AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಜೊತೆ ನಟ ಸುದೀಪ್​ ಉತ್ತಮ ಒಡನಾಟ ಹೊಂದಿದ್ದಾರೆ. ಅದೇ ಆತ್ಮೀಯತೆಯ ಕಾರಣದಿಂದ ಕಿಚ್ಚ ಕೆಲವು ಮಾತುಗಳನ್ನು ಹಂಚಿಕೊಂಡಿದ್ದಾರೆ.

ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!
ಸುದೀಪ್​ - ರವಿಚಂದ್ರನ್​
Follow us
ಮದನ್​ ಕುಮಾರ್​
|

Updated on: Mar 16, 2021 | 11:48 AM

ಕಿಚ್ಚ ಸುದೀಪ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ‘ಕೋಟಿಗೊಬ್ಬ 3’ ಚಿತ್ರತಂಡ ದೊಡ್ಡ ಕಾರ್ಯಕ್ರಮ ನಡೆಸಿದೆ. ಇದರಲ್ಲಿ ಸ್ಯಾಂಡಲ್​ವುಡ್​ನ ಅನೇಕರು ಪಾಲ್ಗೊಂಡಿದ್ದರು. ವೇದಿಕೆ ಮೇಲೆ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಕೂಡ ಇದ್ದರು. ಈ ಸಂದರ್ಭದಲ್ಲಿ ಅವರ ಬಗ್ಗೆ ಸುದೀಪ್​ ಮಾತನಾಡಿದರು. ರವಿಚಂದ್ರನ್​ ಯಾವಾಗಲೂ ಕಪ್ಪು ಬಟ್ಟೆ ಧರಿಸೋದು ಯಾಕೆ ಎಂಬುದನ್ನು ಸುದೀಪ್ ಬಹಿರಂಗ ಪಡಿಸಿದರು.

‘ರವಿಚಂದ್ರನ್​ ಅವರ ಸಿನಿಮಾಗಳನ್ನು ನೋಡಿಕೊಂಡು, ನಾನು ಕೂಡ ಅವರ ರೀತಿಯೇ ಆಗಬೇಕು ಎಂದು ಕಪ್ಪು ಬಟ್ಟೆ ಹಾಕುತ್ತಿದ್ದೆ. ನಾನು ಬ್ಲಾಕ್​ ಬಟ್ಟೆ ಹಾಕಲು ಕಾರಣವೇ ರವಿ ಸರ್​. ನೀವು ಯಾವಾಗಲೂ ಬ್ಲಾಕ್​ ಹಾಕುತ್ತೀರಿ ಎಂದು ಅವರನ್ನು ಒಮ್ಮೆ ನಾನು ಕೇಳಿದ್ದೆ. ಅದಕ್ಕೆ ಎರಡು ಕಾರಣ ಇದೆ ಅಂದರು. ಒಂದು- ನಾವು ಬೆಳ್ಳಗೆ ಕಾಣುತ್ತೇವೆ. ಎರಡನೆಯದು- ನಾವು ತೆಳ್ಳಗೆ ಕಾಣುತ್ತೇವೆ ಅಂತ ರವಿಚಂದ್ರನ್​ ಹೇಳಿದ್ದರು’ ಎಂದಿದ್ದಾರೆ ಸುದೀಪ್​.

ರವಿಚಂದ್ರನ್​ ಬಗ್ಗೆ ಬಹಳ ಗೌರವದ ಮಾತುಗಳನ್ನು ಸುದೀಪ್​ ಹೇಳಿದ್ದಾರೆ. ‘ರವಿಚಂದ್ರನ್​ ರೀತಿಯ ದೊಡ್ಡ ಕಲಾವಿದರು ಈ ವೇದಿಕೆಯಲ್ಲಿ ನಿಂತುಕೊಂಡು ಸುದೀಪ್​ ನನ್ನ ದೊಡ್ಡ ಮಗ ಎಂದಾಗ ನನಗೆ ಎಲ್ಲಿಲ್ಲದ ಖುಷಿ ಆಗತ್ತೆ. ಒಬ್ಬ ಕಲಾವಿದನಾಗಿ ನನ್ನ ಬಗ್ಗೆ ಹೊಗಳುವುದು ಬೇರೆ. ಮನಪೂರ್ವಕವಾಗಿ ನನ್ನನ್ನು ದೊಡ್ಮಗ ಎನ್ನುವುದೇ ಬೇರೆ. ಆ ಸ್ಥಾನ ಕೊಟ್ಟಿದ್ದಾಗಿ ಥ್ಯಾಂಕ್​ ಯೂ ಸೋ ಮಚ್​’ ಎಂದು ‘ಕ್ರೇಜಿ ಸ್ಟಾರ್​’ಗೆ ಕಿಚ್ಚ ಧನ್ಯವಾದ ಸಲ್ಲಿಸಿದರು.

ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್​ವುಡ್​ನ ಅನೇಕ ಸ್ಟಾರ್​ಗಳ ಭಾಗವಹಿಸಿದ್ದರು. ಶಿವರಾಜ್​ ಕುಮಾರ್​, ರಮೇಶ್​ ಅರವಿಂದ್​, ಸುನೀಲ್​ ಕುಮಾರ್​ ದೇಸಾಯಿ, ರಾಕ್​ಲೈನ್​ ವೆಂಕಟೇಶ್​ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸುದೀಪ್​ ಅವರ 25 ವರ್ಷಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಸಾವಿರಾರು ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕನ್ನಡ ಚಿತ್ರರಂಗದ ಪರವಾಗಿ ವಿಶೇಷ ಬೇಡಿಕೆ ಇಟ್ಟ ಕಿಚ್ಚ ಸುದೀಪ್​

Kichcha Sudeep: ನೀವು ಕೊಟ್ಟ ಪ್ರೀತಿ ಎದುರು ಬಾಕ್ಸ್​ ಆಫೀಸ್​ ಗಳಿಕೆ ಏನೂ ಅಲ್ಲ; ಕಿಚ್ಚ ಸುದೀಪ್​

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ