AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?

Vikrant Rona: ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ.

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 10, 2021 | 5:06 PM

Share

ದುಬೈಗೆ ತೆರಳಿ ಬುರ್ಜ್​ ಖಲೀಫಾ ಕಟ್ಟದ ಮೇಲೆ ವಿಕ್ರಾಂತ್ ರೋಣ ಸಿನಿಮಾ ಹೆಸರನ್ನು ಪ್ರದರ್ಶಿಸುವ ಮೂಲಕ ಕಿಚ್ಚ ಸುದೀಪ್​ ಆ್ಯಂಡ್​ ಟೀಂ ದೊಡ್ಡದಾಗಿ ಸಂಭ್ರಮಿಸಿತ್ತು. ಈಗ ವಿಕ್ರಾಂತ್​ ರೋಣ ಕಡೆಯಿಂದ ಸರ್​ಪ್ರೈಸ್​ ಸಿಗುತ್ತಿದೆ. ಅಂದಹಾಗೆ, ಈ ಸರ್​ಪ್ರೈಸ್​ಗಾಗಿ ನೀವು ಏಪ್ರಿಲ್​ 15ರವರೆಗೆ ಕಾಯಲೇಬೇಕು. ಸರ್​ಪ್ರೈಸ್​ ವಿಚಾರದ ಬಗ್ಗೆ ಕಿಚ್ಚ ಸುದೀಪ್​ ಇಂದು (ಏಪ್ರಿಲ್​ 10) ಟ್ವೀಟ್​ ಮಾಡಿದ್ದಾರೆ. ಏಪ್ರಿಲ್​ 15ರಂದು ಬೆಳಗ್ಗೆ 11:10ಕ್ಕೆ ಸರ್​ಪ್ರೈಸ್​ ಕಾದಿದೆ ಎಂದು ಟ್ವೀಟ್​ ಮಾಡಿದ್ದಾರೆ. ಸದ್ಯ ಈ ಟ್ವೀಟ್​ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಅಷ್ಟೇ ಅಲ್ಲ, ಈ ಸರ್​ಪ್ರೈಸ್​ ಏನು ಎನ್ನುವ ಕುತೂಹಲ ಕೂಡ ಅಭಿಮಾನಿಗಳಲ್ಲಿ ಕಾಡುತ್ತಿದೆ.

ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ. ಈ ಮೊದಲು ಸಿನಿಮಾಗೆ ಪ್ಯಾಂಥಮ್​ ಎಂದು ಹೆಸರಿಡಲಾಗಿತ್ತು. ನಂತರ ಈ ಹೆಸರನ್ನು ವಿಕ್ರಾಂತ್​ ರೋಣ ಎಂದು ಮರು ನಾಮಕರಣ ಮಾಡಲಾಗಿತ್ತು. ಅಷ್ಟೇ ಅಲ್ಲ, ಈ ಟೈಟಲ್​ ಅನ್ನು ಬುರ್ಜ್​ ಖಲೀಫಾ ಮೇಲೆ ಅನಾವರಣ ಮಾಡಲಾಗಿತ್ತು ಅನ್ನೊದು ವಿಶೇಷ.

ಅಜನೀಶ್​ ಲೋಕನಾಥ್​ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ನಿರೂಪ್​ ಭಂಡಾರಿ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಸದ್ಯ, ಈಗಾಗಲೇ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಹೀಗಾಗಿ, ಏಪ್ರಿಲ್​ 15ರಂದು ಸಿಗೋ ವಿಶೇಷ ಸರ್​ಪ್ರೈಸ್​ ಯಾವುದು ಎನ್ನುವುದರ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Published On - 4:50 pm, Sat, 10 April 21

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್