AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಜೊತೆ ನಟ ಸುದೀಪ್​ ಉತ್ತಮ ಒಡನಾಟ ಹೊಂದಿದ್ದಾರೆ. ಅದೇ ಆತ್ಮೀಯತೆಯ ಕಾರಣದಿಂದ ಕಿಚ್ಚ ಕೆಲವು ಮಾತುಗಳನ್ನು ಹಂಚಿಕೊಂಡಿದ್ದಾರೆ.

ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!
ಸುದೀಪ್​ - ರವಿಚಂದ್ರನ್​
ಮದನ್​ ಕುಮಾರ್​
|

Updated on: Mar 16, 2021 | 11:48 AM

Share

ಕಿಚ್ಚ ಸುದೀಪ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ‘ಕೋಟಿಗೊಬ್ಬ 3’ ಚಿತ್ರತಂಡ ದೊಡ್ಡ ಕಾರ್ಯಕ್ರಮ ನಡೆಸಿದೆ. ಇದರಲ್ಲಿ ಸ್ಯಾಂಡಲ್​ವುಡ್​ನ ಅನೇಕರು ಪಾಲ್ಗೊಂಡಿದ್ದರು. ವೇದಿಕೆ ಮೇಲೆ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಕೂಡ ಇದ್ದರು. ಈ ಸಂದರ್ಭದಲ್ಲಿ ಅವರ ಬಗ್ಗೆ ಸುದೀಪ್​ ಮಾತನಾಡಿದರು. ರವಿಚಂದ್ರನ್​ ಯಾವಾಗಲೂ ಕಪ್ಪು ಬಟ್ಟೆ ಧರಿಸೋದು ಯಾಕೆ ಎಂಬುದನ್ನು ಸುದೀಪ್ ಬಹಿರಂಗ ಪಡಿಸಿದರು.

‘ರವಿಚಂದ್ರನ್​ ಅವರ ಸಿನಿಮಾಗಳನ್ನು ನೋಡಿಕೊಂಡು, ನಾನು ಕೂಡ ಅವರ ರೀತಿಯೇ ಆಗಬೇಕು ಎಂದು ಕಪ್ಪು ಬಟ್ಟೆ ಹಾಕುತ್ತಿದ್ದೆ. ನಾನು ಬ್ಲಾಕ್​ ಬಟ್ಟೆ ಹಾಕಲು ಕಾರಣವೇ ರವಿ ಸರ್​. ನೀವು ಯಾವಾಗಲೂ ಬ್ಲಾಕ್​ ಹಾಕುತ್ತೀರಿ ಎಂದು ಅವರನ್ನು ಒಮ್ಮೆ ನಾನು ಕೇಳಿದ್ದೆ. ಅದಕ್ಕೆ ಎರಡು ಕಾರಣ ಇದೆ ಅಂದರು. ಒಂದು- ನಾವು ಬೆಳ್ಳಗೆ ಕಾಣುತ್ತೇವೆ. ಎರಡನೆಯದು- ನಾವು ತೆಳ್ಳಗೆ ಕಾಣುತ್ತೇವೆ ಅಂತ ರವಿಚಂದ್ರನ್​ ಹೇಳಿದ್ದರು’ ಎಂದಿದ್ದಾರೆ ಸುದೀಪ್​.

ರವಿಚಂದ್ರನ್​ ಬಗ್ಗೆ ಬಹಳ ಗೌರವದ ಮಾತುಗಳನ್ನು ಸುದೀಪ್​ ಹೇಳಿದ್ದಾರೆ. ‘ರವಿಚಂದ್ರನ್​ ರೀತಿಯ ದೊಡ್ಡ ಕಲಾವಿದರು ಈ ವೇದಿಕೆಯಲ್ಲಿ ನಿಂತುಕೊಂಡು ಸುದೀಪ್​ ನನ್ನ ದೊಡ್ಡ ಮಗ ಎಂದಾಗ ನನಗೆ ಎಲ್ಲಿಲ್ಲದ ಖುಷಿ ಆಗತ್ತೆ. ಒಬ್ಬ ಕಲಾವಿದನಾಗಿ ನನ್ನ ಬಗ್ಗೆ ಹೊಗಳುವುದು ಬೇರೆ. ಮನಪೂರ್ವಕವಾಗಿ ನನ್ನನ್ನು ದೊಡ್ಮಗ ಎನ್ನುವುದೇ ಬೇರೆ. ಆ ಸ್ಥಾನ ಕೊಟ್ಟಿದ್ದಾಗಿ ಥ್ಯಾಂಕ್​ ಯೂ ಸೋ ಮಚ್​’ ಎಂದು ‘ಕ್ರೇಜಿ ಸ್ಟಾರ್​’ಗೆ ಕಿಚ್ಚ ಧನ್ಯವಾದ ಸಲ್ಲಿಸಿದರು.

ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್​ವುಡ್​ನ ಅನೇಕ ಸ್ಟಾರ್​ಗಳ ಭಾಗವಹಿಸಿದ್ದರು. ಶಿವರಾಜ್​ ಕುಮಾರ್​, ರಮೇಶ್​ ಅರವಿಂದ್​, ಸುನೀಲ್​ ಕುಮಾರ್​ ದೇಸಾಯಿ, ರಾಕ್​ಲೈನ್​ ವೆಂಕಟೇಶ್​ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸುದೀಪ್​ ಅವರ 25 ವರ್ಷಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಸಾವಿರಾರು ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕನ್ನಡ ಚಿತ್ರರಂಗದ ಪರವಾಗಿ ವಿಶೇಷ ಬೇಡಿಕೆ ಇಟ್ಟ ಕಿಚ್ಚ ಸುದೀಪ್​

Kichcha Sudeep: ನೀವು ಕೊಟ್ಟ ಪ್ರೀತಿ ಎದುರು ಬಾಕ್ಸ್​ ಆಫೀಸ್​ ಗಳಿಕೆ ಏನೂ ಅಲ್ಲ; ಕಿಚ್ಚ ಸುದೀಪ್​

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ