AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಇನ್ಮುಂದೆ ಸುದೀಪ್ ಬಿಗ್ ಬಾಸ್ ಹೋಸ್ಟ್ ಮಾಡಲ್ಲ ಎಂಬ ವಿಚಾರದಲ್ಲಿಲ್ಲ ಸತ್ಯ

ಸ್ಪರ್ಧಿಗಳು ಹಾದಿ ತಪ್ಪಿದಾಗ ಅವರನ್ನು ತಿದ್ದುವ ಕೆಲಸ ಮಾಡಿದ್ದಾರೆ ಕಿಚ್ಚ ಸುದೀಪ್. ಈ ವೇಳೆ ಅವರು ಬಿಗ್ ಬಾಸ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ನಾನು ಇಷ್ಟಪಟ್ಟು ನಡೆಸಿಕೊಡುತ್ತಿರುವ ಶೋ ಎಂದು ಸುದೀಪ್ ಅನೇಕ ಬಾರಿ ಹೇಳಿದ್ದಾರೆ.

Kichcha Sudeep: ಇನ್ಮುಂದೆ ಸುದೀಪ್ ಬಿಗ್ ಬಾಸ್ ಹೋಸ್ಟ್ ಮಾಡಲ್ಲ ಎಂಬ ವಿಚಾರದಲ್ಲಿಲ್ಲ ಸತ್ಯ
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Jan 30, 2024 | 7:35 AM

ಕಿಚ್ಚ ಸುದೀಪ್ (Kichcha Sudeep) ಅವರು ಯಶಸ್ವಿಯಾಗಿ ‘ಬಿಗ್ ಬಾಸ್​’ನ 10 ಸೀಸನ್​ಗಳನ್ನು ನಡೆಸಿಕೊಟ್ಟಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ ನಿರೂಪಕರು ಬದಲಾಗಿದ್ದಾರೆ. ಆದರೆ, ಕನ್ನಡದಲ್ಲಿ ಮಾತ್ರ ಹಾಗಾಗಿಲ್ಲ. ಮೊದಲಿನಿಂದಲೂ ಸುದೀಪ್ ಅವರೇ ಕಾರ್ಯಕ್ರಮ ನಡೆಸಿಕೊಡುತ್ತಾ ಬರುತ್ತಿದ್ದಾರೆ. ಈಗ ಅವರ ಒಪ್ಪಂದ ಮುಗಿದಿದ್ದು ಮುಂದಿನ ವರ್ಷದಿಂದ ಅವರು ಶೋ ನಡೆಸಿಕೊಡಲ್ಲ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ, ಈ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ಸುದೀಪ್ ಅವರು ‘ಬಿಗ್ ಬಾಸ್’ನ ಸಖತ್ ಇಷ್ಟಪಟ್ಟು ನಡೆಸಿಕೊಡುತ್ತಾರೆ. ‘ಹಣಕ್ಕಾಗಿ ನಾನು ಈ ಶೋ ಮಾಡುತ್ತಿಲ್ಲ’ ಎಂದು ಅವರು ಈ ಮೊದಲೇ ಹೇಳಿದ್ದರು. ಸ್ಪರ್ಧಿಗಳು ಹಾದಿ ತಪ್ಪಿದಾಗ ಅವರನ್ನು ತಿದ್ದುವ ಕೆಲಸ ಮಾಡಿದ್ದಾರೆ ಸುದೀಪ್. ಈ ವೇಳೆ ಅವರು ಬಿಗ್ ಬಾಸ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ನಾನು ಇಷ್ಟಪಟ್ಟು ನಡೆಸಿಕೊಡುತ್ತಿರುವ ಶೋ ಎಂದು ಸುದೀಪ್ ಅನೇಕ ಬಾರಿ ಹೇಳಿದ್ದಿದೆ. ಹೀಗಿರುವಾಗಲೇ ಅವರು ಬಿಗ್ ಬಾಸ್ ತೊರೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಬಿಗ್ ಬಾಸ್ ಜೊತೆ ಸುದೀಪ್ ಮಾಡಿಕೊಂಡ ಒಪ್ಪಂದ ಮುಗಿದಿದೆಯಂತೆ. ಈ ಕಾರಣಕ್ಕೆ ಸುದೀಪ್ ಈ ಶೋ ತೊರೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅವರಿಗೆ ಆ ರೀತಿ ಆಲೋಚನೆ ಸದ್ಯಕ್ಕಂತೂ ಬಂದಿಲ್ಲ. ಈ ಮೊದಲು ಕೂಡ ಒಪ್ಪಂದ ಪೂರ್ಣಗೊಂಡಿತ್ತು. ಈ ಒಪ್ಪಂದವನ್ನು ನವೀಕರಿಸಿಕೊಂಡು ಅವರು ಶೋ ನಡೆಸಿಕೊಡಲು ಬಂದಿದ್ದಾರೆ. ಈ ಬಾರಿಯೂ ಅವರು ಹಾಗೆಯೇ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

ಇತ್ತೀಚೆಗೆ ಬಿಗ್ ಬಾಸ್ ಕನ್ನಡದ 10ನೇ ಸೀಸನ್ ಪೂರ್ಣಗೊಳ್ಳುವಾಗ ಸುದೀಪ್ ಒಂದು ಮಾತನ್ನು ಹೇಳಿದ್ದರು. ‘ಮುಂದೆ ಬರುವ ಹೊಸ ಸೀಸನ್​ಗಳಿಗೂ ಪ್ರೀತಿ ತೋರಿಸಿ’ ಎಂದು ಕೋರಿಕೊಂಡಿದ್ದರು. ಈ ಮಾತನ್ನು ಅನೇಕರು ನೆನಪಿಸಿಕೊಳ್ಳುತ್ತಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿ ಜೊತೆ ಸುದೀಪ್​ಗೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ವಾಹಿನಿಯವರು ಕೂಡ ಸುದೀಪ್​ ಬಗ್ಗೆ ವಿಶೇಷ ಗೌರವ ಹೊಂದಿದ್ದಾರೆ. ಒಪ್ಪಂದ ಪೂರ್ಣಗೊಂಡಿದ್ದರೆ ಅದನ್ನು ನವೀಕರಿಸಿಕೊಂಡು ಮತ್ತೆ ಬರುತ್ತಾರೆ ಎನ್ನುವ ನಂಬಿಕೆಯಲ್ಲಿ ಫ್ಯಾನ್ಸ್ ಇದ್ದಾರೆ. ಸದ್ಯ ಹರಿದಾಡುತ್ತಿರುವ ಸುದ್ದಿ ಅಂತೆ-ಕಂತೆ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:34 am, Tue, 30 January 24

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್