AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸು ಫ್ರಮ್ ಸೋ’ ನಿರ್ದೇಶಕರ ಜೊತೆ ಸುದೀಪ್ ಸಿನಿಮಾ ಮಾತುಕತೆ ನಡೆದಿದೆಯಾ?

ಸಣ್ಣ ಬಜೆಟ್​​​ನಲ್ಲಿ ಸಿದ್ಧವಾದ ‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಗಿದ್ದು ಗೊತ್ತೇ ಇದೆ. ಈ ಸಿನಿಮಾದ ಸಕ್ಸಸ್ ಬಗ್ಗೆ ಈಗ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಮಾತನಾಡಿದ್ದಾರೆ. ನಿರ್ದೇಶಕ ಜೆ.ಪಿ. ತುಮಿನಾಡು ಅವರನ್ನು ತಾವು ಭೇಟಿ ಆಗಿದ್ದು ಯಾಕೆ ಎಂಬುದನ್ನು ಅವರು ತಿಳಿಸಿದ್ದಾರೆ.

‘ಸು ಫ್ರಮ್ ಸೋ’ ನಿರ್ದೇಶಕರ ಜೊತೆ ಸುದೀಪ್ ಸಿನಿಮಾ ಮಾತುಕತೆ ನಡೆದಿದೆಯಾ?
Jp Thuminad, Kichcha Sudeep
ಮದನ್​ ಕುಮಾರ್​
|

Updated on: Sep 01, 2025 | 4:35 PM

Share

ಜೆ.ಪಿ. ತುಮಿನಾಡು ನಿರ್ದೇಶನದ ‘ಸು ಫ್ರಮ್ ಸೋ’ (Su From So) ಸಿನಿಮಾ ಸೂಪರ್ ಹಿಟ್ ಆಗಿದೆ. ಆ ಚಿತ್ರತಂಡದವರನ್ನು ಇತ್ತೀಚೆಗೆ ಕಿಚ್ಚ ಸುದೀಪ್ (Kichcha Sudeep) ಅವರು ಭೇಟಿ ಆದರು. ಆ ಬಗ್ಗೆ ಇಂದು (ಸೆಪ್ಟೆಂಬರ್ 1) ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರು ಮಾತನಾಡಿದರು. ‘ಸು ಫ್ರಮ್ ಸೋ’ ರೀತಿಯ ಸಿನಿಮಾಗಳ ಗೆಲುವು ಚಿತ್ರರಂಗಕ್ಕೆ ತುಂಬ ಮುಖ್ಯ ಎಂದು ಅವರು ಹೇಳಿದರು. ನಿರ್ದೇಶಕ ಜೆ.ಪಿ. ತುಮಿನಾಡು (JP Thuminad) ಜೊತೆ ನಡೆದ ಮಾತುಕತೆ ಏನು? ಒಟ್ಟಿಗೆ ಸಿನಿಮಾ ಮಾಡುವ ಉದ್ದೇಶ ಇದೆಯಾ ಎಂಬ ಪ್ರಶ್ನೆಗೂ ಸುದೀಪ್ ಅವರು ಉತ್ತರ ನೀಡಿದರು.

‘ಸು ಫ್ರಮ್ ಸೋ ಸಿನಿಮಾದ ಗೆಲುವು ತುಂಬ ಬ್ಯೂಟಿಫುಲ್ ಆಗಿದೆ. ನಮ್ಮ ಚಿತ್ರರಂಗದಲ್ಲಿ ಈ ರೀತಿ ನಡೆಯುತ್ತಾ ಇರಬೇಕು. ಆವಾಗಲೇ ಒಳ್ಳೆಯದಾಗೋದು. ಇಲ್ಲಿ ಕಲಾವಿದರಿಲ್ಲ, ಸಿನಿಮಾ ಮಾಡೋಕೆ ಬರಲ್ಲ, ಸಿನಿಮಾ ಓಡುತ್ತಿಲ್ಲ ಅಂತ ಹೇಳುವವರಿಗೆಲ್ಲ ಒಂದು ಪಾಠ ಇದು. ಚಿತ್ರರಂಗದಲ್ಲಿ ಕಲಾವಿದರು ಇಲ್ಲವಾ? ಈಗ ಯಾರಿದ್ದಾರೆ ಎಂದು ಕೆಲವರು ಸಂದರ್ಶನದಲ್ಲಿ ಹೇಳುತ್ತಾರೆ. ಏನು ಮಾಡುತ್ತಿದ್ದೀರಿ? ರಿಷಬ್ ಶೆಟ್ಟಿ, ಗಣೇಶ್, ಧ್ರುವ ಸರ್ಜಾ, ದುನಿಯಾ ವಿಜಿ, ಶಿವಣ್ಣ, ಉಪೇಂದ್ರ, ರಕ್ಷಿತ್ ಶೆಟ್ಟಿ ಇವರೆಲ್ಲ ಹೀರೋಗಳಲ್ಲವಾ?’ ಎಂದಿದ್ದಾರೆ ಸುದೀಪ್.

‘ಈಗ ಸು ಫ್ರಮ್ ಸೋ ಸಿನಿಮಾದಲ್ಲಿ ಇರುವವರು ಯಾರು ಎಂಬುದೇ ಗೊತ್ತಿಲ್ಲ. ಇಷ್ಟೆಲ್ಲ ಕಲಾವಿದರು ಇರುವಂತಹ ಚಿತ್ರರಂಗ ನಮ್ಮದು. ಹಾಗಾಗಿ ಮಾತಿನ ಬಗ್ಗೆ ಕೆಲವರು ಹುಷಾರಾಗಿ ಇರಬೇಕು. ಮಾತಾಡೋಕೆ ಬರುತ್ತೆ ಅಂತ ಯಾರಿಗೋ ನೋವು ಮಾಡೋದಲ್ಲ. ಯಶ್ ಎಂತೆಂಥ ಸಿನಿಮಾ ಮಾಡುತ್ತಿದ್ದಾರೆ. ಹೀಗಿರುವಾಗ ಚಿತ್ರರಂಗ ಮುಚ್ಚಿಹೋಗುತ್ತೆ ಎನ್ನುವ ಸಮಯದಲ್ಲಿ ಸು ಫ್ರಮ್ ಸೋ ರೀತಿಯ ಸಿನಿಮಾ ಸಕ್ಸಸ್ ಆದಾಗ ಹೊಸಬರಿಗೆ ಧೈರ್ಯ ಬಂದಿದೆ. ಈ ರೀತಿಯ ಭರವಸೆ ನಮಗೆ ಬೇಕು’ ಎಂದು ಸುದೀಪ್ ಅವರು ಹೇಳಿದ್ದಾರೆ.

‘ಸು ಫ್ರಮ್ ಸೋ ಸಿನಿಮಾದ ನಿರ್ದೇಶಕರು ಹಲವು ವರ್ಷಗಳ ಹಿಂದೆಯೇ ನನ್ನನ್ನು ಭೇಟಿ ಆಗಿದ್ದರು. ಒಂದು ತುಳು ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಕರೆದಿದ್ದರು. ನಾನು ಹೋಗಿದ್ದೆ, ತುಂಬ ಜನ ಇದ್ದರು. ಅದನ್ನು ಅವರು ಈಗ ನೆನಪಿಸಿದರು. ಹೀಗೆ ನೀವು ಯಾರಿಗಾದರೂ ಒಳ್ಳೆಯದು ಮಾಡಿದರೆ ಅದು ವಾಪಸ್ ಬರುತ್ತದೆ. ಈಗ ಅವರು ತುಂಬಾ ಒಳ್ಳೆಯ ಸಿನಿಮಾ ಮಾಡಿದ್ದಾರೆ.’ ಎಂದರು ಸುದೀಪ್.

ಇದನ್ನೂ ಓದಿ: ರಾಜಕೀಯದ ಎಂಟ್ರಿ ಪ್ಲ್ಯಾನ್ ಬಗ್ಗೆ ಮೌನ ಮುರಿದ ನಟ ಕಿಚ್ಚ ಸುದೀಪ್

‘ಈಗ ಜೆಪಿ ತುಮಿನಾಡು ಅವರ ಸಿನಿಮಾ ಹಿಟ್ ಆಗಿದೆ ಎಂಬ ಕಾರಣಕ್ಕೆ ಅವರನ್ನು ಕರೆದು ನನಗೆ ಒಂದು ಸಿನಿಮಾ ಮಾಡಿ ಎಂದು ಹೇಳಿದರೆ ಅದು ತುಂಬ ಸ್ವಾರ್ಥ ಆಗುತ್ತದೆ. ಸಿನಿಮಾ ಮಾಡೋಕೆ ನಾನು ಖಂಡಿತಾ ಅವರನ್ನು ಕರೆದಿಲ್ಲ. ಅವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಬೇಕಿತ್ತು. ಜೊತೆಯಾಗಿ ಕುಳಿತು ಮಾತನಾಡಿದೆವು. ಸಿನಿಮಾ ಮಾಡುವ ಬಗ್ಗೆ ಏನೂ ಮಾತು ಬರಲಿಲ್ಲ. ಕೇವಲ ಯಶಸ್ವಿ ನಿರ್ದೇಶಕರ ಕಥೆ ಕೇಳುತ್ತೇನೆ ಎಂದರೆ ತಪ್ಪಾಗುತ್ತದೆ. ಮ್ಯಾಕ್ಸ್ ಕಥೆ ತೆಗೆದುಕೊಂಡು ಬಂದಾಗ ವಿಜಯ್ ಯಾರು ಎಂಬುದೇ ಗೊತ್ತಿರಲಿಲ್ಲ. ನಾಳೆ ಜೆ.ಪಿ. ತುಮಿನಾಡು ಅವರು ಒಂದು ಕಥೆ ತೆಗೆದುಕೊಂಡು ಬಂದರೆ ನಾನು ಖಂಡಿತಾ ಕೇಳುತ್ತೇನೆ’ ಎಂದು ಸುದೀಪ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ