AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಇನ್ಮುಂದೆ ಸುದೀಪ್ ಬಿಗ್ ಬಾಸ್ ಹೋಸ್ಟ್ ಮಾಡಲ್ಲ ಎಂಬ ವಿಚಾರದಲ್ಲಿಲ್ಲ ಸತ್ಯ

ಸ್ಪರ್ಧಿಗಳು ಹಾದಿ ತಪ್ಪಿದಾಗ ಅವರನ್ನು ತಿದ್ದುವ ಕೆಲಸ ಮಾಡಿದ್ದಾರೆ ಕಿಚ್ಚ ಸುದೀಪ್. ಈ ವೇಳೆ ಅವರು ಬಿಗ್ ಬಾಸ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ನಾನು ಇಷ್ಟಪಟ್ಟು ನಡೆಸಿಕೊಡುತ್ತಿರುವ ಶೋ ಎಂದು ಸುದೀಪ್ ಅನೇಕ ಬಾರಿ ಹೇಳಿದ್ದಾರೆ.

Kichcha Sudeep: ಇನ್ಮುಂದೆ ಸುದೀಪ್ ಬಿಗ್ ಬಾಸ್ ಹೋಸ್ಟ್ ಮಾಡಲ್ಲ ಎಂಬ ವಿಚಾರದಲ್ಲಿಲ್ಲ ಸತ್ಯ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jan 30, 2024 | 7:35 AM

Share

ಕಿಚ್ಚ ಸುದೀಪ್ (Kichcha Sudeep) ಅವರು ಯಶಸ್ವಿಯಾಗಿ ‘ಬಿಗ್ ಬಾಸ್​’ನ 10 ಸೀಸನ್​ಗಳನ್ನು ನಡೆಸಿಕೊಟ್ಟಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ ನಿರೂಪಕರು ಬದಲಾಗಿದ್ದಾರೆ. ಆದರೆ, ಕನ್ನಡದಲ್ಲಿ ಮಾತ್ರ ಹಾಗಾಗಿಲ್ಲ. ಮೊದಲಿನಿಂದಲೂ ಸುದೀಪ್ ಅವರೇ ಕಾರ್ಯಕ್ರಮ ನಡೆಸಿಕೊಡುತ್ತಾ ಬರುತ್ತಿದ್ದಾರೆ. ಈಗ ಅವರ ಒಪ್ಪಂದ ಮುಗಿದಿದ್ದು ಮುಂದಿನ ವರ್ಷದಿಂದ ಅವರು ಶೋ ನಡೆಸಿಕೊಡಲ್ಲ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ, ಈ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ಸುದೀಪ್ ಅವರು ‘ಬಿಗ್ ಬಾಸ್’ನ ಸಖತ್ ಇಷ್ಟಪಟ್ಟು ನಡೆಸಿಕೊಡುತ್ತಾರೆ. ‘ಹಣಕ್ಕಾಗಿ ನಾನು ಈ ಶೋ ಮಾಡುತ್ತಿಲ್ಲ’ ಎಂದು ಅವರು ಈ ಮೊದಲೇ ಹೇಳಿದ್ದರು. ಸ್ಪರ್ಧಿಗಳು ಹಾದಿ ತಪ್ಪಿದಾಗ ಅವರನ್ನು ತಿದ್ದುವ ಕೆಲಸ ಮಾಡಿದ್ದಾರೆ ಸುದೀಪ್. ಈ ವೇಳೆ ಅವರು ಬಿಗ್ ಬಾಸ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ನಾನು ಇಷ್ಟಪಟ್ಟು ನಡೆಸಿಕೊಡುತ್ತಿರುವ ಶೋ ಎಂದು ಸುದೀಪ್ ಅನೇಕ ಬಾರಿ ಹೇಳಿದ್ದಿದೆ. ಹೀಗಿರುವಾಗಲೇ ಅವರು ಬಿಗ್ ಬಾಸ್ ತೊರೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಬಿಗ್ ಬಾಸ್ ಜೊತೆ ಸುದೀಪ್ ಮಾಡಿಕೊಂಡ ಒಪ್ಪಂದ ಮುಗಿದಿದೆಯಂತೆ. ಈ ಕಾರಣಕ್ಕೆ ಸುದೀಪ್ ಈ ಶೋ ತೊರೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅವರಿಗೆ ಆ ರೀತಿ ಆಲೋಚನೆ ಸದ್ಯಕ್ಕಂತೂ ಬಂದಿಲ್ಲ. ಈ ಮೊದಲು ಕೂಡ ಒಪ್ಪಂದ ಪೂರ್ಣಗೊಂಡಿತ್ತು. ಈ ಒಪ್ಪಂದವನ್ನು ನವೀಕರಿಸಿಕೊಂಡು ಅವರು ಶೋ ನಡೆಸಿಕೊಡಲು ಬಂದಿದ್ದಾರೆ. ಈ ಬಾರಿಯೂ ಅವರು ಹಾಗೆಯೇ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

ಇತ್ತೀಚೆಗೆ ಬಿಗ್ ಬಾಸ್ ಕನ್ನಡದ 10ನೇ ಸೀಸನ್ ಪೂರ್ಣಗೊಳ್ಳುವಾಗ ಸುದೀಪ್ ಒಂದು ಮಾತನ್ನು ಹೇಳಿದ್ದರು. ‘ಮುಂದೆ ಬರುವ ಹೊಸ ಸೀಸನ್​ಗಳಿಗೂ ಪ್ರೀತಿ ತೋರಿಸಿ’ ಎಂದು ಕೋರಿಕೊಂಡಿದ್ದರು. ಈ ಮಾತನ್ನು ಅನೇಕರು ನೆನಪಿಸಿಕೊಳ್ಳುತ್ತಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿ ಜೊತೆ ಸುದೀಪ್​ಗೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ವಾಹಿನಿಯವರು ಕೂಡ ಸುದೀಪ್​ ಬಗ್ಗೆ ವಿಶೇಷ ಗೌರವ ಹೊಂದಿದ್ದಾರೆ. ಒಪ್ಪಂದ ಪೂರ್ಣಗೊಂಡಿದ್ದರೆ ಅದನ್ನು ನವೀಕರಿಸಿಕೊಂಡು ಮತ್ತೆ ಬರುತ್ತಾರೆ ಎನ್ನುವ ನಂಬಿಕೆಯಲ್ಲಿ ಫ್ಯಾನ್ಸ್ ಇದ್ದಾರೆ. ಸದ್ಯ ಹರಿದಾಡುತ್ತಿರುವ ಸುದ್ದಿ ಅಂತೆ-ಕಂತೆ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:34 am, Tue, 30 January 24

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ