AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Kichcha Sudeep: ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!
ವಿರಾಟ್​ ಕೊಹ್ಲಿ-ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 09, 2021 | 3:51 PM

Share

ಐಪಿಎಲ್​​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕಿಚ್ಚ ಸುದೀಪ್​ ಅವರ ಫೇವರಿಟ್​ ತಂಡ. ಈ ಮೊದಲು ಅನೇಕ ಬಾರಿ ಅವರು ಮೈದಾನಕ್ಕೆ ತೆರಳಿ ಟೀಂ ಅನ್ನು ಬೆಂಬಲಿಸಿದ್ದಾರೆ. ಆರ್​ಸಿಬಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ ಪ್ರತಿ ಸೀಸನ್​ಅಲ್ಲೂ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್​​ ಹೇಳೋಕೆ ಮರೆಯುವುದಿಲ್ಲ. ಈ ಬಾರಿ ಸುದೀಪ್​ ಗುಡ್​ ಲಕ್​ ಹೇಳೋದು ಮಾತ್ರವಲ್ಲ ವಿಶೇಷವಾಗಿ ಆರ್​ಸಿಬಿ ಬಗ್ಗೆ ಮಾತನಾಡಿದ್ದಾರೆ. ಇಂದು (ಏ.9) ಸಂಜೆ ಆರು ಗಂಟೆಗೆ ಸುದೀಪ್​ ಸ್ಟಾರ್​ ಸ್ಪೋರ್ಟ್ಸ್​ ಕನ್ನಡದಲ್ಲಿ ಪ್ರಸಾರವಾಗುವ ByjusCricketLive ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುದೀಪ್​ ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಸ್ಟಾರ್​​ ಸ್ಪೋರ್ಟ್ಸ್​​ ಕನ್ನಡ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಸುದೀಪ್​ ಮಾತನಾಡಿದ್ದಾರೆ. ಆರ್​ಸಿಬಿ ಗೆಲ್ಲಲಿ, ಸೋಲಲಿ ನಾವು ಆ ತಂಡದ ಜತೆಗಿದ್ದೇವೆ. ಯಾವುಗಲೂ ಇರುತ್ತೇವೆ. ಆರ್​ಸಿಬಿಗೆ ಇದಕ್ಕಿಂತ ಪಾಸಿಟಿವ್​ ವಿಚಾರ ಮತ್ತೊಂದು ಬೇಕಿಲ್ಲ. ಆರ್​ಸಿಬಿ ಸೋತರೂ ನಮ್​ ಟೀಮ್​, ಗೆದ್ದರೂ ನಮ್ಮ ಟೀಮ್​. ಈಗ ಶರ್ಟ್​ಗೆ ಕಾಲರ್​ ಇಲ್ಲ. ನಮ್ಮ ಟೀಂ ಗೆದ್ದರೆ, ಕಾಲರ್​ ಹಾಕಿಕೊಂಡು ಓಡಾಡುತ್ತೇವೆ ಎಂದಿದ್ದಾರೆ ಸುದೀಪ್​.

ಇತ್ತೀಚೆಗೆ ಬಿಗ್​ ಬಾಸ್​ ವೇದಿಕೆ ಮೇಲೆ ಸುದೀಪ್​ ಆರ್​ಸಿಬಿಗೆ ಶುಭಕೋರಿದ್ದರು. ಬಿಗ್​ ಬಾಸ್​ ಮನೆಯ ಕಡೆಯಿಂದ, ಬಿಗ್​ ಬಾಸ್​ ಸ್ಪರ್ಧಿಗಳ ಪರವಾಗಿ, ಬಿಗ್​ ಬಾಸ್​ ತಂತ್ರಜ್ಞರ ಪರವಾಗಿ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್ ಹೇಳುತ್ತೇನೆ ಎಂದಿದ್ದರು.  ಕಿಚ್ಚ ಸುದೀಪ್​ ಕ್ರಿಕೆಟ್ ಪ್ರಿಯರು. ಸ್ಯಾಂಡಲ್​ವುಡ್​ನಲ್ಲಿ ಕ್ರಿಕೆಟ್​ ಮ್ಯಾಚ್​ ನಡೆಸೋಕೆ ಇವರದೇ ನೇತೃತ್ವ. ಹೀಗಾಗಿ, ಇವರಿಗೆ ಕ್ರಿಕೆಟ್​ ಮೇಲೆ ಹೆಚ್ಚು ಆಸಕ್ತಿ ಇದೆ.

ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ. ಈಗಾಗಲೇ ಅಭಿಮಾನಿಗಳು ಮ್ಯಾಚ್​ ನೋಡೋಕೆ ಕುತೂಹಲದಿಂದ ಕಾದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ವೇದಿಕೆ ಮೇಲೆ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಅಂದ್ರು ಸುದೀಪ್​!

Published On - 3:50 pm, Fri, 9 April 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​