AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಅಕ್ಕನ ಮಗ ಸಂಚಿತ್ ನಟನೆಯ ಹೊಸ ಚಿತ್ರ ಅನೌನ್ಸ್​; ಕಿಚ್ಚ, ಕೆಆರ್​ಜಿ ನಿರ್ಮಾಣ

ಹೊಸ ವರ್ಷದ ಪ್ರಯುಕ್ತ ಕಿಚ್ಚ ಸುದೀಪ್​ ಕಡೆಯಿಂದ ಒಂದು ಗುಡ್​ ನ್ಯೂಸ್​ ಸಿಕ್ಕಿದೆ. ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಹೀರೋ ಆಗಿ ನಟಿಸಲಿರುವ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಜ.24ರಂದು ಈ ಸಿನಿಮಾದ ಟೈಟಲ್​ ಮತ್ತು ಫಸ್ಟ್​ ಲುಕ್ ಬಿಡುಗಡೆ ಆಗಲಿದೆ. ವಿವೇಕ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಸುದೀಪ್ ಅಕ್ಕನ ಮಗ ಸಂಚಿತ್ ನಟನೆಯ ಹೊಸ ಚಿತ್ರ ಅನೌನ್ಸ್​; ಕಿಚ್ಚ, ಕೆಆರ್​ಜಿ ನಿರ್ಮಾಣ
Sanchith Sanjeev, Kichcha Sudeep
ಮದನ್​ ಕುಮಾರ್​
|

Updated on:Jan 01, 2025 | 6:17 PM

Share

ಸಿಕ್ಕಾಪಟ್ಟೆ ಮಾಸ್ ಆಗಿ ಮೂಡಿಬಂದ ‘ಮ್ಯಾಕ್ಸ್’ ಸಿನಿಮಾ ಸೂಪರ್​ ಹಿಟ್ ಆಗಿದೆ. ಇದು ಸುದೀಪ್ ಅವರ ಅಭಿಮಾನಿಗಳಿಗೆ ಸಖತ್ ಖುಷಿ ನೀಡಿದೆ. ಅದೇ ಖುಷಿಯಲ್ಲಿ ಇನ್ನೊಂದು ಹೊಸ ಸುದ್ದಿಯನ್ನು ನೀಡಲಾಗಿದೆ. ಹೊಸ ವರ್ಷದ ಪ್ರಯುಕ್ತ ಕಿಚ್ಚ ಸುದೀಪ್ ಅವರ ಕಡೆಯಿಂದ ಹೊಸ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಸುದ್ದಿ ಕೇಳಿ ಸುದೀಪ್ ಫ್ಯಾನ್ಸ್​ಗೆ ತುಂಬ ಖುಷಿ ಆಗಿದೆ. ಅಂದಹಾಗೆ, ಇದು ಸುದೀಪ್ ನಟಿಸಲಿರುವ ಸಿನಿಮಾವಲ್ಲ. ಬದಲಿಗೆ, ಸುದೀಪ್ ಬಂಡವಾಳ ಹೂಡಲಿರುವ ಸಿನಿಮಾ ಎಂಬುದು ವಿಶೇಷ.

ಹೌದು, ಕಿಚ್ಚ ಸುದೀಪ್ ಅವರ ‘ಸುಪ್ರಿಯಾನ್ವಿ ಪ್ರೊಡಕ್ಷನ್’ ಹಾಗೂ ‘ಕೆಆರ್​ಜಿ ಸ್ಟುಡಿಯೋಸ್’ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಸಿನಿಮಾ ಇದು. ಈ ಸಿನಿಮಾದಲ್ಲಿ ಹೀರೋ ಆಗಿ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯಿಸಲಿದ್ದಾರೆ. ಇದು ಸಂಚಿತ್ ಅವರ ಚೊಚ್ಚಲ ಸಿನಿಮಾ ಆಗಿದ್ದು, ಸುದೀಪ್ ಅವರು ನಿರ್ಮಾಣ ಮಾಡುತ್ತಿರುವುದರಿಂದ ಜನರಲ್ಲಿ ನಿರೀಕ್ಷೆ ಜಾಸ್ತಿ ಆಗಿದೆ.

‘ಎಕ್ಕ’ ಸಿನಿಮಾದ ನಂತರ ‘ಕೆಆರ್​ಜಿ ಸ್ಟುಡಿಯೋಸ್’ ಸಂಸ್ಥೆಯು ಸಂಚಿತ್ ನಟನೆಯ ಸಿನಿಮಾವನ್ನು ಅನೌನ್ಸ್ ಮಾಡಿದೆ. ‘ಕೆಆರ್​ಜಿ’ ಕಡೆಯಿಂದ ಒಂದರ ಹಿಂದೊಂದು ಚಿತ್ರಗಳು ಮೂಡಿಬರುತ್ತಿವೆ. ಈಗ ಅನೌನ್ಸ್ ಆಗಿರುವುದು ಸುದೀಪ್ ಸಹೋದರಿಯ ಮಗನ ಸಿನಿಮಾ ಆದ್ದರಿಂದ ಸಹಜವಾಗಿಯೇ ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಡಬಲ್ ಆಗಿದೆ. ಸದ್ಯದಲ್ಲೇ ಈ ಚಿತ್ರಕ್ಕೆ ಮುಹೂರ್ತ ನಡೆಯಲಿದೆ. ಬಳಿಕ ಚಿತ್ರೀಕರಣ ಆರಂಭ ಆಗಲಿದೆ. ಪಾತ್ರವರ್ಗ ಹಾಗೂ ಇನ್ನುಳಿದ ತಂತ್ರಜ್ಞರ ಬಗ್ಗೆ ಮುಹೂರ್ತದ ದಿನ ಮಾಹಿತಿ ಹೊರಬೀಳಲಿದೆ.

ಇದನ್ನೂ ಓದಿ: ಬಾಸ್ ವಿವಾದ ಹಾಗೂ ದರ್ಶನ್ ಫ್ಯಾನ್ಸ್ ಬಗ್ಗೆ ನೇರವಾಗಿ ಮಾತನಾಡಿದ ಸುದೀಪ್

ಈ ಸಿನಿಮಾಗೆ ವಿವೇಕ ಅವರು ನಿರ್ದೇಶನ ಮಾಡಲಿದ್ದಾರೆ. ಅವರಿಗೂ ಇದು ಚೊಚ್ಚಲ ನಿರ್ದೇಶನದ ಪ್ರಯತ್ನ. ಈ ಮೊದಲು ತಮಿಳು, ತೆಲುಗು ಮತ್ತು ಹಿಂದಿ ಸಿನಿಮಾಗಳ ತೆರೆಹಿಂದೆ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ಈಗ ಅವರು ಸ್ವತಂತ್ರ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಮೈಸೂರು ಮೂಲದ ವಿವೇಕ ಅವರು ಸಂಚಿತ್​ ಸಲುವಾಗಿ ವಿಭಿನ್ನ ಕಥೆಯನ್ನು ಸಿದ್ಧ ಮಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಕ್ರೈಂ ಥ್ರಿಲ್ಲರ್​ ಕಹಾನಿ ಇರಲಿದೆ. ಈ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಏನು ಎಂಬುದು ಜನವರಿ 24ಕ್ಕೆ ತಿಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:12 pm, Wed, 1 January 25

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ