MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Kichcha Sudeep: ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!
ವಿರಾಟ್​ ಕೊಹ್ಲಿ-ಸುದೀಪ್​
Follow us
|

Updated on:Apr 09, 2021 | 3:51 PM

ಐಪಿಎಲ್​​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕಿಚ್ಚ ಸುದೀಪ್​ ಅವರ ಫೇವರಿಟ್​ ತಂಡ. ಈ ಮೊದಲು ಅನೇಕ ಬಾರಿ ಅವರು ಮೈದಾನಕ್ಕೆ ತೆರಳಿ ಟೀಂ ಅನ್ನು ಬೆಂಬಲಿಸಿದ್ದಾರೆ. ಆರ್​ಸಿಬಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ ಪ್ರತಿ ಸೀಸನ್​ಅಲ್ಲೂ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್​​ ಹೇಳೋಕೆ ಮರೆಯುವುದಿಲ್ಲ. ಈ ಬಾರಿ ಸುದೀಪ್​ ಗುಡ್​ ಲಕ್​ ಹೇಳೋದು ಮಾತ್ರವಲ್ಲ ವಿಶೇಷವಾಗಿ ಆರ್​ಸಿಬಿ ಬಗ್ಗೆ ಮಾತನಾಡಿದ್ದಾರೆ. ಇಂದು (ಏ.9) ಸಂಜೆ ಆರು ಗಂಟೆಗೆ ಸುದೀಪ್​ ಸ್ಟಾರ್​ ಸ್ಪೋರ್ಟ್ಸ್​ ಕನ್ನಡದಲ್ಲಿ ಪ್ರಸಾರವಾಗುವ ByjusCricketLive ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುದೀಪ್​ ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಸ್ಟಾರ್​​ ಸ್ಪೋರ್ಟ್ಸ್​​ ಕನ್ನಡ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಸುದೀಪ್​ ಮಾತನಾಡಿದ್ದಾರೆ. ಆರ್​ಸಿಬಿ ಗೆಲ್ಲಲಿ, ಸೋಲಲಿ ನಾವು ಆ ತಂಡದ ಜತೆಗಿದ್ದೇವೆ. ಯಾವುಗಲೂ ಇರುತ್ತೇವೆ. ಆರ್​ಸಿಬಿಗೆ ಇದಕ್ಕಿಂತ ಪಾಸಿಟಿವ್​ ವಿಚಾರ ಮತ್ತೊಂದು ಬೇಕಿಲ್ಲ. ಆರ್​ಸಿಬಿ ಸೋತರೂ ನಮ್​ ಟೀಮ್​, ಗೆದ್ದರೂ ನಮ್ಮ ಟೀಮ್​. ಈಗ ಶರ್ಟ್​ಗೆ ಕಾಲರ್​ ಇಲ್ಲ. ನಮ್ಮ ಟೀಂ ಗೆದ್ದರೆ, ಕಾಲರ್​ ಹಾಕಿಕೊಂಡು ಓಡಾಡುತ್ತೇವೆ ಎಂದಿದ್ದಾರೆ ಸುದೀಪ್​.

ಇತ್ತೀಚೆಗೆ ಬಿಗ್​ ಬಾಸ್​ ವೇದಿಕೆ ಮೇಲೆ ಸುದೀಪ್​ ಆರ್​ಸಿಬಿಗೆ ಶುಭಕೋರಿದ್ದರು. ಬಿಗ್​ ಬಾಸ್​ ಮನೆಯ ಕಡೆಯಿಂದ, ಬಿಗ್​ ಬಾಸ್​ ಸ್ಪರ್ಧಿಗಳ ಪರವಾಗಿ, ಬಿಗ್​ ಬಾಸ್​ ತಂತ್ರಜ್ಞರ ಪರವಾಗಿ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್ ಹೇಳುತ್ತೇನೆ ಎಂದಿದ್ದರು.  ಕಿಚ್ಚ ಸುದೀಪ್​ ಕ್ರಿಕೆಟ್ ಪ್ರಿಯರು. ಸ್ಯಾಂಡಲ್​ವುಡ್​ನಲ್ಲಿ ಕ್ರಿಕೆಟ್​ ಮ್ಯಾಚ್​ ನಡೆಸೋಕೆ ಇವರದೇ ನೇತೃತ್ವ. ಹೀಗಾಗಿ, ಇವರಿಗೆ ಕ್ರಿಕೆಟ್​ ಮೇಲೆ ಹೆಚ್ಚು ಆಸಕ್ತಿ ಇದೆ.

ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ. ಈಗಾಗಲೇ ಅಭಿಮಾನಿಗಳು ಮ್ಯಾಚ್​ ನೋಡೋಕೆ ಕುತೂಹಲದಿಂದ ಕಾದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ವೇದಿಕೆ ಮೇಲೆ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಅಂದ್ರು ಸುದೀಪ್​!

Published On - 3:50 pm, Fri, 9 April 21

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು