AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Kichcha Sudeep: ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ.

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!
ವಿರಾಟ್​ ಕೊಹ್ಲಿ-ಸುದೀಪ್​
Follow us
ರಾಜೇಶ್ ದುಗ್ಗುಮನೆ
|

Updated on:Apr 09, 2021 | 3:51 PM

ಐಪಿಎಲ್​​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕಿಚ್ಚ ಸುದೀಪ್​ ಅವರ ಫೇವರಿಟ್​ ತಂಡ. ಈ ಮೊದಲು ಅನೇಕ ಬಾರಿ ಅವರು ಮೈದಾನಕ್ಕೆ ತೆರಳಿ ಟೀಂ ಅನ್ನು ಬೆಂಬಲಿಸಿದ್ದಾರೆ. ಆರ್​ಸಿಬಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ ಪ್ರತಿ ಸೀಸನ್​ಅಲ್ಲೂ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್​​ ಹೇಳೋಕೆ ಮರೆಯುವುದಿಲ್ಲ. ಈ ಬಾರಿ ಸುದೀಪ್​ ಗುಡ್​ ಲಕ್​ ಹೇಳೋದು ಮಾತ್ರವಲ್ಲ ವಿಶೇಷವಾಗಿ ಆರ್​ಸಿಬಿ ಬಗ್ಗೆ ಮಾತನಾಡಿದ್ದಾರೆ. ಇಂದು (ಏ.9) ಸಂಜೆ ಆರು ಗಂಟೆಗೆ ಸುದೀಪ್​ ಸ್ಟಾರ್​ ಸ್ಪೋರ್ಟ್ಸ್​ ಕನ್ನಡದಲ್ಲಿ ಪ್ರಸಾರವಾಗುವ ByjusCricketLive ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುದೀಪ್​ ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಸ್ಟಾರ್​​ ಸ್ಪೋರ್ಟ್ಸ್​​ ಕನ್ನಡ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಸುದೀಪ್​ ಮಾತನಾಡಿದ್ದಾರೆ. ಆರ್​ಸಿಬಿ ಗೆಲ್ಲಲಿ, ಸೋಲಲಿ ನಾವು ಆ ತಂಡದ ಜತೆಗಿದ್ದೇವೆ. ಯಾವುಗಲೂ ಇರುತ್ತೇವೆ. ಆರ್​ಸಿಬಿಗೆ ಇದಕ್ಕಿಂತ ಪಾಸಿಟಿವ್​ ವಿಚಾರ ಮತ್ತೊಂದು ಬೇಕಿಲ್ಲ. ಆರ್​ಸಿಬಿ ಸೋತರೂ ನಮ್​ ಟೀಮ್​, ಗೆದ್ದರೂ ನಮ್ಮ ಟೀಮ್​. ಈಗ ಶರ್ಟ್​ಗೆ ಕಾಲರ್​ ಇಲ್ಲ. ನಮ್ಮ ಟೀಂ ಗೆದ್ದರೆ, ಕಾಲರ್​ ಹಾಕಿಕೊಂಡು ಓಡಾಡುತ್ತೇವೆ ಎಂದಿದ್ದಾರೆ ಸುದೀಪ್​.

ಇತ್ತೀಚೆಗೆ ಬಿಗ್​ ಬಾಸ್​ ವೇದಿಕೆ ಮೇಲೆ ಸುದೀಪ್​ ಆರ್​ಸಿಬಿಗೆ ಶುಭಕೋರಿದ್ದರು. ಬಿಗ್​ ಬಾಸ್​ ಮನೆಯ ಕಡೆಯಿಂದ, ಬಿಗ್​ ಬಾಸ್​ ಸ್ಪರ್ಧಿಗಳ ಪರವಾಗಿ, ಬಿಗ್​ ಬಾಸ್​ ತಂತ್ರಜ್ಞರ ಪರವಾಗಿ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್ ಹೇಳುತ್ತೇನೆ ಎಂದಿದ್ದರು.  ಕಿಚ್ಚ ಸುದೀಪ್​ ಕ್ರಿಕೆಟ್ ಪ್ರಿಯರು. ಸ್ಯಾಂಡಲ್​ವುಡ್​ನಲ್ಲಿ ಕ್ರಿಕೆಟ್​ ಮ್ಯಾಚ್​ ನಡೆಸೋಕೆ ಇವರದೇ ನೇತೃತ್ವ. ಹೀಗಾಗಿ, ಇವರಿಗೆ ಕ್ರಿಕೆಟ್​ ಮೇಲೆ ಹೆಚ್ಚು ಆಸಕ್ತಿ ಇದೆ.

ಐಪಿಎಲ್​ 14ನೇ ಸೀಸನ್​ನ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದೆ. ಹಾಲಿ ಚಾಂಪಿಯನ್​ ಮುಂಬೈ ತಂಡವನ್ನು ಆರ್​ಸಿಬಿ ಎದುರಿಸಲಿದೆ. ಈಗಾಗಲೇ ಅಭಿಮಾನಿಗಳು ಮ್ಯಾಚ್​ ನೋಡೋಕೆ ಕುತೂಹಲದಿಂದ ಕಾದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ವೇದಿಕೆ ಮೇಲೆ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಅಂದ್ರು ಸುದೀಪ್​!

Published On - 3:50 pm, Fri, 9 April 21

ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ