರೀತಿ ಎದುರು ಬಾಕ್ಸ್​ ಆಫೀಸ್​ ಗಳಿಕೆ ಏನೂ ಅಲ್ಲ; ಕಿಚ್ಚ ಸುದೀಪ್​

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ