Kichcha Sudeep: ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಸುದೀಪ್​? ರಾಜಕೀಯದಲ್ಲಿ ಧೂಳೆಬ್ಬಿಸ್ತಾರಾ ಕಿಚ್ಚ?

ವಿಧಾನಸಭಾ ಚುನಾವಣೆಯ ಕಾವು ಜೋರಾದಂತೆ ಹಲವು ಸೆಲೆಬ್ರಿಟಿಗಳು ರಾಜಕೀಯ ಪಕ್ಷದ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲವರು ಚುನಾವಣೆಗೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ (Kichcha Sudeep) ಅವರು ಚಿತ್ರರಂಗಕ್ಕೆ ಕಾಲಿಟ್ಟು ಎರಡೂವರೆ ದಶಕಗಳೇ ಕಳೆದಿವೆ. ಅವರ ವೃತ್ತಿ ಜೀವನದಲ್ಲಿ ಹಲವು ಸೂಪರ್​ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಪರಭಾಷೆಯಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಸಿನಿಮಾ ನಿರ್ದೇಶನ ಮಾಡಿ ಮೆಚ್ಚುಗೆ ಪಡೆದಿದ್ದಾರೆ. ಹಲವು ರಾಜಕಾರಣಿಗಳ ಜೊತೆ ಕಿಚ್ಚನಿಗೆ ಆಪ್ತತೆ ಇದೆ. ಇಂದು (ಏಪ್ರಿಲ್ 5) ಸಿಎಂ ಬಸವರಾಜ್​ ಬೊಮ್ಮಾಯಿ ಸುದ್ದಿಗೋಷ್ಠಿ ಕರೆದಿದ್ದು, ಅದರಲ್ಲಿ ಕಿಚ್ಚ ಸುದೀಪ್ ಅವರು ಭಾಗಿ ಆಗಲಿದ್ದಾರೆ. ಈ ವೇಳೆ ಅವರು ತಮ್ಮ ರಾಜಕೀಯ ನಿಲುವು ಏನು ಎಂಬುದನ್ನು ತಿಳಿಸಲಿದ್ದಾರೆ. ಸುದೀಪ್ ಬಿಜೆಪಿ  ಸೇರುತ್ತಾರಾ ಅಥವಾ ಪಕ್ಷದ ಪರ ಪ್ರಚಾರ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ವಿಧಾನಸಭಾ ಚುನಾವಣೆಯ ಕಾವು ಜೋರಾದಂತೆ ಹಲವು ಸೆಲೆಬ್ರಿಟಿಗಳು ರಾಜಕೀಯ ಪಕ್ಷದ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲವರು ಚುನಾವಣೆಗೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಅದೇ ರೀತಿ ಸುದೀಪ್ ಅವರು ರಾಜಕೀಯ ಸೇರುತ್ತಾರೆ ಎನ್ನುವ ಮಾತು ಕೇಳಿ ಬಂತು. ಇದಕ್ಕೆ ಸಾಕ್ಷ್ಯ ಎಂಬಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಸುದೀಪ್ ಕಾಣಿಸಿಕೊಂಡ ಫೋಟೋ ವೈರಲ್ ಆಯಿತು. ಈ ಬಗ್ಗೆ ಸುದೀಪ್ ಸ್ಪಷ್ಟನೆ ನೀಡಿದ್ದರು. ರಾಜಕೀಯ ಸೇರ್ಪಡೆ ವಿಚಾರವನ್ನು ಅವರು ತಳ್ಳಿ ಹಾಕಿದ್ದರು. ಈಗ ಬಿಜೆಪಿ ಪಾಳಯದ ಜೊತೆ ಸುದೀಪ್ ಗುರುತಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಖಾಸಗಿ ಹೋಟೆಲ್​ನಲ್ಲಿ ಈ ಪ್ರೆಸ್​ಮೀಟ್​ ನಡೆಯಲಿದೆ. ಸುದ್ದಿಗೋಷ್ಠಿ ವೇಳೆ ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಆದರೆ, ಅವರು ಪಕ್ಷ ಸೇರುತ್ತಾರೆ ಎಂಬುದು ಬಹುತೇಕ ಅನುಮಾನವೇ.

ಇದನ್ನೂ ಓದಿ: Kichcha Sudeep: ಬಿಜೆಪಿ ಜೊತೆ ಕೈ ಜೋಡಿಸಲು ಸಜ್ಜಾದ ಸುದೀಪ್​? ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ದೊಡ್ಡ ಸುದ್ದಿ 

ಸುದೀಪ್ ಅವರು ಬಿಜೆಪಿ ಪ್ರಚಾರ ರಾಯಭಾರಿ ಆದರೆ ಪಕ್ಷಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ. ಬಿಜೆಪಿ ಪಕ್ಷದ ಪರ ಅವರ ಅಭಿಮಾನಿಗಳು ಪ್ರಚಾರ ಮಾಡಲಿದ್ದಾರೆ. ಸುದೀಪ್​ಗೆ ದೊಡ್ಡ ಅಭಿಮಾನಿ ವರ್ಗ ಇದೆ. ಅವರು ಪಕ್ಷದ ಪರ ಪ್ರಚಾರ ಮಾಡಿದರೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ ಅನ್ನೋದು ಬಿಜೆಪಿ ಆಲೋಚನೆ. ಈ ಕಾರಣಕ್ಕೆ ಸುದೀಪ್​ಗೆ ಆಫರ್ ನೀಡಲಾಗಿತ್ತು. ಅವರು ಕಮಲದ ಪರ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Wed, 5 April 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us