AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?

Vikrant Rona: ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ.

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 10, 2021 | 5:06 PM

Share

ದುಬೈಗೆ ತೆರಳಿ ಬುರ್ಜ್​ ಖಲೀಫಾ ಕಟ್ಟದ ಮೇಲೆ ವಿಕ್ರಾಂತ್ ರೋಣ ಸಿನಿಮಾ ಹೆಸರನ್ನು ಪ್ರದರ್ಶಿಸುವ ಮೂಲಕ ಕಿಚ್ಚ ಸುದೀಪ್​ ಆ್ಯಂಡ್​ ಟೀಂ ದೊಡ್ಡದಾಗಿ ಸಂಭ್ರಮಿಸಿತ್ತು. ಈಗ ವಿಕ್ರಾಂತ್​ ರೋಣ ಕಡೆಯಿಂದ ಸರ್​ಪ್ರೈಸ್​ ಸಿಗುತ್ತಿದೆ. ಅಂದಹಾಗೆ, ಈ ಸರ್​ಪ್ರೈಸ್​ಗಾಗಿ ನೀವು ಏಪ್ರಿಲ್​ 15ರವರೆಗೆ ಕಾಯಲೇಬೇಕು. ಸರ್​ಪ್ರೈಸ್​ ವಿಚಾರದ ಬಗ್ಗೆ ಕಿಚ್ಚ ಸುದೀಪ್​ ಇಂದು (ಏಪ್ರಿಲ್​ 10) ಟ್ವೀಟ್​ ಮಾಡಿದ್ದಾರೆ. ಏಪ್ರಿಲ್​ 15ರಂದು ಬೆಳಗ್ಗೆ 11:10ಕ್ಕೆ ಸರ್​ಪ್ರೈಸ್​ ಕಾದಿದೆ ಎಂದು ಟ್ವೀಟ್​ ಮಾಡಿದ್ದಾರೆ. ಸದ್ಯ ಈ ಟ್ವೀಟ್​ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಅಷ್ಟೇ ಅಲ್ಲ, ಈ ಸರ್​ಪ್ರೈಸ್​ ಏನು ಎನ್ನುವ ಕುತೂಹಲ ಕೂಡ ಅಭಿಮಾನಿಗಳಲ್ಲಿ ಕಾಡುತ್ತಿದೆ.

ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ. ಈ ಮೊದಲು ಸಿನಿಮಾಗೆ ಪ್ಯಾಂಥಮ್​ ಎಂದು ಹೆಸರಿಡಲಾಗಿತ್ತು. ನಂತರ ಈ ಹೆಸರನ್ನು ವಿಕ್ರಾಂತ್​ ರೋಣ ಎಂದು ಮರು ನಾಮಕರಣ ಮಾಡಲಾಗಿತ್ತು. ಅಷ್ಟೇ ಅಲ್ಲ, ಈ ಟೈಟಲ್​ ಅನ್ನು ಬುರ್ಜ್​ ಖಲೀಫಾ ಮೇಲೆ ಅನಾವರಣ ಮಾಡಲಾಗಿತ್ತು ಅನ್ನೊದು ವಿಶೇಷ.

ಅಜನೀಶ್​ ಲೋಕನಾಥ್​ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ನಿರೂಪ್​ ಭಂಡಾರಿ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಸದ್ಯ, ಈಗಾಗಲೇ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಹೀಗಾಗಿ, ಏಪ್ರಿಲ್​ 15ರಂದು ಸಿಗೋ ವಿಶೇಷ ಸರ್​ಪ್ರೈಸ್​ ಯಾವುದು ಎನ್ನುವುದರ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Published On - 4:50 pm, Sat, 10 April 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್