AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?

Vikrant Rona: ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ.

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 10, 2021 | 5:06 PM

Share

ದುಬೈಗೆ ತೆರಳಿ ಬುರ್ಜ್​ ಖಲೀಫಾ ಕಟ್ಟದ ಮೇಲೆ ವಿಕ್ರಾಂತ್ ರೋಣ ಸಿನಿಮಾ ಹೆಸರನ್ನು ಪ್ರದರ್ಶಿಸುವ ಮೂಲಕ ಕಿಚ್ಚ ಸುದೀಪ್​ ಆ್ಯಂಡ್​ ಟೀಂ ದೊಡ್ಡದಾಗಿ ಸಂಭ್ರಮಿಸಿತ್ತು. ಈಗ ವಿಕ್ರಾಂತ್​ ರೋಣ ಕಡೆಯಿಂದ ಸರ್​ಪ್ರೈಸ್​ ಸಿಗುತ್ತಿದೆ. ಅಂದಹಾಗೆ, ಈ ಸರ್​ಪ್ರೈಸ್​ಗಾಗಿ ನೀವು ಏಪ್ರಿಲ್​ 15ರವರೆಗೆ ಕಾಯಲೇಬೇಕು. ಸರ್​ಪ್ರೈಸ್​ ವಿಚಾರದ ಬಗ್ಗೆ ಕಿಚ್ಚ ಸುದೀಪ್​ ಇಂದು (ಏಪ್ರಿಲ್​ 10) ಟ್ವೀಟ್​ ಮಾಡಿದ್ದಾರೆ. ಏಪ್ರಿಲ್​ 15ರಂದು ಬೆಳಗ್ಗೆ 11:10ಕ್ಕೆ ಸರ್​ಪ್ರೈಸ್​ ಕಾದಿದೆ ಎಂದು ಟ್ವೀಟ್​ ಮಾಡಿದ್ದಾರೆ. ಸದ್ಯ ಈ ಟ್ವೀಟ್​ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಅಷ್ಟೇ ಅಲ್ಲ, ಈ ಸರ್​ಪ್ರೈಸ್​ ಏನು ಎನ್ನುವ ಕುತೂಹಲ ಕೂಡ ಅಭಿಮಾನಿಗಳಲ್ಲಿ ಕಾಡುತ್ತಿದೆ.

ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ. ಈ ಮೊದಲು ಸಿನಿಮಾಗೆ ಪ್ಯಾಂಥಮ್​ ಎಂದು ಹೆಸರಿಡಲಾಗಿತ್ತು. ನಂತರ ಈ ಹೆಸರನ್ನು ವಿಕ್ರಾಂತ್​ ರೋಣ ಎಂದು ಮರು ನಾಮಕರಣ ಮಾಡಲಾಗಿತ್ತು. ಅಷ್ಟೇ ಅಲ್ಲ, ಈ ಟೈಟಲ್​ ಅನ್ನು ಬುರ್ಜ್​ ಖಲೀಫಾ ಮೇಲೆ ಅನಾವರಣ ಮಾಡಲಾಗಿತ್ತು ಅನ್ನೊದು ವಿಶೇಷ.

ಅಜನೀಶ್​ ಲೋಕನಾಥ್​ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ನಿರೂಪ್​ ಭಂಡಾರಿ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಸದ್ಯ, ಈಗಾಗಲೇ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಹೀಗಾಗಿ, ಏಪ್ರಿಲ್​ 15ರಂದು ಸಿಗೋ ವಿಶೇಷ ಸರ್​ಪ್ರೈಸ್​ ಯಾವುದು ಎನ್ನುವುದರ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Published On - 4:50 pm, Sat, 10 April 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ