AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?

Vikrant Rona: ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ.

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 10, 2021 | 5:06 PM

Share

ದುಬೈಗೆ ತೆರಳಿ ಬುರ್ಜ್​ ಖಲೀಫಾ ಕಟ್ಟದ ಮೇಲೆ ವಿಕ್ರಾಂತ್ ರೋಣ ಸಿನಿಮಾ ಹೆಸರನ್ನು ಪ್ರದರ್ಶಿಸುವ ಮೂಲಕ ಕಿಚ್ಚ ಸುದೀಪ್​ ಆ್ಯಂಡ್​ ಟೀಂ ದೊಡ್ಡದಾಗಿ ಸಂಭ್ರಮಿಸಿತ್ತು. ಈಗ ವಿಕ್ರಾಂತ್​ ರೋಣ ಕಡೆಯಿಂದ ಸರ್​ಪ್ರೈಸ್​ ಸಿಗುತ್ತಿದೆ. ಅಂದಹಾಗೆ, ಈ ಸರ್​ಪ್ರೈಸ್​ಗಾಗಿ ನೀವು ಏಪ್ರಿಲ್​ 15ರವರೆಗೆ ಕಾಯಲೇಬೇಕು. ಸರ್​ಪ್ರೈಸ್​ ವಿಚಾರದ ಬಗ್ಗೆ ಕಿಚ್ಚ ಸುದೀಪ್​ ಇಂದು (ಏಪ್ರಿಲ್​ 10) ಟ್ವೀಟ್​ ಮಾಡಿದ್ದಾರೆ. ಏಪ್ರಿಲ್​ 15ರಂದು ಬೆಳಗ್ಗೆ 11:10ಕ್ಕೆ ಸರ್​ಪ್ರೈಸ್​ ಕಾದಿದೆ ಎಂದು ಟ್ವೀಟ್​ ಮಾಡಿದ್ದಾರೆ. ಸದ್ಯ ಈ ಟ್ವೀಟ್​ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಅಷ್ಟೇ ಅಲ್ಲ, ಈ ಸರ್​ಪ್ರೈಸ್​ ಏನು ಎನ್ನುವ ಕುತೂಹಲ ಕೂಡ ಅಭಿಮಾನಿಗಳಲ್ಲಿ ಕಾಡುತ್ತಿದೆ.

ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ. ಈ ಮೊದಲು ಸಿನಿಮಾಗೆ ಪ್ಯಾಂಥಮ್​ ಎಂದು ಹೆಸರಿಡಲಾಗಿತ್ತು. ನಂತರ ಈ ಹೆಸರನ್ನು ವಿಕ್ರಾಂತ್​ ರೋಣ ಎಂದು ಮರು ನಾಮಕರಣ ಮಾಡಲಾಗಿತ್ತು. ಅಷ್ಟೇ ಅಲ್ಲ, ಈ ಟೈಟಲ್​ ಅನ್ನು ಬುರ್ಜ್​ ಖಲೀಫಾ ಮೇಲೆ ಅನಾವರಣ ಮಾಡಲಾಗಿತ್ತು ಅನ್ನೊದು ವಿಶೇಷ.

ಅಜನೀಶ್​ ಲೋಕನಾಥ್​ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ನಿರೂಪ್​ ಭಂಡಾರಿ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಸದ್ಯ, ಈಗಾಗಲೇ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಹೀಗಾಗಿ, ಏಪ್ರಿಲ್​ 15ರಂದು ಸಿಗೋ ವಿಶೇಷ ಸರ್​ಪ್ರೈಸ್​ ಯಾವುದು ಎನ್ನುವುದರ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Published On - 4:50 pm, Sat, 10 April 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ