AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Kichcha Sudeep: ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!
ವಿರಾಟ್​ ಕೊಹ್ಲಿ-ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 09, 2021 | 3:51 PM

Share

ಐಪಿಎಲ್​​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕಿಚ್ಚ ಸುದೀಪ್​ ಅವರ ಫೇವರಿಟ್​ ತಂಡ. ಈ ಮೊದಲು ಅನೇಕ ಬಾರಿ ಅವರು ಮೈದಾನಕ್ಕೆ ತೆರಳಿ ಟೀಂ ಅನ್ನು ಬೆಂಬಲಿಸಿದ್ದಾರೆ. ಆರ್​ಸಿಬಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ ಪ್ರತಿ ಸೀಸನ್​ಅಲ್ಲೂ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್​​ ಹೇಳೋಕೆ ಮರೆಯುವುದಿಲ್ಲ. ಈ ಬಾರಿ ಸುದೀಪ್​ ಗುಡ್​ ಲಕ್​ ಹೇಳೋದು ಮಾತ್ರವಲ್ಲ ವಿಶೇಷವಾಗಿ ಆರ್​ಸಿಬಿ ಬಗ್ಗೆ ಮಾತನಾಡಿದ್ದಾರೆ. ಇಂದು (ಏ.9) ಸಂಜೆ ಆರು ಗಂಟೆಗೆ ಸುದೀಪ್​ ಸ್ಟಾರ್​ ಸ್ಪೋರ್ಟ್ಸ್​ ಕನ್ನಡದಲ್ಲಿ ಪ್ರಸಾರವಾಗುವ ByjusCricketLive ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುದೀಪ್​ ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಸ್ಟಾರ್​​ ಸ್ಪೋರ್ಟ್ಸ್​​ ಕನ್ನಡ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಸುದೀಪ್​ ಮಾತನಾಡಿದ್ದಾರೆ. ಆರ್​ಸಿಬಿ ಗೆಲ್ಲಲಿ, ಸೋಲಲಿ ನಾವು ಆ ತಂಡದ ಜತೆಗಿದ್ದೇವೆ. ಯಾವುಗಲೂ ಇರುತ್ತೇವೆ. ಆರ್​ಸಿಬಿಗೆ ಇದಕ್ಕಿಂತ ಪಾಸಿಟಿವ್​ ವಿಚಾರ ಮತ್ತೊಂದು ಬೇಕಿಲ್ಲ. ಆರ್​ಸಿಬಿ ಸೋತರೂ ನಮ್​ ಟೀಮ್​, ಗೆದ್ದರೂ ನಮ್ಮ ಟೀಮ್​. ಈಗ ಶರ್ಟ್​ಗೆ ಕಾಲರ್​ ಇಲ್ಲ. ನಮ್ಮ ಟೀಂ ಗೆದ್ದರೆ, ಕಾಲರ್​ ಹಾಕಿಕೊಂಡು ಓಡಾಡುತ್ತೇವೆ ಎಂದಿದ್ದಾರೆ ಸುದೀಪ್​.

ಇತ್ತೀಚೆಗೆ ಬಿಗ್​ ಬಾಸ್​ ವೇದಿಕೆ ಮೇಲೆ ಸುದೀಪ್​ ಆರ್​ಸಿಬಿಗೆ ಶುಭಕೋರಿದ್ದರು. ಬಿಗ್​ ಬಾಸ್​ ಮನೆಯ ಕಡೆಯಿಂದ, ಬಿಗ್​ ಬಾಸ್​ ಸ್ಪರ್ಧಿಗಳ ಪರವಾಗಿ, ಬಿಗ್​ ಬಾಸ್​ ತಂತ್ರಜ್ಞರ ಪರವಾಗಿ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್ ಹೇಳುತ್ತೇನೆ ಎಂದಿದ್ದರು.  ಕಿಚ್ಚ ಸುದೀಪ್​ ಕ್ರಿಕೆಟ್ ಪ್ರಿಯರು. ಸ್ಯಾಂಡಲ್​ವುಡ್​ನಲ್ಲಿ ಕ್ರಿಕೆಟ್​ ಮ್ಯಾಚ್​ ನಡೆಸೋಕೆ ಇವರದೇ ನೇತೃತ್ವ. ಹೀಗಾಗಿ, ಇವರಿಗೆ ಕ್ರಿಕೆಟ್​ ಮೇಲೆ ಹೆಚ್ಚು ಆಸಕ್ತಿ ಇದೆ.

ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ. ಈಗಾಗಲೇ ಅಭಿಮಾನಿಗಳು ಮ್ಯಾಚ್​ ನೋಡೋಕೆ ಕುತೂಹಲದಿಂದ ಕಾದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ವೇದಿಕೆ ಮೇಲೆ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಅಂದ್ರು ಸುದೀಪ್​!

Published On - 3:50 pm, Fri, 9 April 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ