AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Kichcha Sudeep: ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!
ವಿರಾಟ್​ ಕೊಹ್ಲಿ-ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 09, 2021 | 3:51 PM

Share

ಐಪಿಎಲ್​​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕಿಚ್ಚ ಸುದೀಪ್​ ಅವರ ಫೇವರಿಟ್​ ತಂಡ. ಈ ಮೊದಲು ಅನೇಕ ಬಾರಿ ಅವರು ಮೈದಾನಕ್ಕೆ ತೆರಳಿ ಟೀಂ ಅನ್ನು ಬೆಂಬಲಿಸಿದ್ದಾರೆ. ಆರ್​ಸಿಬಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ ಪ್ರತಿ ಸೀಸನ್​ಅಲ್ಲೂ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್​​ ಹೇಳೋಕೆ ಮರೆಯುವುದಿಲ್ಲ. ಈ ಬಾರಿ ಸುದೀಪ್​ ಗುಡ್​ ಲಕ್​ ಹೇಳೋದು ಮಾತ್ರವಲ್ಲ ವಿಶೇಷವಾಗಿ ಆರ್​ಸಿಬಿ ಬಗ್ಗೆ ಮಾತನಾಡಿದ್ದಾರೆ. ಇಂದು (ಏ.9) ಸಂಜೆ ಆರು ಗಂಟೆಗೆ ಸುದೀಪ್​ ಸ್ಟಾರ್​ ಸ್ಪೋರ್ಟ್ಸ್​ ಕನ್ನಡದಲ್ಲಿ ಪ್ರಸಾರವಾಗುವ ByjusCricketLive ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುದೀಪ್​ ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಸ್ಟಾರ್​​ ಸ್ಪೋರ್ಟ್ಸ್​​ ಕನ್ನಡ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಸುದೀಪ್​ ಮಾತನಾಡಿದ್ದಾರೆ. ಆರ್​ಸಿಬಿ ಗೆಲ್ಲಲಿ, ಸೋಲಲಿ ನಾವು ಆ ತಂಡದ ಜತೆಗಿದ್ದೇವೆ. ಯಾವುಗಲೂ ಇರುತ್ತೇವೆ. ಆರ್​ಸಿಬಿಗೆ ಇದಕ್ಕಿಂತ ಪಾಸಿಟಿವ್​ ವಿಚಾರ ಮತ್ತೊಂದು ಬೇಕಿಲ್ಲ. ಆರ್​ಸಿಬಿ ಸೋತರೂ ನಮ್​ ಟೀಮ್​, ಗೆದ್ದರೂ ನಮ್ಮ ಟೀಮ್​. ಈಗ ಶರ್ಟ್​ಗೆ ಕಾಲರ್​ ಇಲ್ಲ. ನಮ್ಮ ಟೀಂ ಗೆದ್ದರೆ, ಕಾಲರ್​ ಹಾಕಿಕೊಂಡು ಓಡಾಡುತ್ತೇವೆ ಎಂದಿದ್ದಾರೆ ಸುದೀಪ್​.

ಇತ್ತೀಚೆಗೆ ಬಿಗ್​ ಬಾಸ್​ ವೇದಿಕೆ ಮೇಲೆ ಸುದೀಪ್​ ಆರ್​ಸಿಬಿಗೆ ಶುಭಕೋರಿದ್ದರು. ಬಿಗ್​ ಬಾಸ್​ ಮನೆಯ ಕಡೆಯಿಂದ, ಬಿಗ್​ ಬಾಸ್​ ಸ್ಪರ್ಧಿಗಳ ಪರವಾಗಿ, ಬಿಗ್​ ಬಾಸ್​ ತಂತ್ರಜ್ಞರ ಪರವಾಗಿ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್ ಹೇಳುತ್ತೇನೆ ಎಂದಿದ್ದರು.  ಕಿಚ್ಚ ಸುದೀಪ್​ ಕ್ರಿಕೆಟ್ ಪ್ರಿಯರು. ಸ್ಯಾಂಡಲ್​ವುಡ್​ನಲ್ಲಿ ಕ್ರಿಕೆಟ್​ ಮ್ಯಾಚ್​ ನಡೆಸೋಕೆ ಇವರದೇ ನೇತೃತ್ವ. ಹೀಗಾಗಿ, ಇವರಿಗೆ ಕ್ರಿಕೆಟ್​ ಮೇಲೆ ಹೆಚ್ಚು ಆಸಕ್ತಿ ಇದೆ.

ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ. ಈಗಾಗಲೇ ಅಭಿಮಾನಿಗಳು ಮ್ಯಾಚ್​ ನೋಡೋಕೆ ಕುತೂಹಲದಿಂದ ಕಾದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ವೇದಿಕೆ ಮೇಲೆ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಅಂದ್ರು ಸುದೀಪ್​!

Published On - 3:50 pm, Fri, 9 April 21

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್